ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಮುಖಂಡರು, ಸಾಲುಮರದ ತಿಮ್ಮಕ್ಕ ಸಸಿಗಳನ್ನು ಮಕ್ಕಳೆಂದುಕೊಂಡು ಬೆಳೆಸಿ ಪೋಷಿಸಿದರು. ಪರಿಸರ ಸಂರಕ್ಷಣೆಯಲ್ಲಿ ಅವರು ಮಾಡಿರುವ ಸಾಧನೆ ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಸಾಲು ಮರದ ತಿಮ್ಮಕ್ಕ ಅವರ ಪರಿಸರ ಸಂರಕ್ಷಣೆಯ ಸಂದೇಶವು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ. ಸಾಲುಮರದ ತಿಮ್ಮಕ್ಕ ಅವರ ಪರಿಸರ ಸಂರಕ್ಷಣೆ, ದೃಢತೆ, ಮತ್ತು ಬದ್ಧತೆಯನ್ನು ಜನರು ಎಂದಿಗೂ ಮರೆಯುವುದಿಲ್ಲ ಎಂದರು.
ಸಾಲುಮರದ ತಿಮ್ಮಕ್ಕ ಅವರ ಸೇವಾ ಕಾರ್ಯವನ್ನು ಗೌರವಿಸಿ ರಾಷ್ಟ್ರೀಯ ನಾಗರಿಕ ಪ್ರಶಸ್ತಿ, ಪದ್ಮಶ್ರೀ, ಕರ್ನಾಟಕ ರಾಜ್ಯೋತ್ಸವ, ನಾಡೋಜ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಂದ ಪುರಸ್ಕೃತರ ಮಾಡಿದ್ದಾರೆ. ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ಸರ್ಕಾರದಿಂದ ‘ಪರಿಸರ ರಾಯಭಾರಿ’ಯಾಗಿ ನೇಮಕಗೊಂಡರು. ಸಾಲು ಮರದ ತಿಮ್ಮಕ್ಕ ಅವರ ಸಾಧನೆಗಳನ್ನು ಗೌರವಿಸಬೆಕಾಗಿದೆ. ಅವರ ಹೆಸರಲ್ಲಿ ಪರಿಸರ ಉಳಿಸಿ, ಬೆಳೆಸಿ, ಸಂರಕ್ಷಣೆ ಮಾಡುವ ಹಲವು ಯೋಜನೆಗಳನ್ನು ಸರ್ಕಾರ ಮತ್ತು ಸಾರ್ವಜನಿಕರು ಮಾಡಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ, ನಗರಸಭಾ ಮಾಜಿ ಸದಸ್ಯ ಜಿ.ಸತ್ಯನಾರಾಯಣ, ಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ.ಪಿ.ಆಂಜನೇಯ, ಟ್ರಸ್ಟಿ ಸುಲೋಚನಾ ವೆಂಕಟರೆಡ್ಡಿ, ಕನ್ನಡಪರ ಹಿರಿಯ ಹೋರಾಟಗಾರುಗಳಾದ ಸಂಜೀವ್ ನಾಯಕ್, ಗುರುರಾಜಪ್ಪ, ನವೋದಯ ವಿದ್ಯಾಲಯ ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ ನಾಗರತ್ನಮ್ಮ, ಸಿ.ಅಣ್ಣಯ್ಯ, ಶ್ರೀನಿವಾಸಲು, ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ವಾಣಿಗಾರಹಳ್ಳಿ ಶ್ರೀನಿವಾಸ್ ಮುಂತಾದವರು ಭಾಗವಹಿಸಿದ್ದರು.
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…