ದೊಡ್ಡಬಳ್ಳಾಪುರ:ಸಾಲ ಬಾಧೆ ತಾಳಲಾರದೆ ವ್ಯಕ್ತಿಯೊಬ್ಬರು ನೇರಳೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ರಘುನಾಥಪುರ ಬಳಿ ನಡೆದಿದೆ.
ಗಂಗರಾಜು ರಘುನಾಥಪುರ ಬಳಿಯ ಇಂಡೇನಾ ಇಂಡಿಯಾ ಎಂಬ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿ ಸುಮಾರು 10 ವರ್ಷಗಳಿಂದ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕೌಟುಂಬಿಕ ಸಮಸ್ಯೆಗಳಿಂದಾಗಿ ಕಾರ್ಖಾನೆಯಲ್ಲಿ ಒಪ್ಪಿಗೆ ಪಡೆಯದೆ ಒಂದು ವಾರ ರಜೆ ಹಾಕಿದ್ದ ಕಾರಣಕ್ಕೆ ಕಂಪನಿಯು 2022 ರಲ್ಲಿ ಆತನಿಂದ ಕೆಲಸಕ್ಕೆ ಬಲವಂತವಾಗಿ ರಾಜೀನಾಮೆ ಪಡೆದು ಕೆಲಸದಿಂದ ತೆಗೆದುಹಾಕಲಾಗಿತ್ತು ಎಂಬ ಆರೋಪಗಳು ಕೇಳಿ ಬಂದಿವೆ.
ಕೆಲಸ ಕಳೆದುಕೊಂಡ ಮೃತ ಗಂಗರಾಜ ಕೆಲಸ ಸಿಗದೆ ತನ್ನ ಸ್ವಂತ ಮನೆಯನ್ನು ಮಾರಿಕೊಂಡು, ಹೆಂಡತಿಯ ತವರು ಮನೆಯಾದ ನೆಲಮಂಗಲ ತಾಲ್ಲೂಕಿನ ತ್ಯಾಗದಹಳ್ಳಿಯಲ್ಲಿ ವಾಸ ಮಾಡುತ್ತಿದ್ದ, ಸಂಸಾರದ ನಿರ್ವಹಣೆಗಾಗಿ ಪರದಾಡುತ್ತಿದ್ದ. ಅತಿಯಾದ ಸಾಲ ಮಾಡಿಕೊಂಡಿದ್ದು, ಸಾಲ ಬಾಧೆ ತಾಳಲಾರದೆ ಇಂದು ಮುಂಜಾನೆ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಮೃತ ಗಂಗರಾಜು ಅವರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…