ಕರ್ನಾಟಕ ಪಬ್ಲಿಕ್ ಎಗ್ಸಾಮಿನೇಷನ್ (ಭ್ರಷ್ಟಾಚಾರ ಮತ್ತು ಅಕ್ರಮ ವಿಧಾನಗಳ ತಡೆಗಟ್ಟುವಿಕೆ ಕ್ರಮಗಳು) ವಿಧೇಯಕ–2023ಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ವಿಧೇಯಕವನ್ನು ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಲಾಗಿದೆ. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್ಐ, ಸಹಾಯಕ ಪ್ರಾಧ್ಯಾಪಕರ ಹುದ್ದೆ, ಎಫ್.ಡಿ.ಎ ಸೇರಿದಂತೆ ಸರ್ಕಾರದ ಹಲವು ನೇಮಕಾತಿಗಳಲ್ಲಿ ವ್ಯಾಪಕವಾಗಿ ಅಕ್ರಮಗಳು ನಡೆದಿದ್ದವು ಎಂದು ಆರೋಪ ಮಾಡಿದ್ದಾರೆ.
ಇದರಿಂದ ವರ್ಷಾನುಗಟ್ಟಲೆಯಿಂದ ಪರೀಕ್ಷೆಗೆ ತಯಾರಿ ನಡೆಸಿ, ಪ್ರಾಮಾಣಿಕವಾಗಿ ಪರೀಕ್ಷೆ ಎದುರಿಸಿದ್ದ ಸಾವಿರಾರು ಅಭ್ಯರ್ಥಿಗಳು ಉದ್ಯೋಗದಿಂದ ವಂಚಿತರಾಗಿದ್ದರು. ಇಂತಹ ಅಕ್ರಮ, ಅವ್ಯವಹಾರವನ್ನು ತಡೆಗಟ್ಟಿ, ಅರ್ಹರಿಗೆ ಸರ್ಕಾರಿ ಉದ್ಯೋಗಗಳು ದೊರಕುವಂತೆ ಮಾಡಲು ಕಟ್ಟುನಿಟ್ಟಿನ ಪರೀಕ್ಷಾ ವಿಧಾನ, ಪಾರದರ್ಶಕ ನೇಮಕಾತಿ ಪ್ರಕ್ರಿಯೆಯ ಅಳವಡಿಕೆ ಮಾಡಲು ನೂತನ ಮಸೂದೆಯನ್ನು ಜಾರಿಗೆ ತರಲು ಉದ್ದೇಶಿಸಿದ್ದೇವೆ ಎಂದರು.
ಇದರ ಮೊದಲ ಹಂತವಾಗಿ ವಿಧೇಯಕವನ್ನು ಸಚಿವ ಸಂಪುಟದ ಮುಂದಿಟ್ಟು ಅನುಮೋದನೆಯನ್ನು ಪಡೆದಿದ್ದೇವೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಷ್ಟೇ ಅಲ್ಲ, ಅರ್ಹರಿಗೆ ಮಾತ್ರ ಉದ್ಯೋಗ ಸಿಗಬೇಕು ಎಂಬುದೂ ನಮ್ಮ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…