Categories: ಕೋಲಾರ

ಸಾಲ ಬೇಡ, ಠೇವಣಿ ಹಣ ವಾಪಸ್ಸು ಮಾಡುವಂತೆ ಮಹಿಳಾ ಸಂಘಗಳು ಒತ್ತಾಯ

ಕೋಲಾರ: ಮಹಿಳಾ ಸ್ವಸಹಾಯ ಸಂಘದ ಸದಸ್ಯರ ಠೇವಣಿ ಹಣವನ್ನು ಕೂಡಲೇ ವಾಪಸು ನೀಡುವಂತೆ ಮಹಿಳಾ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ಹುತ್ತೂರು ಹೋಬಳಿ ವ್ಯಾಪ್ತಿಯ ಮಹಿಳಾ ಸಂಘಗಳು ಮಂಗಳವಾರ ನಗರದ ಡಿಸಿಸಿ ಬ್ಯಾಂಕ್ ಮುಂದೆ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಶಶಿಕಲಾ ಮಾತನಾಡಿ, ಜಿಲ್ಲೆಯ ಹುತ್ತೂರು ಹೋಬಳಿ ವ್ಯಾಪ್ತಿಯ ಮಹಿಳಾ ಸಂಘಗಳಿಗೆ ಸಾಲು ನೀಡುವುದಾಗಿ ನಂಬಿಸಿ ಸುಮಾರು 70 ರಿಂದ 80 ಸಾವಿರದವರಗೆ 300 ಸಂಘಗಳಿಂದ ಠೇವಣಿ ಹಣವನ್ನು ಸಂಗ್ರಹಿಸಿ ಸುಮಾರು ಎರಡು ವರ್ಷ ಕಳೆದರು ಇದುವರೆಗೂ ಯಾವುದೇ ಸಾಲವನ್ನು ನೀಡದೇ ಮಹಿಳೆಯರಿಗೆ ವಂಚನೆ ಮಾಡಿದ್ದಾರೆ ಸಾಲ ಕಟ್ಟಿಲ್ಲವೆಂದರೆ ಮನೆ ತನಕ ಬರುವ ಅಧಿಕಾರಿಗಳು ನಮ್ಮ ಠೇವಣಿ ಹಣವನ್ನು ಇಷ್ಟು ದಿನಗಳವರೆಗೆ ಹಾಗೆಯೇ ಇಟ್ಟುಕೊಂಡಿದ್ದಾರೆ ಇದಕ್ಕೆ ಹೊಣೆ ಯಾರು ಕೂಡಲೇ ನಮ್ಮ ಠೇವಣಿ ಹಣವನ್ನು ವಾಪಸ್ಸು ನೀಡುವಂತೆ ಒತ್ತಾಯಿಸಿದರು.

ಈಗಾಗಲೇ ಹುತ್ತೂರು ಸೊಸೈಟಿಯ ವಡಗೂರು ಶಾಖೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಆಡಳಿತ ಮಂಡಳಿಗೆ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ ಜೊತೆಗೆ ಕಳೆದ ಸರ್ವ ಸದಸ್ಯರ ಸಭೆಯಲ್ಲಿ ಸಹ ಈ ವಿಷಯದ ಕುರಿತಾಗಿ ಪ್ರಸ್ತಾವನೆ ಮಾಡಲಾಗಿದೆ ಹಣ ಕೊಟ್ಟಿದ್ದರಿಂದ ತಮ್ಮ ಮನೆಗಳಲ್ಲಿ ನಿರಂತರವಾಗಿ ಗಲಾಟೆಗಳು ನಡೆಯುತ್ತಿದ್ದು ಹೆಣ್ಣು ಮಕ್ಕಳು ಮನೆ ಬಿಡುವ ಸನ್ನಿವೇಶ ಬಂದಿದೆ ಕೂಡಲೇ ಹಣ ವಾಪಸ್ಸು ಮಾಡಬೇಕು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟಕ್ಕೆ ಹೋಬಳಿ ವ್ಯಾಪ್ತಿಯ ಮಹಿಳಾ ಸಂಘಗಳು ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಹುತ್ತೂರು ಸೊಸೈಟಿ ಅಧ್ಯಕ್ಷ ಕೋಟೆ ಸಿ.ಎಂ ನಾರಾಯಣಸ್ವಾಮಿ ಮಾತನಾಡಿ ಸೊಸೈಟಿಯಲ್ಲಿನ ಹಿಂದಿನ ಸಿಇಒ ವಿಜಯಕುಮಾರ್ ಅವರು ಸುಮಾರು 116 ಮಹಿಳಾ ಸಂಘಗಳಿಂದ 1.35 ಕೋಟಿ ಹಣವನ್ನು ಸಂಗ್ರಹಿಸಿ ಬ್ಯಾಂಕ್ ಗೆ ಕಟ್ಟದೇ ಸ್ವಂತಕ್ಕೆ ದುರುಪಯೋಗ ಮಾಡಿಕೊಂಡಿದ್ದಾನೆ ಅತನ ವಿರುದ್ದ ಈಗಾಗಲೇ ದೂರು ದಾಖಲಾಗಿದೆ ಅತನ ಬೇಜಾವ್ದಾರಿಯಿಂದ ಇಂತಹ ಪರಿಸ್ಥಿತಿ ಬಂದಿದೆ ಕೋರ್ಟ್ ಮೂಲಕ ವಸೂಲಿ ಮಾಡಲಾಗುತ್ತಾ ಇದೆ ಎಂದು ಸಮಜಾಯಿಷಿ ನೀಡಿದರು.

ಈ ಸಂದರ್ಭದಲ್ಲಿ ಮಹಿಳಾ ಸಂಘಗಳ ಪ್ರತಿನಿಧಿಗಳಾದ ಜ್ಯೋತಿ, ಮಂಜುಳಾ, ಅಮರಾವತಿ, ಕಾಂತಮ್ಮ, ಲೀಲಾವತಿ, ಭಾವನಾ, ವಿಜಯಮ್ಮ, ನೇತ್ರಾವತಿ, ಕಮಲಮ್ಮ, ಶ್ವೇತಾ, ಪದ್ಮಾವತಿ ಮುಂತಾದವರು ವಹಿಸಿದ್ದರು

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

3 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

15 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

16 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

19 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

19 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

24 hours ago