Categories: ಕೋಲಾರ

ಸಾಲ ಬೇಡ, ಠೇವಣಿ ಹಣ ವಾಪಸ್ಸು ಮಾಡುವಂತೆ ಮಹಿಳಾ ಸಂಘಗಳು ಒತ್ತಾಯ

ಕೋಲಾರ: ಮಹಿಳಾ ಸ್ವಸಹಾಯ ಸಂಘದ ಸದಸ್ಯರ ಠೇವಣಿ ಹಣವನ್ನು ಕೂಡಲೇ ವಾಪಸು ನೀಡುವಂತೆ ಮಹಿಳಾ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ಹುತ್ತೂರು ಹೋಬಳಿ ವ್ಯಾಪ್ತಿಯ ಮಹಿಳಾ ಸಂಘಗಳು ಮಂಗಳವಾರ ನಗರದ ಡಿಸಿಸಿ ಬ್ಯಾಂಕ್ ಮುಂದೆ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಶಶಿಕಲಾ ಮಾತನಾಡಿ, ಜಿಲ್ಲೆಯ ಹುತ್ತೂರು ಹೋಬಳಿ ವ್ಯಾಪ್ತಿಯ ಮಹಿಳಾ ಸಂಘಗಳಿಗೆ ಸಾಲು ನೀಡುವುದಾಗಿ ನಂಬಿಸಿ ಸುಮಾರು 70 ರಿಂದ 80 ಸಾವಿರದವರಗೆ 300 ಸಂಘಗಳಿಂದ ಠೇವಣಿ ಹಣವನ್ನು ಸಂಗ್ರಹಿಸಿ ಸುಮಾರು ಎರಡು ವರ್ಷ ಕಳೆದರು ಇದುವರೆಗೂ ಯಾವುದೇ ಸಾಲವನ್ನು ನೀಡದೇ ಮಹಿಳೆಯರಿಗೆ ವಂಚನೆ ಮಾಡಿದ್ದಾರೆ ಸಾಲ ಕಟ್ಟಿಲ್ಲವೆಂದರೆ ಮನೆ ತನಕ ಬರುವ ಅಧಿಕಾರಿಗಳು ನಮ್ಮ ಠೇವಣಿ ಹಣವನ್ನು ಇಷ್ಟು ದಿನಗಳವರೆಗೆ ಹಾಗೆಯೇ ಇಟ್ಟುಕೊಂಡಿದ್ದಾರೆ ಇದಕ್ಕೆ ಹೊಣೆ ಯಾರು ಕೂಡಲೇ ನಮ್ಮ ಠೇವಣಿ ಹಣವನ್ನು ವಾಪಸ್ಸು ನೀಡುವಂತೆ ಒತ್ತಾಯಿಸಿದರು.

ಈಗಾಗಲೇ ಹುತ್ತೂರು ಸೊಸೈಟಿಯ ವಡಗೂರು ಶಾಖೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಆಡಳಿತ ಮಂಡಳಿಗೆ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ ಜೊತೆಗೆ ಕಳೆದ ಸರ್ವ ಸದಸ್ಯರ ಸಭೆಯಲ್ಲಿ ಸಹ ಈ ವಿಷಯದ ಕುರಿತಾಗಿ ಪ್ರಸ್ತಾವನೆ ಮಾಡಲಾಗಿದೆ ಹಣ ಕೊಟ್ಟಿದ್ದರಿಂದ ತಮ್ಮ ಮನೆಗಳಲ್ಲಿ ನಿರಂತರವಾಗಿ ಗಲಾಟೆಗಳು ನಡೆಯುತ್ತಿದ್ದು ಹೆಣ್ಣು ಮಕ್ಕಳು ಮನೆ ಬಿಡುವ ಸನ್ನಿವೇಶ ಬಂದಿದೆ ಕೂಡಲೇ ಹಣ ವಾಪಸ್ಸು ಮಾಡಬೇಕು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟಕ್ಕೆ ಹೋಬಳಿ ವ್ಯಾಪ್ತಿಯ ಮಹಿಳಾ ಸಂಘಗಳು ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಹುತ್ತೂರು ಸೊಸೈಟಿ ಅಧ್ಯಕ್ಷ ಕೋಟೆ ಸಿ.ಎಂ ನಾರಾಯಣಸ್ವಾಮಿ ಮಾತನಾಡಿ ಸೊಸೈಟಿಯಲ್ಲಿನ ಹಿಂದಿನ ಸಿಇಒ ವಿಜಯಕುಮಾರ್ ಅವರು ಸುಮಾರು 116 ಮಹಿಳಾ ಸಂಘಗಳಿಂದ 1.35 ಕೋಟಿ ಹಣವನ್ನು ಸಂಗ್ರಹಿಸಿ ಬ್ಯಾಂಕ್ ಗೆ ಕಟ್ಟದೇ ಸ್ವಂತಕ್ಕೆ ದುರುಪಯೋಗ ಮಾಡಿಕೊಂಡಿದ್ದಾನೆ ಅತನ ವಿರುದ್ದ ಈಗಾಗಲೇ ದೂರು ದಾಖಲಾಗಿದೆ ಅತನ ಬೇಜಾವ್ದಾರಿಯಿಂದ ಇಂತಹ ಪರಿಸ್ಥಿತಿ ಬಂದಿದೆ ಕೋರ್ಟ್ ಮೂಲಕ ವಸೂಲಿ ಮಾಡಲಾಗುತ್ತಾ ಇದೆ ಎಂದು ಸಮಜಾಯಿಷಿ ನೀಡಿದರು.

ಈ ಸಂದರ್ಭದಲ್ಲಿ ಮಹಿಳಾ ಸಂಘಗಳ ಪ್ರತಿನಿಧಿಗಳಾದ ಜ್ಯೋತಿ, ಮಂಜುಳಾ, ಅಮರಾವತಿ, ಕಾಂತಮ್ಮ, ಲೀಲಾವತಿ, ಭಾವನಾ, ವಿಜಯಮ್ಮ, ನೇತ್ರಾವತಿ, ಕಮಲಮ್ಮ, ಶ್ವೇತಾ, ಪದ್ಮಾವತಿ ಮುಂತಾದವರು ವಹಿಸಿದ್ದರು

Ramesh Babu

Journalist

Recent Posts

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

14 minutes ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

23 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago