ಸಾರ್ವತ್ರಿಕ ಚುನಾವಣೆ 2023: ಜಿಲ್ಲೆಯಲ್ಲಿ ಇಬ್ಬರು ಸಾಮಾನ್ಯ ವೀಕ್ಷಕರು, ಒಬ್ಬರು ಭದ್ರತಾ(ಪೊಲೀಸ್) ವೀಕ್ಷಕರು ಹಾಗೂ ನಾಲ್ಕು ಜನ ವೆಚ್ಚ ವೀಕ್ಷಕರ ನೇಮಕ

2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಭಾರತ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಇಬ್ಬರು ಐ.ಎ.ಎಸ್. ಅಧಿಕಾರಿಗಳನ್ನು ಸಾಮಾನ್ಯ ವೀಕ್ಷಕರನ್ನಾಗಿ, ಒಬ್ಬರು ಐ.ಪಿ.ಎಸ್. ಅಧಿಕಾರಿಯನ್ನು ಭದ್ರತಾ(ಪೊಲೀಸ್) ವೀಕ್ಷಕರನ್ನಾಗಿ ಹಾಗೂ ನಾಲ್ಕು ಜನ ಐ.ಆರ್.ಎಸ್. ಅಧಿಕಾರಿಗಳನ್ನು ವೆಚ್ಚ ವೀಕ್ಷಕರನ್ನಾಗಿ ನೇಮಕ ಮಾಡಿ ನಿಯೋಜಿಸಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

ಸಾಮಾನ್ಯ ವೀಕ್ಷಕರು, ಭದ್ರತಾ(ಪೊಲೀಸ್) ವೀಕ್ಷಕರು ಹಾಗೂ ವೆಚ್ಚ ವೀಕ್ಷಕರಿಗೆ ಹಂಚಿಕೆ ಮಾಡಿದ ವಿಧಾನಸಭಾ ಕ್ಷೇತ್ರ ಹಾಗೂ ಮೊಬೈಲ್ ಸಂಖ್ಯೆ ವಿವರ ಇಂತಿದೆ.

ಸಾಮಾನ್ಯ ವೀಕ್ಷಕರ ವಿವರ:

178-ಹೊಸಕೋಟೆ ವಿಧಾನಸಭಾ ಕ್ಷೇತ್ರ ಹಾಗೂ 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಡಿ.ರೊನಾಲ್ಡ್ ರೋಸ್(ಮೊ.ಸಂ.: 6363716513)

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಹಾಗೂ 181-ನೆಲಮಂಗಲ ವಿಧಾನಸಭಾ ಕ್ಷೇತ್ರಕ್ಕೆ ಶಿಲ್ಪ ಗುಪ್ತ (ಮೊ.ಸಂ.: 8618630558) ಸಾಮಾನ್ಯ ವೀಕ್ಷಕರಾಗಿ ನೇಮಿಸಲಾಗಿದೆ.

ಭದ್ರತಾ(ಪೊಲೀಸ್) ವೀಕ್ಷಕರ ವಿವರ:

ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಐ.ಪಿ.ಎಸ್. ಅಧಿಕಾರಿ ರೋಮಿಲ್ ಬಾನಿಯಾ ಅವರನ್ನು ಭದ್ರತಾ(ಪೊಲೀಸ್) ವೀಕ್ಷಕರನ್ನಾಗಿ ನೇಮಿಸಿದೆ.

ವೆಚ್ಚ ವೀಕ್ಷಕರ ವಿವರ:

178-ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಚಂದನ್ ದುತ್ತ(ಮೊ.ಸಂ.: 8088979205),

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಡಾ.ದಿನೇಶ್‌ಕುಮಾರ್ ಬಿಸೆನ್(ಮೊ.ಸಂ.: 8618854749),

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಅತುಲ್ ಪಾಂಡೆ(ಮೊ.ಸಂ.: 9019456827)

181-ನೆಲಮಂಗಲ ವಿಧಾನಸಭಾ ಕ್ಷೇತ್ರಕ್ಕೆ ರಾಮಚಂದ್ರನ್.ಜಿ(ಮೊ.ಸಂ.: 8088962561) ಅವರನ್ನು ಚುನಾವಣಾ ವೆಚ್ಚ ವೀಕ್ಷರನ್ನಾಗಿ ನೇಮಿಸಲಾಗಿದೆ.

ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಅಕ್ರಮವಾಗಿ ಹಣ ಸಾಗಾಟ ಮಾಡುವುದು, ಹಂಚುವುದು, ಅಕ್ರಮ ಮದ್ಯ, ಚಿನ್ನ, ಹಣ, ಇನ್ನಿತರ ವಸ್ತುಗಳ ಸಾಗಾಟ, ಹಣ ಹಂಚಿಕೆ ಮಾಡುವುದು, ಉಡುಗೊರೆ ನೀಡುವುದು ಕಂಡುಬಂದಲ್ಲಿ ಹಾಗೂ ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದ ಯಾವುದೇ ಅಹವಾಲುಗಳನ್ನು ಸಾರ್ವಜನಿಕರು ಸಂಬಂಧಪಟ್ಟ ವೆಚ್ಚ ವೀಕ್ಷಕರಿಗೆ ದೂರು ನೀಡಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

9 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

12 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

24 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago