ಸಾಲ ವಾಪಸ್ಸು ಕೇಳಿದ್ದಕ್ಕೆ ಕಾರ್ಪೆಂಟರ್ ನಾಗೇಶ್ ಆಚಾರ್ ಎಂಬುವವರನ್ನು ದಿನಾಂಕ 27.11.2021 ರಂದು ರಾತ್ರಿ ಮೂಡಿಗೆರೆ ತಾಲೂಕಿನ ಬಿದುರುತಳ ಅರಣ್ಯ ಪ್ರದೇಶದಲ್ಲಿ ಬಂದೂಕಿನಿಂದ ಗುಂಡು ಹಾರಿಸಿ, ಕೊಲೆ ಮಾಡಿ ಹೆಣ ಹೂತು ಹಾಕಿದ್ದ ಪ್ರಕರಣದಲ್ಲಿನ ಎರಡು ಜನ ಆರೋಪಿಗಳಿಗೆ ಘನ ನ್ಯಾಯಾಲಯವು ಶಿಕ್ಷೆ ಮತ್ತು ದಂಡ ವಿಧಿಸಿರುತ್ತದೆ.
ಪ್ರಕರಣದಲ್ಲಿನ 1ನೇ ಆರೋಪಿಯಾದ ಕೃಷ್ಣೇಗೌಡ ಈತನಿಗೆ ಜೀವಾವಧಿ ಶಿಕ್ಷೆ ಮತ್ತು ರೂ. 50,000.00 ದಂಡ ಮತ್ತು 2ನೇ ಆರೋಪಿಯಾದ ಉದಯ ಬಿ.ಸಿ ಈತನಿಗೆ 3 ವರ್ಷಗಳ ಕಠಿಣ ಶಿಕ್ಷೆ ಮತ್ತು ರೂ. 3,000.00 ದಂಡ ವಿಧಿಸಿ ದಿನಾಂಕ 10.10.2024 ರಂದು ಘನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಿಕ್ಕಮಗಳೂರು ತೀರ್ಪು ನೀಡಿರುತ್ತದೆ.
ಪ್ರಕರಣದ ತನಿಖೆಯನ್ನು ಸಿಪಿಐ ಸೋಮಶೇಖರ್ ಜಿ ಸಿ ರವರು ನಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ತನಿಖಾ ಸಹಾಯಕರಾಗಿ ಸಿಪಿಸಿ ವೈಭವ್ ಮತ್ತು ಸಿಪಿಸಿ ಮನು ಹಾಗೂ ನ್ಯಾಯಾಲಯದ ಕರ್ತವ್ಯನ್ನು ಎಎಸ್ಐ ಯತೀಶ್ ರವರು ನಿರ್ವಹಿಸಿದ್ದು, ಸರ್ಕಾರಿ ಅಭಿಯೋಜಕರಾದ ಹೆಚ್ ಎಸ್ ಲೋಹಿತಾಶ್ವಚಾರ್ ರವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು ಎಂದು ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಕಚೇರಿ ತಿಳಿಸಿದೆ.
ಮಗನಿಂದಲೇ ತಾಯಿ ಕೊಲೆಯಾಗಿರುವ ಘಟನೆ ಇಂದು ಮಧ್ಯಾಹ್ನ ಬೆಂಗಳೂರಿನ ಆರ್ ಆರ್ ನಗರದ ಬೆಮಲ್ ಲೇಔಟ್ ನಲ್ಲಿ ನಡೆದಿದೆ... ಮೂರನೇ…
ಬೇಸಿಗೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಾರ್ವಜನಿಕರು ಸಹಾಯವಾಣಿಗೆ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್ಐಡಿ) ಸಂಖ್ಯೆ ಹೊಂದಿರುವುದು ಕಡ್ಡಾಯ…
2026-27ನೇ ಸಾಲಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ(ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್ಲೈನ್…
ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಮಾದಿಗ ಮಹಾಸಭಾ ವತಿಯಿಂದ…
ಕ್ಯಾಂಟರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಸ್ನೇಹಿತರ ಜೊತೆಯಲ್ಲಿ ದೇವಾಲಯಕ್ಕೆ ಹೊರಟಿದ್ದ ಯುವಕ ಸಾವನ್ನಪ್ಪಿದ್ದಾನೆ. ಹನುಮಂತ (17) ಮೃತ…