ಕರ್ನಾಟಕ ಪಬ್ಲಿಕ್ ಎಗ್ಸಾಮಿನೇಷನ್ (ಭ್ರಷ್ಟಾಚಾರ ಮತ್ತು ಅಕ್ರಮ ವಿಧಾನಗಳ ತಡೆಗಟ್ಟುವಿಕೆ ಕ್ರಮಗಳು) ವಿಧೇಯಕ–2023ಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ವಿಧೇಯಕವನ್ನು ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಲಾಗಿದೆ. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್ಐ, ಸಹಾಯಕ ಪ್ರಾಧ್ಯಾಪಕರ ಹುದ್ದೆ, ಎಫ್.ಡಿ.ಎ ಸೇರಿದಂತೆ ಸರ್ಕಾರದ ಹಲವು ನೇಮಕಾತಿಗಳಲ್ಲಿ ವ್ಯಾಪಕವಾಗಿ ಅಕ್ರಮಗಳು ನಡೆದಿದ್ದವು ಎಂದು ಆರೋಪ ಮಾಡಿದ್ದಾರೆ.
ಇದರಿಂದ ವರ್ಷಾನುಗಟ್ಟಲೆಯಿಂದ ಪರೀಕ್ಷೆಗೆ ತಯಾರಿ ನಡೆಸಿ, ಪ್ರಾಮಾಣಿಕವಾಗಿ ಪರೀಕ್ಷೆ ಎದುರಿಸಿದ್ದ ಸಾವಿರಾರು ಅಭ್ಯರ್ಥಿಗಳು ಉದ್ಯೋಗದಿಂದ ವಂಚಿತರಾಗಿದ್ದರು. ಇಂತಹ ಅಕ್ರಮ, ಅವ್ಯವಹಾರವನ್ನು ತಡೆಗಟ್ಟಿ, ಅರ್ಹರಿಗೆ ಸರ್ಕಾರಿ ಉದ್ಯೋಗಗಳು ದೊರಕುವಂತೆ ಮಾಡಲು ಕಟ್ಟುನಿಟ್ಟಿನ ಪರೀಕ್ಷಾ ವಿಧಾನ, ಪಾರದರ್ಶಕ ನೇಮಕಾತಿ ಪ್ರಕ್ರಿಯೆಯ ಅಳವಡಿಕೆ ಮಾಡಲು ನೂತನ ಮಸೂದೆಯನ್ನು ಜಾರಿಗೆ ತರಲು ಉದ್ದೇಶಿಸಿದ್ದೇವೆ ಎಂದರು.
ಇದರ ಮೊದಲ ಹಂತವಾಗಿ ವಿಧೇಯಕವನ್ನು ಸಚಿವ ಸಂಪುಟದ ಮುಂದಿಟ್ಟು ಅನುಮೋದನೆಯನ್ನು ಪಡೆದಿದ್ದೇವೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಷ್ಟೇ ಅಲ್ಲ, ಅರ್ಹರಿಗೆ ಮಾತ್ರ ಉದ್ಯೋಗ ಸಿಗಬೇಕು ಎಂಬುದೂ ನಮ್ಮ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…