Categories: Home

ಸಾಲ ಬಾಧೆ: ನೇಣಿಗೆ ಶರಣಾದ ವ್ಯಕ್ತಿ

ದೊಡ್ಡಬಳ್ಳಾಪುರ:ಸಾಲ ಬಾಧೆ ತಾಳಲಾರದೆ ವ್ಯಕ್ತಿಯೊಬ್ಬರು ನೇರಳೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ರಘುನಾಥಪುರ ಬಳಿ ನಡೆದಿದೆ.

ರಘುನಾಥಪುರ ನಿವಾಸಿ ಗಂಗರಾಜು (40), ಆತ್ಮಹತ್ಯೆ ಶರಣಾದ ಮೃತ ದುರ್ದೈವಿ.

ಗಂಗರಾಜು ರಘುನಾಥಪುರ ಬಳಿಯ ಇಂಡೇನಾ ಇಂಡಿಯಾ ಎಂಬ‌ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿ ಸುಮಾರು 10 ವರ್ಷಗಳಿಂದ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂದು ಮೂಲಗಳಿಂದ ತಿಳಿದು ಬಂದಿದೆ.

ಕೌಟುಂಬಿಕ ಸಮಸ್ಯೆಗಳಿಂದಾಗಿ ಕಾರ್ಖಾನೆಯಲ್ಲಿ ಒಪ್ಪಿಗೆ ಪಡೆಯದೆ ಒಂದು ವಾರ ರಜೆ ಹಾಕಿದ್ದ ಕಾರಣಕ್ಕೆ ಕಂಪನಿಯು 2022 ರಲ್ಲಿ ಆತನಿಂದ ಕೆಲಸಕ್ಕೆ ಬಲವಂತವಾಗಿ ರಾಜೀನಾಮೆ ಪಡೆದು ಕೆಲಸದಿಂದ ತೆಗೆದುಹಾಕಲಾಗಿತ್ತು ಎಂಬ ಆರೋಪಗಳು ಕೇಳಿ ಬಂದಿವೆ.

ಕೆಲಸ ಕಳೆದುಕೊಂಡ ಮೃತ ಗಂಗರಾಜ ಕೆಲಸ ಸಿಗದೆ ತನ್ನ ಸ್ವಂತ ಮನೆಯನ್ನು ಮಾರಿಕೊಂಡು, ಹೆಂಡತಿಯ ತವರು ಮನೆಯಾದ ನೆಲಮಂಗಲ ತಾಲ್ಲೂಕಿನ ತ್ಯಾಗದಹಳ್ಳಿಯಲ್ಲಿ ವಾಸ ಮಾಡುತ್ತಿದ್ದ, ಸಂಸಾರದ ನಿರ್ವಹಣೆಗಾಗಿ ಪರದಾಡುತ್ತಿದ್ದ. ಅತಿಯಾದ ಸಾಲ ಮಾಡಿಕೊಂಡಿದ್ದು, ಸಾಲ ಬಾಧೆ ತಾಳಲಾರದೆ ಇಂದು ಮುಂಜಾನೆ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಮೃತ ಗಂಗರಾಜು ಅವರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

9 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

10 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

19 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago