ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಮುಖಂಡರು, ಸಾಲುಮರದ ತಿಮ್ಮಕ್ಕ ಸಸಿಗಳನ್ನು ಮಕ್ಕಳೆಂದುಕೊಂಡು ಬೆಳೆಸಿ ಪೋಷಿಸಿದರು. ಪರಿಸರ ಸಂರಕ್ಷಣೆಯಲ್ಲಿ ಅವರು ಮಾಡಿರುವ ಸಾಧನೆ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಸಾಲು ಮರದ ತಿಮ್ಮಕ್ಕ ಅವರ ಪರಿಸರ ಸಂರಕ್ಷಣೆಯ ಸಂದೇಶವು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ. ಸಾಲುಮರದ ತಿಮ್ಮಕ್ಕ ಅವರ ಪರಿಸರ ಸಂರಕ್ಷಣೆ, ದೃಢತೆ, ಮತ್ತು ಬದ್ಧತೆಯನ್ನು ಜನರು ಎಂದಿಗೂ ಮರೆಯುವುದಿಲ್ಲ ಎಂದರು.
ಸಾಲುಮರದ ತಿಮ್ಮಕ್ಕ ಅವರ ಸೇವಾ ಕಾರ್ಯವನ್ನು ಗೌರವಿಸಿ ರಾಷ್ಟ್ರೀಯ ನಾಗರಿಕ ಪ್ರಶಸ್ತಿ, ಪದ್ಮಶ್ರೀ, ಕರ್ನಾಟಕ ರಾಜ್ಯೋತ್ಸವ, ನಾಡೋಜ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಂದ ಪುರಸ್ಕೃತರ ಮಾಡಿದ್ದಾರೆ. ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ಸರ್ಕಾರದಿಂದ ‘ಪರಿಸರ ರಾಯಭಾರಿ’ಯಾಗಿ ನೇಮಕಗೊಂಡರು. ಸಾಲು ಮರದ ತಿಮ್ಮಕ್ಕ ಅವರ ಸಾಧನೆಗಳನ್ನು ಗೌರವಿಸಬೆಕಾಗಿದೆ. ಅವರ ಹೆಸರಲ್ಲಿ ಪರಿಸರ ಉಳಿಸಿ, ಬೆಳೆಸಿ, ಸಂರಕ್ಷಣೆ ಮಾಡುವ ಹಲವು ಯೋಜನೆಗಳನ್ನು ಸರ್ಕಾರ ಮತ್ತು ಸಾರ್ವಜನಿಕರು ಮಾಡಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ, ನಗರಸಭಾ ಮಾಜಿ ಸದಸ್ಯ ಜಿ.ಸತ್ಯನಾರಾಯಣ, ಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ.ಪಿ.ಆಂಜನೇಯ, ಟ್ರಸ್ಟಿ ಸುಲೋಚನಾ ವೆಂಕಟರೆಡ್ಡಿ, ಕನ್ನಡಪರ ಹಿರಿಯ ಹೋರಾಟಗಾರುಗಳಾದ ಸಂಜೀವ್ ನಾಯಕ್, ಗುರುರಾಜಪ್ಪ, ನವೋದಯ ವಿದ್ಯಾಲಯ ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ ನಾಗರತ್ನಮ್ಮ, ಸಿ.ಅಣ್ಣಯ್ಯ, ಶ್ರೀನಿವಾಸಲು, ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ವಾಣಿಗಾರಹಳ್ಳಿ ಶ್ರೀನಿವಾಸ್ ಮುಂತಾದವರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…