Categories: ಕೋಲಾರ

ಸಾಲ ಬೇಡ, ಠೇವಣಿ ಹಣ ವಾಪಸ್ಸು ಮಾಡುವಂತೆ ಮಹಿಳಾ ಸಂಘಗಳು ಒತ್ತಾಯ

ಕೋಲಾರ: ಮಹಿಳಾ ಸ್ವಸಹಾಯ ಸಂಘದ ಸದಸ್ಯರ ಠೇವಣಿ ಹಣವನ್ನು ಕೂಡಲೇ ವಾಪಸು ನೀಡುವಂತೆ ಮಹಿಳಾ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ಹುತ್ತೂರು ಹೋಬಳಿ ವ್ಯಾಪ್ತಿಯ ಮಹಿಳಾ ಸಂಘಗಳು ಮಂಗಳವಾರ ನಗರದ ಡಿಸಿಸಿ ಬ್ಯಾಂಕ್ ಮುಂದೆ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಶಶಿಕಲಾ ಮಾತನಾಡಿ, ಜಿಲ್ಲೆಯ ಹುತ್ತೂರು ಹೋಬಳಿ ವ್ಯಾಪ್ತಿಯ ಮಹಿಳಾ ಸಂಘಗಳಿಗೆ ಸಾಲು ನೀಡುವುದಾಗಿ ನಂಬಿಸಿ ಸುಮಾರು 70 ರಿಂದ 80 ಸಾವಿರದವರಗೆ 300 ಸಂಘಗಳಿಂದ ಠೇವಣಿ ಹಣವನ್ನು ಸಂಗ್ರಹಿಸಿ ಸುಮಾರು ಎರಡು ವರ್ಷ ಕಳೆದರು ಇದುವರೆಗೂ ಯಾವುದೇ ಸಾಲವನ್ನು ನೀಡದೇ ಮಹಿಳೆಯರಿಗೆ ವಂಚನೆ ಮಾಡಿದ್ದಾರೆ ಸಾಲ ಕಟ್ಟಿಲ್ಲವೆಂದರೆ ಮನೆ ತನಕ ಬರುವ ಅಧಿಕಾರಿಗಳು ನಮ್ಮ ಠೇವಣಿ ಹಣವನ್ನು ಇಷ್ಟು ದಿನಗಳವರೆಗೆ ಹಾಗೆಯೇ ಇಟ್ಟುಕೊಂಡಿದ್ದಾರೆ ಇದಕ್ಕೆ ಹೊಣೆ ಯಾರು ಕೂಡಲೇ ನಮ್ಮ ಠೇವಣಿ ಹಣವನ್ನು ವಾಪಸ್ಸು ನೀಡುವಂತೆ ಒತ್ತಾಯಿಸಿದರು.

ಈಗಾಗಲೇ ಹುತ್ತೂರು ಸೊಸೈಟಿಯ ವಡಗೂರು ಶಾಖೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಆಡಳಿತ ಮಂಡಳಿಗೆ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ ಜೊತೆಗೆ ಕಳೆದ ಸರ್ವ ಸದಸ್ಯರ ಸಭೆಯಲ್ಲಿ ಸಹ ಈ ವಿಷಯದ ಕುರಿತಾಗಿ ಪ್ರಸ್ತಾವನೆ ಮಾಡಲಾಗಿದೆ ಹಣ ಕೊಟ್ಟಿದ್ದರಿಂದ ತಮ್ಮ ಮನೆಗಳಲ್ಲಿ ನಿರಂತರವಾಗಿ ಗಲಾಟೆಗಳು ನಡೆಯುತ್ತಿದ್ದು ಹೆಣ್ಣು ಮಕ್ಕಳು ಮನೆ ಬಿಡುವ ಸನ್ನಿವೇಶ ಬಂದಿದೆ ಕೂಡಲೇ ಹಣ ವಾಪಸ್ಸು ಮಾಡಬೇಕು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟಕ್ಕೆ ಹೋಬಳಿ ವ್ಯಾಪ್ತಿಯ ಮಹಿಳಾ ಸಂಘಗಳು ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಹುತ್ತೂರು ಸೊಸೈಟಿ ಅಧ್ಯಕ್ಷ ಕೋಟೆ ಸಿ.ಎಂ ನಾರಾಯಣಸ್ವಾಮಿ ಮಾತನಾಡಿ ಸೊಸೈಟಿಯಲ್ಲಿನ ಹಿಂದಿನ ಸಿಇಒ ವಿಜಯಕುಮಾರ್ ಅವರು ಸುಮಾರು 116 ಮಹಿಳಾ ಸಂಘಗಳಿಂದ 1.35 ಕೋಟಿ ಹಣವನ್ನು ಸಂಗ್ರಹಿಸಿ ಬ್ಯಾಂಕ್ ಗೆ ಕಟ್ಟದೇ ಸ್ವಂತಕ್ಕೆ ದುರುಪಯೋಗ ಮಾಡಿಕೊಂಡಿದ್ದಾನೆ ಅತನ ವಿರುದ್ದ ಈಗಾಗಲೇ ದೂರು ದಾಖಲಾಗಿದೆ ಅತನ ಬೇಜಾವ್ದಾರಿಯಿಂದ ಇಂತಹ ಪರಿಸ್ಥಿತಿ ಬಂದಿದೆ ಕೋರ್ಟ್ ಮೂಲಕ ವಸೂಲಿ ಮಾಡಲಾಗುತ್ತಾ ಇದೆ ಎಂದು ಸಮಜಾಯಿಷಿ ನೀಡಿದರು.

ಈ ಸಂದರ್ಭದಲ್ಲಿ ಮಹಿಳಾ ಸಂಘಗಳ ಪ್ರತಿನಿಧಿಗಳಾದ ಜ್ಯೋತಿ, ಮಂಜುಳಾ, ಅಮರಾವತಿ, ಕಾಂತಮ್ಮ, ಲೀಲಾವತಿ, ಭಾವನಾ, ವಿಜಯಮ್ಮ, ನೇತ್ರಾವತಿ, ಕಮಲಮ್ಮ, ಶ್ವೇತಾ, ಪದ್ಮಾವತಿ ಮುಂತಾದವರು ವಹಿಸಿದ್ದರು

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

13 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

15 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

15 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

21 hours ago