ಸಾಲ ತೀರಿಸಿಲ್ಲವೆಂದು‌‌ ಮನೆಗೆ ಬೀಗ ಜಡಿದ ಬ್ಯಾಂಕ್: ಬ್ಯಾಂಕ್ ನ ನಿರ್ದಾಕ್ಷಿಣ್ಯ ಕ್ರಮಕ್ಕೆ ಊಟ, ನೀರು, ಬಟ್ಟೆ ಇಲ್ಲದೇ ಬೀದಿಗೆ ಬಿದ್ದ 12 ಸದಸ್ಯರ ಕುಟುಂಬ

ಆ ಕುಟುಂಬದಲ್ಲಿ ಕಿತ್ತು ತಿನ್ನುವ ಬಡತನ, ದುಡಿಯುವ ಯಜಮಾನನಿಗೆ ಹಠಾತ್‌ ಆಗಿ ಬಂದ ಕಾಯಿಲೆ, ಮಕ್ಕಳು ಮರಿಗಳನ್ನ ಸಾಕಿ ಜೀವನ ನಡೆಸಲು ಸಾಲದ‌ ಮೊರೆಹೋದ ಬಡ ಕುಟುಂಬ. ಆಗ ವ್ಯವಹಾರಕ್ಕಾಗಿ ಮನೆಯನ್ನ ಅಡವಿಟ್ಟು ಬ್ಯಾಂಕ್ ಒಂದರಲ್ಲಿ ಸಾಲ ಪಡೆಯಲಾಯಿತು. ಕೊರೊನಾ ಮಹಾಮಾರಿಯಿಂದ ಸಮಯಕ್ಕೆ ಸರಿಯಾಗಿ ಬ್ಯಾಂಕ್ ಸಾಲ ತೀರಿಸಲು ಸಾಧ್ಯವಾಗಿಲ್ಲ.

ಸಾಲ ಜಮೆಯಾಗದ ಹಿನ್ನಲೆ ಬ್ಯಾಂಕ್ ಸಿಬ್ಬಂದಿ ಮನೆಗೆ ಬೀಗ ಹಾಕಿದ್ದಾರೆ, ಬ್ಯಾಂಕ್ ನವರ ನಿರ್ದಾಕ್ಷಿಣ್ಯ ಕ್ರಮದಿಂದ 12 ಜನರ ದೊಡ್ಡ ಕುಟುಂಬ ಬೀದಿಗೆ ಬಂದಿದೆ, ಹಸಿದ ಕಂದಮ್ಮಗಳಿಗೆ ಊಟ ಕೊಡಲಾಗದೆ, ರೋಗಿಗಳಿಗೆ ಔಷದೋಪಚಾರ ಮಾಡಲಾಗದೆ ಇಡೀ ಕುಟುಂಬ ಕಣ್ಣೀರು ಹಾಕುತ್ತಿದೆ.

ನಗರದ ‘ಡಿ’ ಕ್ರಾಸ್ ಬಳಿಯ ಕುಟುಂಬದ ಸ್ಥಿತಿಯನ್ನ ನೋಡಿದ್ದಾರೆ ಎಂಥಾವರಿಗೂ ಕಣ್ಣೀರು ಬರುತ್ತದೆ, 12 ಜನರಿಗೆ ಅಶ್ರಯ ಕೊಟ್ಟ ಮನೆಗೆ ಸದ್ಯ ಬೀಗ ಹಾಕಲಾಗಿದೆ, ಮನೆಯ ಸದಸ್ಯರೆಲ್ಲರು ಮನೆಯ ಮುಂದೆ ಕುಳಿತು ಕಣ್ಣೀರು ಹಾಕುತ್ತಿದ್ದಾರೆ. ಬ್ಯಾಂಕ್ ನಲ್ಲಿ ಮಾಡಲಾದ ಸಾಲವನ್ನ ತೀರಿಸಲಾಗದೆ ಇವತ್ತು ಇಡೀ ಕುಟುಂಬವೇ ಬೀದಿಗೆ ಬಂದಿದೆ.

ಕುಟುಂಬದ ಮುಖ್ಯಸ್ಥ ಸತೀಶ್, ಮಿಲ್ಟ್ರಿ ಹೊಟೇಲ್ ನಡೆಸುತ್ತಿದ್ದ, ಕೊರೊನಾ ಬಂದ ನಂತರ ಮಿಲ್ಟ್ರಿ ಹೊಟೇಲ್ ವ್ಯಾಪಾರ ಬಂದ್ ಆಗಿತು, ಮಿಲ್ಟ್ರಿ ಹೊಟೇಲ್ ವ್ಯವಹಾರ ನಂಬಿ ಬೆಂಗಳೂರಿನ ವಾಸು ಫೈನಾನ್ಸ್ ನಲ್ಲಿ ಸಾಲ ಮಾಡಿದ್ದರು, ಹೊಟೇಲ್ ಬಂದ್ ಆಗಿದ್ದರಿಂದ ಸಾಲ ತೀರಿಸಲಾಗಿಲ್ಲ, ಸಾಧ್ಯವಾದ ಮಟ್ಟಿಗೆ ಸಾಲವನ್ನ ತೀರಿಸಿದ್ದಾರೆ. ಕೋರ್ಟ್ ಆದೇಶದೊಂದಿಗೆ ಬಂದ ಬ್ಯಾಂಕ್ ಸಿಬ್ಬಂದಿ ಮನೆಗೆ ಬೀಗ ಹಾಕಿ ಸೀಜ್ ಮಾಡಿದ್ದಾರೆ.

10 ದಿನ ಸಮಯ ಕೊಡಿ ಎಂದು ಕುಟುಂಬಸ್ಥರು ಅಂಗಲಾಚಿದ್ದಾರೆ, ಆದರೆ ಹಣದ ಮುಂದೆ ಮನವೀಯತೆಗೆ ಬೆಲೆ ಕೊಡದ ಬ್ಯಾಂಕ್ ನವರು ಮನೆಗೆ ಬೀಗ ಹಾಕಿದ್ದಾರೆ. ಅಶ್ರಯ ಕಳೆದುಕೊಂಡ ಮನೆಯ ಸದಸ್ಯರಿಗೆ ಈಗ ಮನೆಯ ಮುಂಭಾಗದ ರಸ್ತೆಯೇ ಆಶ್ರಯ ತಾಣ , ನೀರನ್ನು ಸಹ ಪಕ್ಕದ ಮನೆಯವರನ್ನ ಕೇಳಿಬೇಕಾದ ಪರಿಸ್ಥಿತಿ, ಹಸಿದ ಮಕ್ಕಳಿಗೆ ಏನು ಕೋಡಬೇಕೆಂಬುದು ತಿಳಿಯದೆ ಅಸಹಾಯಕ ಸ್ಥಿತಿಯಲ್ಲಿದ್ದಾರೆ, ಅನಾರೋಗ್ಯದಿಂದ ಬಳಲುತ್ತಿರುವರಿಗೆ ಔಷದೋಪಚಾರ ಮಾಡಲಾಗದ ಸಂಕಷ್ಟ ಇಡೀ ಕುಟುಂಬವನ್ನೇ ಕಣ್ಣೀರಲ್ಲಿ ಕೈತೊಳೆಯವಂತೆ ಮಾಡಿದೆ.

ನೆಂಟರಿಷ್ಟರು ಒಂದೆರಡು ದಿನ ಊಟ, ನೀರು, ಆಶ್ರಯ ನೀಡಬಹುದು, ಮೂರನೇ ದಿನ ಅವರಿಗೂ ಹೊರೆ ಆಗುತ್ತಾರೆ. ದುಡಿಯುವ ಮನೆ ಯಜಮಾನ ಹಾಸಿಗೆ ಹಿಡಿದಿದ್ದಾರೆ. ಬಾಡಿಗೆ ಮನೆ ಮಾಡಲು ಸದ್ಯ ಹಣನೂ ಇಲ್ಲ. ಸದ್ಯ ಈ ಬಡ ಕುಟುಂಬ ತೀವ್ರ ಅತಂತ್ರ ಸ್ಥಿತಿಯಲ್ಲಿ ಇದೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

11 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

13 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

13 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

13 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

18 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

19 hours ago