Categories: Home

ಸಾಲ ಬಾಧೆ: ನೇಣಿಗೆ ಶರಣಾದ ವ್ಯಕ್ತಿ

ದೊಡ್ಡಬಳ್ಳಾಪುರ:ಸಾಲ ಬಾಧೆ ತಾಳಲಾರದೆ ವ್ಯಕ್ತಿಯೊಬ್ಬರು ನೇರಳೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ರಘುನಾಥಪುರ ಬಳಿ ನಡೆದಿದೆ.

ರಘುನಾಥಪುರ ನಿವಾಸಿ ಗಂಗರಾಜು (40), ಆತ್ಮಹತ್ಯೆ ಶರಣಾದ ಮೃತ ದುರ್ದೈವಿ.

ಗಂಗರಾಜು ರಘುನಾಥಪುರ ಬಳಿಯ ಇಂಡೇನಾ ಇಂಡಿಯಾ ಎಂಬ‌ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿ ಸುಮಾರು 10 ವರ್ಷಗಳಿಂದ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂದು ಮೂಲಗಳಿಂದ ತಿಳಿದು ಬಂದಿದೆ.

ಕೌಟುಂಬಿಕ ಸಮಸ್ಯೆಗಳಿಂದಾಗಿ ಕಾರ್ಖಾನೆಯಲ್ಲಿ ಒಪ್ಪಿಗೆ ಪಡೆಯದೆ ಒಂದು ವಾರ ರಜೆ ಹಾಕಿದ್ದ ಕಾರಣಕ್ಕೆ ಕಂಪನಿಯು 2022 ರಲ್ಲಿ ಆತನಿಂದ ಕೆಲಸಕ್ಕೆ ಬಲವಂತವಾಗಿ ರಾಜೀನಾಮೆ ಪಡೆದು ಕೆಲಸದಿಂದ ತೆಗೆದುಹಾಕಲಾಗಿತ್ತು ಎಂಬ ಆರೋಪಗಳು ಕೇಳಿ ಬಂದಿವೆ.

ಕೆಲಸ ಕಳೆದುಕೊಂಡ ಮೃತ ಗಂಗರಾಜ ಕೆಲಸ ಸಿಗದೆ ತನ್ನ ಸ್ವಂತ ಮನೆಯನ್ನು ಮಾರಿಕೊಂಡು, ಹೆಂಡತಿಯ ತವರು ಮನೆಯಾದ ನೆಲಮಂಗಲ ತಾಲ್ಲೂಕಿನ ತ್ಯಾಗದಹಳ್ಳಿಯಲ್ಲಿ ವಾಸ ಮಾಡುತ್ತಿದ್ದ, ಸಂಸಾರದ ನಿರ್ವಹಣೆಗಾಗಿ ಪರದಾಡುತ್ತಿದ್ದ. ಅತಿಯಾದ ಸಾಲ ಮಾಡಿಕೊಂಡಿದ್ದು, ಸಾಲ ಬಾಧೆ ತಾಳಲಾರದೆ ಇಂದು ಮುಂಜಾನೆ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಮೃತ ಗಂಗರಾಜು ಅವರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

1 hour ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

2 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

7 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

9 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

11 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

13 hours ago