ಸಾಲ ತೀರಿಸಿಲ್ಲವೆಂದು‌‌ ಮನೆಗೆ ಬೀಗ ಜಡಿದ ಬ್ಯಾಂಕ್: ಬ್ಯಾಂಕ್ ನ ನಿರ್ದಾಕ್ಷಿಣ್ಯ ಕ್ರಮಕ್ಕೆ ಊಟ, ನೀರು, ಬಟ್ಟೆ ಇಲ್ಲದೇ ಬೀದಿಗೆ ಬಿದ್ದ 12 ಸದಸ್ಯರ ಕುಟುಂಬ

ಆ ಕುಟುಂಬದಲ್ಲಿ ಕಿತ್ತು ತಿನ್ನುವ ಬಡತನ, ದುಡಿಯುವ ಯಜಮಾನನಿಗೆ ಹಠಾತ್‌ ಆಗಿ ಬಂದ ಕಾಯಿಲೆ, ಮಕ್ಕಳು ಮರಿಗಳನ್ನ ಸಾಕಿ ಜೀವನ ನಡೆಸಲು ಸಾಲದ‌ ಮೊರೆಹೋದ ಬಡ ಕುಟುಂಬ. ಆಗ ವ್ಯವಹಾರಕ್ಕಾಗಿ ಮನೆಯನ್ನ ಅಡವಿಟ್ಟು ಬ್ಯಾಂಕ್ ಒಂದರಲ್ಲಿ ಸಾಲ ಪಡೆಯಲಾಯಿತು. ಕೊರೊನಾ ಮಹಾಮಾರಿಯಿಂದ ಸಮಯಕ್ಕೆ ಸರಿಯಾಗಿ ಬ್ಯಾಂಕ್ ಸಾಲ ತೀರಿಸಲು ಸಾಧ್ಯವಾಗಿಲ್ಲ.

ಸಾಲ ಜಮೆಯಾಗದ ಹಿನ್ನಲೆ ಬ್ಯಾಂಕ್ ಸಿಬ್ಬಂದಿ ಮನೆಗೆ ಬೀಗ ಹಾಕಿದ್ದಾರೆ, ಬ್ಯಾಂಕ್ ನವರ ನಿರ್ದಾಕ್ಷಿಣ್ಯ ಕ್ರಮದಿಂದ 12 ಜನರ ದೊಡ್ಡ ಕುಟುಂಬ ಬೀದಿಗೆ ಬಂದಿದೆ, ಹಸಿದ ಕಂದಮ್ಮಗಳಿಗೆ ಊಟ ಕೊಡಲಾಗದೆ, ರೋಗಿಗಳಿಗೆ ಔಷದೋಪಚಾರ ಮಾಡಲಾಗದೆ ಇಡೀ ಕುಟುಂಬ ಕಣ್ಣೀರು ಹಾಕುತ್ತಿದೆ.

ನಗರದ ‘ಡಿ’ ಕ್ರಾಸ್ ಬಳಿಯ ಕುಟುಂಬದ ಸ್ಥಿತಿಯನ್ನ ನೋಡಿದ್ದಾರೆ ಎಂಥಾವರಿಗೂ ಕಣ್ಣೀರು ಬರುತ್ತದೆ, 12 ಜನರಿಗೆ ಅಶ್ರಯ ಕೊಟ್ಟ ಮನೆಗೆ ಸದ್ಯ ಬೀಗ ಹಾಕಲಾಗಿದೆ, ಮನೆಯ ಸದಸ್ಯರೆಲ್ಲರು ಮನೆಯ ಮುಂದೆ ಕುಳಿತು ಕಣ್ಣೀರು ಹಾಕುತ್ತಿದ್ದಾರೆ. ಬ್ಯಾಂಕ್ ನಲ್ಲಿ ಮಾಡಲಾದ ಸಾಲವನ್ನ ತೀರಿಸಲಾಗದೆ ಇವತ್ತು ಇಡೀ ಕುಟುಂಬವೇ ಬೀದಿಗೆ ಬಂದಿದೆ.

ಕುಟುಂಬದ ಮುಖ್ಯಸ್ಥ ಸತೀಶ್, ಮಿಲ್ಟ್ರಿ ಹೊಟೇಲ್ ನಡೆಸುತ್ತಿದ್ದ, ಕೊರೊನಾ ಬಂದ ನಂತರ ಮಿಲ್ಟ್ರಿ ಹೊಟೇಲ್ ವ್ಯಾಪಾರ ಬಂದ್ ಆಗಿತು, ಮಿಲ್ಟ್ರಿ ಹೊಟೇಲ್ ವ್ಯವಹಾರ ನಂಬಿ ಬೆಂಗಳೂರಿನ ವಾಸು ಫೈನಾನ್ಸ್ ನಲ್ಲಿ ಸಾಲ ಮಾಡಿದ್ದರು, ಹೊಟೇಲ್ ಬಂದ್ ಆಗಿದ್ದರಿಂದ ಸಾಲ ತೀರಿಸಲಾಗಿಲ್ಲ, ಸಾಧ್ಯವಾದ ಮಟ್ಟಿಗೆ ಸಾಲವನ್ನ ತೀರಿಸಿದ್ದಾರೆ. ಕೋರ್ಟ್ ಆದೇಶದೊಂದಿಗೆ ಬಂದ ಬ್ಯಾಂಕ್ ಸಿಬ್ಬಂದಿ ಮನೆಗೆ ಬೀಗ ಹಾಕಿ ಸೀಜ್ ಮಾಡಿದ್ದಾರೆ.

10 ದಿನ ಸಮಯ ಕೊಡಿ ಎಂದು ಕುಟುಂಬಸ್ಥರು ಅಂಗಲಾಚಿದ್ದಾರೆ, ಆದರೆ ಹಣದ ಮುಂದೆ ಮನವೀಯತೆಗೆ ಬೆಲೆ ಕೊಡದ ಬ್ಯಾಂಕ್ ನವರು ಮನೆಗೆ ಬೀಗ ಹಾಕಿದ್ದಾರೆ. ಅಶ್ರಯ ಕಳೆದುಕೊಂಡ ಮನೆಯ ಸದಸ್ಯರಿಗೆ ಈಗ ಮನೆಯ ಮುಂಭಾಗದ ರಸ್ತೆಯೇ ಆಶ್ರಯ ತಾಣ , ನೀರನ್ನು ಸಹ ಪಕ್ಕದ ಮನೆಯವರನ್ನ ಕೇಳಿಬೇಕಾದ ಪರಿಸ್ಥಿತಿ, ಹಸಿದ ಮಕ್ಕಳಿಗೆ ಏನು ಕೋಡಬೇಕೆಂಬುದು ತಿಳಿಯದೆ ಅಸಹಾಯಕ ಸ್ಥಿತಿಯಲ್ಲಿದ್ದಾರೆ, ಅನಾರೋಗ್ಯದಿಂದ ಬಳಲುತ್ತಿರುವರಿಗೆ ಔಷದೋಪಚಾರ ಮಾಡಲಾಗದ ಸಂಕಷ್ಟ ಇಡೀ ಕುಟುಂಬವನ್ನೇ ಕಣ್ಣೀರಲ್ಲಿ ಕೈತೊಳೆಯವಂತೆ ಮಾಡಿದೆ.

ನೆಂಟರಿಷ್ಟರು ಒಂದೆರಡು ದಿನ ಊಟ, ನೀರು, ಆಶ್ರಯ ನೀಡಬಹುದು, ಮೂರನೇ ದಿನ ಅವರಿಗೂ ಹೊರೆ ಆಗುತ್ತಾರೆ. ದುಡಿಯುವ ಮನೆ ಯಜಮಾನ ಹಾಸಿಗೆ ಹಿಡಿದಿದ್ದಾರೆ. ಬಾಡಿಗೆ ಮನೆ ಮಾಡಲು ಸದ್ಯ ಹಣನೂ ಇಲ್ಲ. ಸದ್ಯ ಈ ಬಡ ಕುಟುಂಬ ತೀವ್ರ ಅತಂತ್ರ ಸ್ಥಿತಿಯಲ್ಲಿ ಇದೆ.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

5 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

6 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

8 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

9 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

9 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

11 hours ago