ದೊಡ್ಡಬಳ್ಳಾಪುರ:ಸಾಲ ಬಾಧೆ ತಾಳಲಾರದೆ ವ್ಯಕ್ತಿಯೊಬ್ಬರು ನೇರಳೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ರಘುನಾಥಪುರ ಬಳಿ ನಡೆದಿದೆ.
ಗಂಗರಾಜು ರಘುನಾಥಪುರ ಬಳಿಯ ಇಂಡೇನಾ ಇಂಡಿಯಾ ಎಂಬ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿ ಸುಮಾರು 10 ವರ್ಷಗಳಿಂದ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕೌಟುಂಬಿಕ ಸಮಸ್ಯೆಗಳಿಂದಾಗಿ ಕಾರ್ಖಾನೆಯಲ್ಲಿ ಒಪ್ಪಿಗೆ ಪಡೆಯದೆ ಒಂದು ವಾರ ರಜೆ ಹಾಕಿದ್ದ ಕಾರಣಕ್ಕೆ ಕಂಪನಿಯು 2022 ರಲ್ಲಿ ಆತನಿಂದ ಕೆಲಸಕ್ಕೆ ಬಲವಂತವಾಗಿ ರಾಜೀನಾಮೆ ಪಡೆದು ಕೆಲಸದಿಂದ ತೆಗೆದುಹಾಕಲಾಗಿತ್ತು ಎಂಬ ಆರೋಪಗಳು ಕೇಳಿ ಬಂದಿವೆ.
ಕೆಲಸ ಕಳೆದುಕೊಂಡ ಮೃತ ಗಂಗರಾಜ ಕೆಲಸ ಸಿಗದೆ ತನ್ನ ಸ್ವಂತ ಮನೆಯನ್ನು ಮಾರಿಕೊಂಡು, ಹೆಂಡತಿಯ ತವರು ಮನೆಯಾದ ನೆಲಮಂಗಲ ತಾಲ್ಲೂಕಿನ ತ್ಯಾಗದಹಳ್ಳಿಯಲ್ಲಿ ವಾಸ ಮಾಡುತ್ತಿದ್ದ, ಸಂಸಾರದ ನಿರ್ವಹಣೆಗಾಗಿ ಪರದಾಡುತ್ತಿದ್ದ. ಅತಿಯಾದ ಸಾಲ ಮಾಡಿಕೊಂಡಿದ್ದು, ಸಾಲ ಬಾಧೆ ತಾಳಲಾರದೆ ಇಂದು ಮುಂಜಾನೆ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಮೃತ ಗಂಗರಾಜು ಅವರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…