ಸಾವಿನಂಚಿನಲ್ಲಿದ್ದ ಉಬರ್‌ ಡ್ರೈವರ್‌: ಅದೇ ಕಾರಿನಲ್ಲಿದ್ದ ಮೆಡಿಕವರ್‌ ವೈದ್ಯರಿಂದ ಜೀವರಕ್ಷೆ

 

ವೈಟ್ ಫೀಲ್ದ್‌,ಬೆಂಗಳೂರು ಫೆ.6 : ವೈದ್ಯೋ ನಾರಾಯಣ ಹರಿ ಅಂತಾರೆ.. ಅದು ಇವತ್ತು ಒಬ್ಬ ಉಬರ್‌ ಡ್ರೈವರ್‌ ಪಾಲಿಗೆ ಮಾತ್ರ ಇಂದು ಅಕ್ಷರಶಃ ನಿಜವಾಗಿದೆ. ಮೆಡಿಕವರ್‌ ಆಸ್ಪತ್ರೆಯ ಇಬ್ಬರು ವೈದ್ಯರು ದೇವರಾಗಿ ಆತನ ಪ್ರಾಣವನ್ನು ಉಳಿಸಿದ್ದಾರೆ.

ಉಬರ್‌ ಡ್ರೈವರ್‌  ವಾಹನ ಚಾಲನೆ ಮಾಡುತ್ತುರುವಾಗ ಮೂರ್ಛೆರೋಗ ಬಂದು ಗಾಡಿ ಓಡಿಸೋದಕ್ಕೆ ಕಂಟ್ರೋಲ್‌ ತಪ್ಪಿ, ಲೈಟ್‌ ಕಂಬಕ್ಕೆ ಗುದ್ದಿದ್ದಾರೆ. ಅದೇ ಉಬರ್‌ ಕಾರಿನಲ್ಲಿದ್ದ ಮೆಡಿಕವರ್‌ ಆಸ್ಪತ್ರೆಯ ವೈದ್ಯರಾದ ಡಾ. ರಾಜಸ್ವೆಲ್ವರಾಜನ್‌ ಹಾಗೂ ಡಾ. ರವೀಂದ್ರರವರ ಸಮಯ ಪ್ರಜ್ಷೆಯಿಂದ ಡ್ರೈವರ್‌ ಗೆ ಸ್ಥಳದಲ್ಲಿಯೇ ಚಿಕಿತ್ಸೆ ನೀಡಿ‌ ಡ್ರೈವರ್ ನ ಪ್ರಾಣ ಉಳಿಸಿದ್ದಾರೆ.

ಇಂದು ಬೆಳಿಗ್ಗೆ ಮನೆಯಿಂದ ಆಸ್ಪತ್ರೆಗೆ ಉಬರ್‌ ನಲ್ಲಿ ಬರುತ್ತಾ ಇದ್ದ ವೈಟ್‌ ಫಿಲ್ದ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯ ಹಿರಿಯ ಆರ್ಥೋಪೆಡಿಕ್‌ ಸರ್ಜನ್‌ ರವೀಂದ್ರ ಪುಟ್ಟಸ್ವಾಮಯ್ಯ ಹಾಗೂ ಹಿರಿಯ ಸಲಹೆಗಾರ ವೈದ್ಯ ಡಾ. ರಾಜ ಸ್ವೆಲ್ಪರಾಜನ್‌ ಗರುಡಾಚಾರ್ಯಪಾಳ್ಯದಿಂದ ಬೆಳಗ್ಗೆ 9.30ಕ್ಕೆ ಮೆಡಿಕವರ್‌ ಆಸ್ಪತ್ರೆಗೆ ಉಬರ್‌ ಬುಕ್‌ ಮಾಡಿಕೊಂಡು ಬರುತ್ತಾ ಇದ್ದರು. ಕಾರು ಹತ್ತಿದಾಗ ಇಬ್ಬರು ವೈದ್ಯರು, ಡ್ರೈವರ್‌ ಬಳಿ ಸಹಜ ಮಾತುಕತೆ ನಡೆಸುತ್ತಾ ಇದ್ದರು. ಸ್ವಲ್ಪ ಹೊತ್ತಿನ ಬಳಿಕ ಡ್ರೈವರ್‌ ಮಾತಾಡೋದನ್ನು ನಿಲ್ಲಿಸಿದರು ಹಾಗೂ ಡ್ರೈವರ್‌ ಗೆ ಕಾರು ಓಡಿಸಲು ಸಾಧ್ಯವಾಗದೇ ಸಂಪೂರ್ಣ ಕಂಟ್ರೋಲ್‌ ತಪ್ಪಿ ಹೋಯಿತು. ಇದನ್ನು ಗಮನಿಸಿದ ವೈದ್ಯರು ಡ್ರೈವರ್‌ ಗೆ ಏನೋ ಸಮಸ್ಯೆಯಾಗುತ್ತಿದೆ ಎಂದು ಅಂದುಕೋಳ್ಳುತ್ತಾ, ಡ್ರೈವರ್‌ ಗೆ ಏನಾಯ್ತು ಎಂದು ಕೇಳುವಷ್ಟರಲ್ಲಿ , ಕಾರು ಮುಂದಕ್ಕೆ ಹೋಗುವ ಬದಲು, ರಸ್ತೆ ಬದಿಯಲ್ಲಿ ನಿಂತಿದ್ದ ಬೇರೆ ಕಾರಿಗೆ ಗುದ್ದಿಹೋಯ್ತು. ಅಲ್ಲದೇ ಅಲ್ಲೇ ಇದ್ದ ಲೈಟ್‌ ಕಂಬಕ್ಕೆ ಸಹ ಗುದ್ದಿ ಕಾರು ಹಿಂದಕ್ಕೆ ಬಂತು . ಅಷ್ಟು ಆಗುವಷ್ಟರಲ್ಲಿ ಕಾರಿನ ಹಿಂದೆ ಕೂತಿದ್ದ ಡಾ. ರವೀಂದ್ರ ಪುಟ್ಟಸ್ವಾಮಯ್ಯ ಅವರು ಕಾರಿನ ಹ್ಯಾಂಡ್‌ ಬ್ರೇಕ್‌ ಹಾಕಿದರು.

 

ಹಾಗಾಗೀ ಆಗಬೇಕಾದ ಆಪಾಯ ತಪ್ಪಿ ಹೋಯಿತು. ಕಾರಿನಲ್ಲಿದ್ದ ಹಾಗೂ ಹೊರಗಡೆ ಗುದ್ದಿನ ಕಾರಿನವರಿಗಾಗಲೀ, ಪಾದಚಾರಿಗಾಗಲೀ ಯಾವುದೇ ಸಮಸ್ಯೆಯಾಗಿಲ್ಲ. ಅದೃಷ್ಟವಾಶಾತ್‌ ವೈದ್ಯರ ಸಮಯ ಪ್ರಜ್ಞೆಯಿಂದ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಡ್ರೈವರ್‌ ಗೆ ಅಷ್ಟರಲ್ಲಾಗಲೇ ಬಾಯಿಯಲ್ಲಿ ನೊರೆ ಬರೋದಕ್ಕೆ ಶುರುವಾಗಿ ಸಂಪೂರ್ಣವಾಗಿ ಮೂರ್ಛೆ ಹೋಗಿದ್ದರು. ಕೂಡಲೇ ಡಾ. ರಾಜಸ್ವೆಲ್ವರಾಜನ್‌ಡ್ರೈವರ್‌ ಅನ್ನು ಹಿಡಿದರು ಹಾಗೂ ಡಾ. ರವೀಂದ್ರ ಪುಟ್ಟಸ್ವಾಮಯ್ಯ ಅವರು ಡ್ರೈವರನ್ನು ಕಾರಿನ ಹಿಂದೆ ಮಲಗಿಸಿ ಸೂಕ್ತ ಚಿಕಿತ್ಸೆ ನೀಡಿದರು. ಸ್ವಲ್ಪ ಹೊತ್ತಿನ ಬಳಿಕ ಅಲ್ಲೇ ಇದ್ದು ಅವರನ್ನು ಸರಿಯಾದ ಚಿಕಿತ್ಸೆ ನೀಡಿ, ಯಾವೆಲ್ಲ ಔಷಧಿ ಕೊಡಬೇಕೆಂದು ಸಲಹೆ ಕೂಡ ನೀಡಿದರು. ಡ್ರೈವರ್‌ ಸ್ವಲ್ಪ ಸುಧಾರಿಸಿದ ನಂತರ ಕ್ಯಾಬ್‌ ಮಾಡಿಕೊಟ್ಟು, ಕೈಯಲ್ಲಿ ಸ್ವಲ್ಪ ದುಡ್ಡು ಕೊಟ್ಟು ಮನೆಗೆ ಕಳುಹಿಸಿ ಕೊಟ್ಟು ಮಾನವೀಯತೆ ಮೆರೆದಿದ್ದಾರೆ.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

3 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

6 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

18 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

19 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

21 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

23 hours ago