Categories: ಕೋಲಾರ

ಸಾಲ ಬೇಡ, ಠೇವಣಿ ಹಣ ವಾಪಸ್ಸು ಮಾಡುವಂತೆ ಮಹಿಳಾ ಸಂಘಗಳು ಒತ್ತಾಯ

ಕೋಲಾರ: ಮಹಿಳಾ ಸ್ವಸಹಾಯ ಸಂಘದ ಸದಸ್ಯರ ಠೇವಣಿ ಹಣವನ್ನು ಕೂಡಲೇ ವಾಪಸು ನೀಡುವಂತೆ ಮಹಿಳಾ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ಹುತ್ತೂರು ಹೋಬಳಿ ವ್ಯಾಪ್ತಿಯ ಮಹಿಳಾ ಸಂಘಗಳು ಮಂಗಳವಾರ ನಗರದ ಡಿಸಿಸಿ ಬ್ಯಾಂಕ್ ಮುಂದೆ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಶಶಿಕಲಾ ಮಾತನಾಡಿ, ಜಿಲ್ಲೆಯ ಹುತ್ತೂರು ಹೋಬಳಿ ವ್ಯಾಪ್ತಿಯ ಮಹಿಳಾ ಸಂಘಗಳಿಗೆ ಸಾಲು ನೀಡುವುದಾಗಿ ನಂಬಿಸಿ ಸುಮಾರು 70 ರಿಂದ 80 ಸಾವಿರದವರಗೆ 300 ಸಂಘಗಳಿಂದ ಠೇವಣಿ ಹಣವನ್ನು ಸಂಗ್ರಹಿಸಿ ಸುಮಾರು ಎರಡು ವರ್ಷ ಕಳೆದರು ಇದುವರೆಗೂ ಯಾವುದೇ ಸಾಲವನ್ನು ನೀಡದೇ ಮಹಿಳೆಯರಿಗೆ ವಂಚನೆ ಮಾಡಿದ್ದಾರೆ ಸಾಲ ಕಟ್ಟಿಲ್ಲವೆಂದರೆ ಮನೆ ತನಕ ಬರುವ ಅಧಿಕಾರಿಗಳು ನಮ್ಮ ಠೇವಣಿ ಹಣವನ್ನು ಇಷ್ಟು ದಿನಗಳವರೆಗೆ ಹಾಗೆಯೇ ಇಟ್ಟುಕೊಂಡಿದ್ದಾರೆ ಇದಕ್ಕೆ ಹೊಣೆ ಯಾರು ಕೂಡಲೇ ನಮ್ಮ ಠೇವಣಿ ಹಣವನ್ನು ವಾಪಸ್ಸು ನೀಡುವಂತೆ ಒತ್ತಾಯಿಸಿದರು.

ಈಗಾಗಲೇ ಹುತ್ತೂರು ಸೊಸೈಟಿಯ ವಡಗೂರು ಶಾಖೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಆಡಳಿತ ಮಂಡಳಿಗೆ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ ಜೊತೆಗೆ ಕಳೆದ ಸರ್ವ ಸದಸ್ಯರ ಸಭೆಯಲ್ಲಿ ಸಹ ಈ ವಿಷಯದ ಕುರಿತಾಗಿ ಪ್ರಸ್ತಾವನೆ ಮಾಡಲಾಗಿದೆ ಹಣ ಕೊಟ್ಟಿದ್ದರಿಂದ ತಮ್ಮ ಮನೆಗಳಲ್ಲಿ ನಿರಂತರವಾಗಿ ಗಲಾಟೆಗಳು ನಡೆಯುತ್ತಿದ್ದು ಹೆಣ್ಣು ಮಕ್ಕಳು ಮನೆ ಬಿಡುವ ಸನ್ನಿವೇಶ ಬಂದಿದೆ ಕೂಡಲೇ ಹಣ ವಾಪಸ್ಸು ಮಾಡಬೇಕು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟಕ್ಕೆ ಹೋಬಳಿ ವ್ಯಾಪ್ತಿಯ ಮಹಿಳಾ ಸಂಘಗಳು ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಹುತ್ತೂರು ಸೊಸೈಟಿ ಅಧ್ಯಕ್ಷ ಕೋಟೆ ಸಿ.ಎಂ ನಾರಾಯಣಸ್ವಾಮಿ ಮಾತನಾಡಿ ಸೊಸೈಟಿಯಲ್ಲಿನ ಹಿಂದಿನ ಸಿಇಒ ವಿಜಯಕುಮಾರ್ ಅವರು ಸುಮಾರು 116 ಮಹಿಳಾ ಸಂಘಗಳಿಂದ 1.35 ಕೋಟಿ ಹಣವನ್ನು ಸಂಗ್ರಹಿಸಿ ಬ್ಯಾಂಕ್ ಗೆ ಕಟ್ಟದೇ ಸ್ವಂತಕ್ಕೆ ದುರುಪಯೋಗ ಮಾಡಿಕೊಂಡಿದ್ದಾನೆ ಅತನ ವಿರುದ್ದ ಈಗಾಗಲೇ ದೂರು ದಾಖಲಾಗಿದೆ ಅತನ ಬೇಜಾವ್ದಾರಿಯಿಂದ ಇಂತಹ ಪರಿಸ್ಥಿತಿ ಬಂದಿದೆ ಕೋರ್ಟ್ ಮೂಲಕ ವಸೂಲಿ ಮಾಡಲಾಗುತ್ತಾ ಇದೆ ಎಂದು ಸಮಜಾಯಿಷಿ ನೀಡಿದರು.

ಈ ಸಂದರ್ಭದಲ್ಲಿ ಮಹಿಳಾ ಸಂಘಗಳ ಪ್ರತಿನಿಧಿಗಳಾದ ಜ್ಯೋತಿ, ಮಂಜುಳಾ, ಅಮರಾವತಿ, ಕಾಂತಮ್ಮ, ಲೀಲಾವತಿ, ಭಾವನಾ, ವಿಜಯಮ್ಮ, ನೇತ್ರಾವತಿ, ಕಮಲಮ್ಮ, ಶ್ವೇತಾ, ಪದ್ಮಾವತಿ ಮುಂತಾದವರು ವಹಿಸಿದ್ದರು

Ramesh Babu

Journalist

Recent Posts

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

5 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

9 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

10 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

13 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago