ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಮುಖಂಡರು, ಸಾಲುಮರದ ತಿಮ್ಮಕ್ಕ ಸಸಿಗಳನ್ನು ಮಕ್ಕಳೆಂದುಕೊಂಡು ಬೆಳೆಸಿ ಪೋಷಿಸಿದರು. ಪರಿಸರ ಸಂರಕ್ಷಣೆಯಲ್ಲಿ ಅವರು ಮಾಡಿರುವ ಸಾಧನೆ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಸಾಲು ಮರದ ತಿಮ್ಮಕ್ಕ ಅವರ ಪರಿಸರ ಸಂರಕ್ಷಣೆಯ ಸಂದೇಶವು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ. ಸಾಲುಮರದ ತಿಮ್ಮಕ್ಕ ಅವರ ಪರಿಸರ ಸಂರಕ್ಷಣೆ, ದೃಢತೆ, ಮತ್ತು ಬದ್ಧತೆಯನ್ನು ಜನರು ಎಂದಿಗೂ ಮರೆಯುವುದಿಲ್ಲ ಎಂದರು.

ಸಾಲುಮರದ ತಿಮ್ಮಕ್ಕ ಅವರ ಸೇವಾ ಕಾರ್ಯವನ್ನು ಗೌರವಿಸಿ ರಾಷ್ಟ್ರೀಯ ನಾಗರಿಕ ಪ್ರಶಸ್ತಿ, ಪದ್ಮಶ್ರೀ, ಕರ್ನಾಟಕ ರಾಜ್ಯೋತ್ಸವ, ನಾಡೋಜ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಂದ ಪುರಸ್ಕೃತರ ಮಾಡಿದ್ದಾರೆ. ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ‌ಕರ್ನಾಟಕ ಸರ್ಕಾರದಿಂದ ‘ಪರಿಸರ ರಾಯಭಾರಿ’ಯಾಗಿ ನೇಮಕಗೊಂಡರು. ಸಾಲು ಮರದ ತಿಮ್ಮಕ್ಕ ಅವರ ಸಾಧನೆಗಳನ್ನು ಗೌರವಿಸಬೆಕಾಗಿದೆ. ಅವರ ಹೆಸರಲ್ಲಿ ಪರಿಸರ ಉಳಿಸಿ, ಬೆಳೆಸಿ, ಸಂರಕ್ಷಣೆ ಮಾಡುವ ಹಲವು ಯೋಜನೆಗಳನ್ನು ಸರ್ಕಾರ ಮತ್ತು ಸಾರ್ವಜನಿಕರು ಮಾಡಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ, ನಗರಸಭಾ ಮಾಜಿ ಸದಸ್ಯ ಜಿ.ಸತ್ಯನಾರಾಯಣ, ಕನ್ನಡ ಜಾಗೃತ ಪರಿಷತ್ತು  ಕಾರ್ಯದರ್ಶಿ ಡಿ.ಪಿ.ಆಂಜನೇಯ, ಟ್ರಸ್ಟಿ ಸುಲೋಚನಾ ವೆಂಕಟರೆಡ್ಡಿ, ಕನ್ನಡಪರ ಹಿರಿಯ ಹೋರಾಟಗಾರುಗಳಾದ ಸಂಜೀವ್ ನಾಯಕ್, ಗುರುರಾಜಪ್ಪ, ನವೋದಯ ವಿದ್ಯಾಲಯ ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ ನಾಗರತ್ನಮ್ಮ, ಸಿ.ಅಣ್ಣಯ್ಯ, ಶ್ರೀನಿವಾಸಲು,   ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ವಾಣಿಗಾರಹಳ್ಳಿ ಶ್ರೀನಿವಾಸ್ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

9 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

9 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

12 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago