ದೊಡ್ಡಬಳ್ಳಾಪುರ:ಸಾಲ ಬಾಧೆ ತಾಳಲಾರದೆ ವ್ಯಕ್ತಿಯೊಬ್ಬರು ನೇರಳೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ರಘುನಾಥಪುರ ಬಳಿ ನಡೆದಿದೆ.
ಗಂಗರಾಜು ರಘುನಾಥಪುರ ಬಳಿಯ ಇಂಡೇನಾ ಇಂಡಿಯಾ ಎಂಬ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿ ಸುಮಾರು 10 ವರ್ಷಗಳಿಂದ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕೌಟುಂಬಿಕ ಸಮಸ್ಯೆಗಳಿಂದಾಗಿ ಕಾರ್ಖಾನೆಯಲ್ಲಿ ಒಪ್ಪಿಗೆ ಪಡೆಯದೆ ಒಂದು ವಾರ ರಜೆ ಹಾಕಿದ್ದ ಕಾರಣಕ್ಕೆ ಕಂಪನಿಯು 2022 ರಲ್ಲಿ ಆತನಿಂದ ಕೆಲಸಕ್ಕೆ ಬಲವಂತವಾಗಿ ರಾಜೀನಾಮೆ ಪಡೆದು ಕೆಲಸದಿಂದ ತೆಗೆದುಹಾಕಲಾಗಿತ್ತು ಎಂಬ ಆರೋಪಗಳು ಕೇಳಿ ಬಂದಿವೆ.
ಕೆಲಸ ಕಳೆದುಕೊಂಡ ಮೃತ ಗಂಗರಾಜ ಕೆಲಸ ಸಿಗದೆ ತನ್ನ ಸ್ವಂತ ಮನೆಯನ್ನು ಮಾರಿಕೊಂಡು, ಹೆಂಡತಿಯ ತವರು ಮನೆಯಾದ ನೆಲಮಂಗಲ ತಾಲ್ಲೂಕಿನ ತ್ಯಾಗದಹಳ್ಳಿಯಲ್ಲಿ ವಾಸ ಮಾಡುತ್ತಿದ್ದ, ಸಂಸಾರದ ನಿರ್ವಹಣೆಗಾಗಿ ಪರದಾಡುತ್ತಿದ್ದ. ಅತಿಯಾದ ಸಾಲ ಮಾಡಿಕೊಂಡಿದ್ದು, ಸಾಲ ಬಾಧೆ ತಾಳಲಾರದೆ ಇಂದು ಮುಂಜಾನೆ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಮೃತ ಗಂಗರಾಜು ಅವರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…