ಸಾವಿನಂಚಿನಲ್ಲಿದ್ದ ಉಬರ್‌ ಡ್ರೈವರ್‌: ಅದೇ ಕಾರಿನಲ್ಲಿದ್ದ ಮೆಡಿಕವರ್‌ ವೈದ್ಯರಿಂದ ಜೀವರಕ್ಷೆ

 

ವೈಟ್ ಫೀಲ್ದ್‌,ಬೆಂಗಳೂರು ಫೆ.6 : ವೈದ್ಯೋ ನಾರಾಯಣ ಹರಿ ಅಂತಾರೆ.. ಅದು ಇವತ್ತು ಒಬ್ಬ ಉಬರ್‌ ಡ್ರೈವರ್‌ ಪಾಲಿಗೆ ಮಾತ್ರ ಇಂದು ಅಕ್ಷರಶಃ ನಿಜವಾಗಿದೆ. ಮೆಡಿಕವರ್‌ ಆಸ್ಪತ್ರೆಯ ಇಬ್ಬರು ವೈದ್ಯರು ದೇವರಾಗಿ ಆತನ ಪ್ರಾಣವನ್ನು ಉಳಿಸಿದ್ದಾರೆ.

ಉಬರ್‌ ಡ್ರೈವರ್‌  ವಾಹನ ಚಾಲನೆ ಮಾಡುತ್ತುರುವಾಗ ಮೂರ್ಛೆರೋಗ ಬಂದು ಗಾಡಿ ಓಡಿಸೋದಕ್ಕೆ ಕಂಟ್ರೋಲ್‌ ತಪ್ಪಿ, ಲೈಟ್‌ ಕಂಬಕ್ಕೆ ಗುದ್ದಿದ್ದಾರೆ. ಅದೇ ಉಬರ್‌ ಕಾರಿನಲ್ಲಿದ್ದ ಮೆಡಿಕವರ್‌ ಆಸ್ಪತ್ರೆಯ ವೈದ್ಯರಾದ ಡಾ. ರಾಜಸ್ವೆಲ್ವರಾಜನ್‌ ಹಾಗೂ ಡಾ. ರವೀಂದ್ರರವರ ಸಮಯ ಪ್ರಜ್ಷೆಯಿಂದ ಡ್ರೈವರ್‌ ಗೆ ಸ್ಥಳದಲ್ಲಿಯೇ ಚಿಕಿತ್ಸೆ ನೀಡಿ‌ ಡ್ರೈವರ್ ನ ಪ್ರಾಣ ಉಳಿಸಿದ್ದಾರೆ.

ಇಂದು ಬೆಳಿಗ್ಗೆ ಮನೆಯಿಂದ ಆಸ್ಪತ್ರೆಗೆ ಉಬರ್‌ ನಲ್ಲಿ ಬರುತ್ತಾ ಇದ್ದ ವೈಟ್‌ ಫಿಲ್ದ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯ ಹಿರಿಯ ಆರ್ಥೋಪೆಡಿಕ್‌ ಸರ್ಜನ್‌ ರವೀಂದ್ರ ಪುಟ್ಟಸ್ವಾಮಯ್ಯ ಹಾಗೂ ಹಿರಿಯ ಸಲಹೆಗಾರ ವೈದ್ಯ ಡಾ. ರಾಜ ಸ್ವೆಲ್ಪರಾಜನ್‌ ಗರುಡಾಚಾರ್ಯಪಾಳ್ಯದಿಂದ ಬೆಳಗ್ಗೆ 9.30ಕ್ಕೆ ಮೆಡಿಕವರ್‌ ಆಸ್ಪತ್ರೆಗೆ ಉಬರ್‌ ಬುಕ್‌ ಮಾಡಿಕೊಂಡು ಬರುತ್ತಾ ಇದ್ದರು. ಕಾರು ಹತ್ತಿದಾಗ ಇಬ್ಬರು ವೈದ್ಯರು, ಡ್ರೈವರ್‌ ಬಳಿ ಸಹಜ ಮಾತುಕತೆ ನಡೆಸುತ್ತಾ ಇದ್ದರು. ಸ್ವಲ್ಪ ಹೊತ್ತಿನ ಬಳಿಕ ಡ್ರೈವರ್‌ ಮಾತಾಡೋದನ್ನು ನಿಲ್ಲಿಸಿದರು ಹಾಗೂ ಡ್ರೈವರ್‌ ಗೆ ಕಾರು ಓಡಿಸಲು ಸಾಧ್ಯವಾಗದೇ ಸಂಪೂರ್ಣ ಕಂಟ್ರೋಲ್‌ ತಪ್ಪಿ ಹೋಯಿತು. ಇದನ್ನು ಗಮನಿಸಿದ ವೈದ್ಯರು ಡ್ರೈವರ್‌ ಗೆ ಏನೋ ಸಮಸ್ಯೆಯಾಗುತ್ತಿದೆ ಎಂದು ಅಂದುಕೋಳ್ಳುತ್ತಾ, ಡ್ರೈವರ್‌ ಗೆ ಏನಾಯ್ತು ಎಂದು ಕೇಳುವಷ್ಟರಲ್ಲಿ , ಕಾರು ಮುಂದಕ್ಕೆ ಹೋಗುವ ಬದಲು, ರಸ್ತೆ ಬದಿಯಲ್ಲಿ ನಿಂತಿದ್ದ ಬೇರೆ ಕಾರಿಗೆ ಗುದ್ದಿಹೋಯ್ತು. ಅಲ್ಲದೇ ಅಲ್ಲೇ ಇದ್ದ ಲೈಟ್‌ ಕಂಬಕ್ಕೆ ಸಹ ಗುದ್ದಿ ಕಾರು ಹಿಂದಕ್ಕೆ ಬಂತು . ಅಷ್ಟು ಆಗುವಷ್ಟರಲ್ಲಿ ಕಾರಿನ ಹಿಂದೆ ಕೂತಿದ್ದ ಡಾ. ರವೀಂದ್ರ ಪುಟ್ಟಸ್ವಾಮಯ್ಯ ಅವರು ಕಾರಿನ ಹ್ಯಾಂಡ್‌ ಬ್ರೇಕ್‌ ಹಾಕಿದರು.

 

ಹಾಗಾಗೀ ಆಗಬೇಕಾದ ಆಪಾಯ ತಪ್ಪಿ ಹೋಯಿತು. ಕಾರಿನಲ್ಲಿದ್ದ ಹಾಗೂ ಹೊರಗಡೆ ಗುದ್ದಿನ ಕಾರಿನವರಿಗಾಗಲೀ, ಪಾದಚಾರಿಗಾಗಲೀ ಯಾವುದೇ ಸಮಸ್ಯೆಯಾಗಿಲ್ಲ. ಅದೃಷ್ಟವಾಶಾತ್‌ ವೈದ್ಯರ ಸಮಯ ಪ್ರಜ್ಞೆಯಿಂದ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಡ್ರೈವರ್‌ ಗೆ ಅಷ್ಟರಲ್ಲಾಗಲೇ ಬಾಯಿಯಲ್ಲಿ ನೊರೆ ಬರೋದಕ್ಕೆ ಶುರುವಾಗಿ ಸಂಪೂರ್ಣವಾಗಿ ಮೂರ್ಛೆ ಹೋಗಿದ್ದರು. ಕೂಡಲೇ ಡಾ. ರಾಜಸ್ವೆಲ್ವರಾಜನ್‌ಡ್ರೈವರ್‌ ಅನ್ನು ಹಿಡಿದರು ಹಾಗೂ ಡಾ. ರವೀಂದ್ರ ಪುಟ್ಟಸ್ವಾಮಯ್ಯ ಅವರು ಡ್ರೈವರನ್ನು ಕಾರಿನ ಹಿಂದೆ ಮಲಗಿಸಿ ಸೂಕ್ತ ಚಿಕಿತ್ಸೆ ನೀಡಿದರು. ಸ್ವಲ್ಪ ಹೊತ್ತಿನ ಬಳಿಕ ಅಲ್ಲೇ ಇದ್ದು ಅವರನ್ನು ಸರಿಯಾದ ಚಿಕಿತ್ಸೆ ನೀಡಿ, ಯಾವೆಲ್ಲ ಔಷಧಿ ಕೊಡಬೇಕೆಂದು ಸಲಹೆ ಕೂಡ ನೀಡಿದರು. ಡ್ರೈವರ್‌ ಸ್ವಲ್ಪ ಸುಧಾರಿಸಿದ ನಂತರ ಕ್ಯಾಬ್‌ ಮಾಡಿಕೊಟ್ಟು, ಕೈಯಲ್ಲಿ ಸ್ವಲ್ಪ ದುಡ್ಡು ಕೊಟ್ಟು ಮನೆಗೆ ಕಳುಹಿಸಿ ಕೊಟ್ಟು ಮಾನವೀಯತೆ ಮೆರೆದಿದ್ದಾರೆ.

Ramesh Babu

Journalist

Recent Posts

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

40 minutes ago

ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…

1 hour ago

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

16 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

20 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

21 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

1 day ago