Categories: Crime

ಸಾಲ ವಾಪಸ್ಸು ಕೇಳಿದ್ದಕ್ಕೆ ಕಾರ್ಪೆಂಟರ್ ಗೆ ಬಂದೂಕಿನಿಂದ ಗುಂಡು ಹಾರಿಸಿ, ಕೊಲೆ ಮಾಡಿ ಹೆಣ ಹೂತು ಹಾಕಿದ್ದ ಪ್ರಕರಣ: ಎರಡು ಜನ ಆರೋಪಿಗಳಿಗೆ‌ ದಂಡ, ಶಿಕ್ಷೆ ವಿಧಿಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ: ಶಿಕ್ಷೆಯ ವಿವರ ಇಲ್ಲಿದೆ…

ಸಾಲ ವಾಪಸ್ಸು ಕೇಳಿದ್ದಕ್ಕೆ ಕಾರ್ಪೆಂಟರ್ ನಾಗೇಶ್ ಆಚಾರ್ ಎಂಬುವವರನ್ನು ದಿನಾಂಕ 27.11.2021 ರಂದು ರಾತ್ರಿ ಮೂಡಿಗೆರೆ ತಾಲೂಕಿನ ಬಿದುರುತಳ ಅರಣ್ಯ ಪ್ರದೇಶದಲ್ಲಿ ಬಂದೂಕಿನಿಂದ ಗುಂಡು ಹಾರಿಸಿ, ಕೊಲೆ ಮಾಡಿ ಹೆಣ ಹೂತು ಹಾಕಿದ್ದ ಪ್ರಕರಣದಲ್ಲಿನ ಎರಡು ಜನ ಆರೋಪಿಗಳಿಗೆ ಘನ ನ್ಯಾಯಾಲಯವು ಶಿಕ್ಷೆ ಮತ್ತು ದಂಡ ವಿಧಿಸಿರುತ್ತದೆ.

ಪ್ರಕರಣದಲ್ಲಿನ 1ನೇ ಆರೋಪಿಯಾದ ಕೃಷ್ಣೇಗೌಡ ಈತನಿಗೆ ಜೀವಾವಧಿ ಶಿಕ್ಷೆ ಮತ್ತು ರೂ. 50,000.00 ದಂಡ ಮತ್ತು 2ನೇ ಆರೋಪಿಯಾದ ಉದಯ ಬಿ.ಸಿ ಈತನಿಗೆ 3 ವರ್ಷಗಳ ಕಠಿಣ ಶಿಕ್ಷೆ ಮತ್ತು ರೂ. 3,000.00 ದಂಡ ವಿಧಿಸಿ ದಿನಾಂಕ 10.10.2024 ರಂದು ಘನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಿಕ್ಕಮಗಳೂರು ತೀರ್ಪು ನೀಡಿರುತ್ತದೆ.

ಪ್ರಕರಣದ ತನಿಖೆಯನ್ನು ಸಿಪಿಐ ಸೋಮಶೇಖರ್ ಜಿ ಸಿ ರವರು ನಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ತನಿಖಾ ಸಹಾಯಕರಾಗಿ ಸಿಪಿಸಿ ವೈಭವ್ ಮತ್ತು ಸಿಪಿಸಿ ಮನು ಹಾಗೂ ನ್ಯಾಯಾಲಯದ ಕರ್ತವ್ಯನ್ನು ಎಎಸ್ಐ ಯತೀಶ್ ರವರು ನಿರ್ವಹಿಸಿದ್ದು, ಸರ್ಕಾರಿ ಅಭಿಯೋಜಕರಾದ ಹೆಚ್ ಎಸ್ ಲೋಹಿತಾಶ್ವಚಾರ್ ರವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು ಎಂದು ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಕಚೇರಿ ತಿಳಿಸಿದೆ.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

16 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

18 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

2 days ago