Categories: ಕೋಲಾರ

ಸಾಲ ಬೇಡ, ಠೇವಣಿ ಹಣ ವಾಪಸ್ಸು ಮಾಡುವಂತೆ ಮಹಿಳಾ ಸಂಘಗಳು ಒತ್ತಾಯ

ಕೋಲಾರ: ಮಹಿಳಾ ಸ್ವಸಹಾಯ ಸಂಘದ ಸದಸ್ಯರ ಠೇವಣಿ ಹಣವನ್ನು ಕೂಡಲೇ ವಾಪಸು ನೀಡುವಂತೆ ಮಹಿಳಾ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ಹುತ್ತೂರು ಹೋಬಳಿ ವ್ಯಾಪ್ತಿಯ ಮಹಿಳಾ ಸಂಘಗಳು ಮಂಗಳವಾರ ನಗರದ ಡಿಸಿಸಿ ಬ್ಯಾಂಕ್ ಮುಂದೆ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಶಶಿಕಲಾ ಮಾತನಾಡಿ, ಜಿಲ್ಲೆಯ ಹುತ್ತೂರು ಹೋಬಳಿ ವ್ಯಾಪ್ತಿಯ ಮಹಿಳಾ ಸಂಘಗಳಿಗೆ ಸಾಲು ನೀಡುವುದಾಗಿ ನಂಬಿಸಿ ಸುಮಾರು 70 ರಿಂದ 80 ಸಾವಿರದವರಗೆ 300 ಸಂಘಗಳಿಂದ ಠೇವಣಿ ಹಣವನ್ನು ಸಂಗ್ರಹಿಸಿ ಸುಮಾರು ಎರಡು ವರ್ಷ ಕಳೆದರು ಇದುವರೆಗೂ ಯಾವುದೇ ಸಾಲವನ್ನು ನೀಡದೇ ಮಹಿಳೆಯರಿಗೆ ವಂಚನೆ ಮಾಡಿದ್ದಾರೆ ಸಾಲ ಕಟ್ಟಿಲ್ಲವೆಂದರೆ ಮನೆ ತನಕ ಬರುವ ಅಧಿಕಾರಿಗಳು ನಮ್ಮ ಠೇವಣಿ ಹಣವನ್ನು ಇಷ್ಟು ದಿನಗಳವರೆಗೆ ಹಾಗೆಯೇ ಇಟ್ಟುಕೊಂಡಿದ್ದಾರೆ ಇದಕ್ಕೆ ಹೊಣೆ ಯಾರು ಕೂಡಲೇ ನಮ್ಮ ಠೇವಣಿ ಹಣವನ್ನು ವಾಪಸ್ಸು ನೀಡುವಂತೆ ಒತ್ತಾಯಿಸಿದರು.

ಈಗಾಗಲೇ ಹುತ್ತೂರು ಸೊಸೈಟಿಯ ವಡಗೂರು ಶಾಖೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಆಡಳಿತ ಮಂಡಳಿಗೆ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ ಜೊತೆಗೆ ಕಳೆದ ಸರ್ವ ಸದಸ್ಯರ ಸಭೆಯಲ್ಲಿ ಸಹ ಈ ವಿಷಯದ ಕುರಿತಾಗಿ ಪ್ರಸ್ತಾವನೆ ಮಾಡಲಾಗಿದೆ ಹಣ ಕೊಟ್ಟಿದ್ದರಿಂದ ತಮ್ಮ ಮನೆಗಳಲ್ಲಿ ನಿರಂತರವಾಗಿ ಗಲಾಟೆಗಳು ನಡೆಯುತ್ತಿದ್ದು ಹೆಣ್ಣು ಮಕ್ಕಳು ಮನೆ ಬಿಡುವ ಸನ್ನಿವೇಶ ಬಂದಿದೆ ಕೂಡಲೇ ಹಣ ವಾಪಸ್ಸು ಮಾಡಬೇಕು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟಕ್ಕೆ ಹೋಬಳಿ ವ್ಯಾಪ್ತಿಯ ಮಹಿಳಾ ಸಂಘಗಳು ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಹುತ್ತೂರು ಸೊಸೈಟಿ ಅಧ್ಯಕ್ಷ ಕೋಟೆ ಸಿ.ಎಂ ನಾರಾಯಣಸ್ವಾಮಿ ಮಾತನಾಡಿ ಸೊಸೈಟಿಯಲ್ಲಿನ ಹಿಂದಿನ ಸಿಇಒ ವಿಜಯಕುಮಾರ್ ಅವರು ಸುಮಾರು 116 ಮಹಿಳಾ ಸಂಘಗಳಿಂದ 1.35 ಕೋಟಿ ಹಣವನ್ನು ಸಂಗ್ರಹಿಸಿ ಬ್ಯಾಂಕ್ ಗೆ ಕಟ್ಟದೇ ಸ್ವಂತಕ್ಕೆ ದುರುಪಯೋಗ ಮಾಡಿಕೊಂಡಿದ್ದಾನೆ ಅತನ ವಿರುದ್ದ ಈಗಾಗಲೇ ದೂರು ದಾಖಲಾಗಿದೆ ಅತನ ಬೇಜಾವ್ದಾರಿಯಿಂದ ಇಂತಹ ಪರಿಸ್ಥಿತಿ ಬಂದಿದೆ ಕೋರ್ಟ್ ಮೂಲಕ ವಸೂಲಿ ಮಾಡಲಾಗುತ್ತಾ ಇದೆ ಎಂದು ಸಮಜಾಯಿಷಿ ನೀಡಿದರು.

ಈ ಸಂದರ್ಭದಲ್ಲಿ ಮಹಿಳಾ ಸಂಘಗಳ ಪ್ರತಿನಿಧಿಗಳಾದ ಜ್ಯೋತಿ, ಮಂಜುಳಾ, ಅಮರಾವತಿ, ಕಾಂತಮ್ಮ, ಲೀಲಾವತಿ, ಭಾವನಾ, ವಿಜಯಮ್ಮ, ನೇತ್ರಾವತಿ, ಕಮಲಮ್ಮ, ಶ್ವೇತಾ, ಪದ್ಮಾವತಿ ಮುಂತಾದವರು ವಹಿಸಿದ್ದರು

Ramesh Babu

Journalist

Recent Posts

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

1 hour ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

5 hours ago

ಯುವಕರು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು- ವಕೀಲ ಬಿ. ಸುರೇಶ್ ಗೌಡ

ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…

10 hours ago

ಕದನ ವಿರಾಮ…., ಕೊನೆಗೆ ಗೆಲ್ಲುವುದು ಹಿಂಸೆಯಲ್ಲ ಅಹಿಂಸೆ

ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…

10 hours ago

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

20 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

20 hours ago