ಕೋಲಾರ: ಮಹಿಳಾ ಸ್ವಸಹಾಯ ಸಂಘದ ಸದಸ್ಯರ ಠೇವಣಿ ಹಣವನ್ನು ಕೂಡಲೇ ವಾಪಸು ನೀಡುವಂತೆ ಮಹಿಳಾ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ಹುತ್ತೂರು ಹೋಬಳಿ ವ್ಯಾಪ್ತಿಯ ಮಹಿಳಾ ಸಂಘಗಳು ಮಂಗಳವಾರ ನಗರದ ಡಿಸಿಸಿ ಬ್ಯಾಂಕ್ ಮುಂದೆ ಧರಣಿ ನಡೆಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಶಶಿಕಲಾ ಮಾತನಾಡಿ, ಜಿಲ್ಲೆಯ ಹುತ್ತೂರು ಹೋಬಳಿ ವ್ಯಾಪ್ತಿಯ ಮಹಿಳಾ ಸಂಘಗಳಿಗೆ ಸಾಲು ನೀಡುವುದಾಗಿ ನಂಬಿಸಿ ಸುಮಾರು 70 ರಿಂದ 80 ಸಾವಿರದವರಗೆ 300 ಸಂಘಗಳಿಂದ ಠೇವಣಿ ಹಣವನ್ನು ಸಂಗ್ರಹಿಸಿ ಸುಮಾರು ಎರಡು ವರ್ಷ ಕಳೆದರು ಇದುವರೆಗೂ ಯಾವುದೇ ಸಾಲವನ್ನು ನೀಡದೇ ಮಹಿಳೆಯರಿಗೆ ವಂಚನೆ ಮಾಡಿದ್ದಾರೆ ಸಾಲ ಕಟ್ಟಿಲ್ಲವೆಂದರೆ ಮನೆ ತನಕ ಬರುವ ಅಧಿಕಾರಿಗಳು ನಮ್ಮ ಠೇವಣಿ ಹಣವನ್ನು ಇಷ್ಟು ದಿನಗಳವರೆಗೆ ಹಾಗೆಯೇ ಇಟ್ಟುಕೊಂಡಿದ್ದಾರೆ ಇದಕ್ಕೆ ಹೊಣೆ ಯಾರು ಕೂಡಲೇ ನಮ್ಮ ಠೇವಣಿ ಹಣವನ್ನು ವಾಪಸ್ಸು ನೀಡುವಂತೆ ಒತ್ತಾಯಿಸಿದರು.
ಈಗಾಗಲೇ ಹುತ್ತೂರು ಸೊಸೈಟಿಯ ವಡಗೂರು ಶಾಖೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಆಡಳಿತ ಮಂಡಳಿಗೆ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ ಜೊತೆಗೆ ಕಳೆದ ಸರ್ವ ಸದಸ್ಯರ ಸಭೆಯಲ್ಲಿ ಸಹ ಈ ವಿಷಯದ ಕುರಿತಾಗಿ ಪ್ರಸ್ತಾವನೆ ಮಾಡಲಾಗಿದೆ ಹಣ ಕೊಟ್ಟಿದ್ದರಿಂದ ತಮ್ಮ ಮನೆಗಳಲ್ಲಿ ನಿರಂತರವಾಗಿ ಗಲಾಟೆಗಳು ನಡೆಯುತ್ತಿದ್ದು ಹೆಣ್ಣು ಮಕ್ಕಳು ಮನೆ ಬಿಡುವ ಸನ್ನಿವೇಶ ಬಂದಿದೆ ಕೂಡಲೇ ಹಣ ವಾಪಸ್ಸು ಮಾಡಬೇಕು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟಕ್ಕೆ ಹೋಬಳಿ ವ್ಯಾಪ್ತಿಯ ಮಹಿಳಾ ಸಂಘಗಳು ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಹುತ್ತೂರು ಸೊಸೈಟಿ ಅಧ್ಯಕ್ಷ ಕೋಟೆ ಸಿ.ಎಂ ನಾರಾಯಣಸ್ವಾಮಿ ಮಾತನಾಡಿ ಸೊಸೈಟಿಯಲ್ಲಿನ ಹಿಂದಿನ ಸಿಇಒ ವಿಜಯಕುಮಾರ್ ಅವರು ಸುಮಾರು 116 ಮಹಿಳಾ ಸಂಘಗಳಿಂದ 1.35 ಕೋಟಿ ಹಣವನ್ನು ಸಂಗ್ರಹಿಸಿ ಬ್ಯಾಂಕ್ ಗೆ ಕಟ್ಟದೇ ಸ್ವಂತಕ್ಕೆ ದುರುಪಯೋಗ ಮಾಡಿಕೊಂಡಿದ್ದಾನೆ ಅತನ ವಿರುದ್ದ ಈಗಾಗಲೇ ದೂರು ದಾಖಲಾಗಿದೆ ಅತನ ಬೇಜಾವ್ದಾರಿಯಿಂದ ಇಂತಹ ಪರಿಸ್ಥಿತಿ ಬಂದಿದೆ ಕೋರ್ಟ್ ಮೂಲಕ ವಸೂಲಿ ಮಾಡಲಾಗುತ್ತಾ ಇದೆ ಎಂದು ಸಮಜಾಯಿಷಿ ನೀಡಿದರು.
ಈ ಸಂದರ್ಭದಲ್ಲಿ ಮಹಿಳಾ ಸಂಘಗಳ ಪ್ರತಿನಿಧಿಗಳಾದ ಜ್ಯೋತಿ, ಮಂಜುಳಾ, ಅಮರಾವತಿ, ಕಾಂತಮ್ಮ, ಲೀಲಾವತಿ, ಭಾವನಾ, ವಿಜಯಮ್ಮ, ನೇತ್ರಾವತಿ, ಕಮಲಮ್ಮ, ಶ್ವೇತಾ, ಪದ್ಮಾವತಿ ಮುಂತಾದವರು ವಹಿಸಿದ್ದರು
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…