ದೊಡ್ಡಬಳ್ಳಾಪುರ:ಸಾಲ ಬಾಧೆ ತಾಳಲಾರದೆ ವ್ಯಕ್ತಿಯೊಬ್ಬರು ನೇರಳೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ರಘುನಾಥಪುರ ಬಳಿ ನಡೆದಿದೆ.
ಗಂಗರಾಜು ರಘುನಾಥಪುರ ಬಳಿಯ ಇಂಡೇನಾ ಇಂಡಿಯಾ ಎಂಬ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿ ಸುಮಾರು 10 ವರ್ಷಗಳಿಂದ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕೌಟುಂಬಿಕ ಸಮಸ್ಯೆಗಳಿಂದಾಗಿ ಕಾರ್ಖಾನೆಯಲ್ಲಿ ಒಪ್ಪಿಗೆ ಪಡೆಯದೆ ಒಂದು ವಾರ ರಜೆ ಹಾಕಿದ್ದ ಕಾರಣಕ್ಕೆ ಕಂಪನಿಯು 2022 ರಲ್ಲಿ ಆತನಿಂದ ಕೆಲಸಕ್ಕೆ ಬಲವಂತವಾಗಿ ರಾಜೀನಾಮೆ ಪಡೆದು ಕೆಲಸದಿಂದ ತೆಗೆದುಹಾಕಲಾಗಿತ್ತು ಎಂಬ ಆರೋಪಗಳು ಕೇಳಿ ಬಂದಿವೆ.
ಕೆಲಸ ಕಳೆದುಕೊಂಡ ಮೃತ ಗಂಗರಾಜ ಕೆಲಸ ಸಿಗದೆ ತನ್ನ ಸ್ವಂತ ಮನೆಯನ್ನು ಮಾರಿಕೊಂಡು, ಹೆಂಡತಿಯ ತವರು ಮನೆಯಾದ ನೆಲಮಂಗಲ ತಾಲ್ಲೂಕಿನ ತ್ಯಾಗದಹಳ್ಳಿಯಲ್ಲಿ ವಾಸ ಮಾಡುತ್ತಿದ್ದ, ಸಂಸಾರದ ನಿರ್ವಹಣೆಗಾಗಿ ಪರದಾಡುತ್ತಿದ್ದ. ಅತಿಯಾದ ಸಾಲ ಮಾಡಿಕೊಂಡಿದ್ದು, ಸಾಲ ಬಾಧೆ ತಾಳಲಾರದೆ ಇಂದು ಮುಂಜಾನೆ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಮೃತ ಗಂಗರಾಜು ಅವರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…