ಸಾವಿನಂಚಿನಲ್ಲಿದ್ದ ಉಬರ್‌ ಡ್ರೈವರ್‌: ಅದೇ ಕಾರಿನಲ್ಲಿದ್ದ ಮೆಡಿಕವರ್‌ ವೈದ್ಯರಿಂದ ಜೀವರಕ್ಷೆ

 

ವೈಟ್ ಫೀಲ್ದ್‌,ಬೆಂಗಳೂರು ಫೆ.6 : ವೈದ್ಯೋ ನಾರಾಯಣ ಹರಿ ಅಂತಾರೆ.. ಅದು ಇವತ್ತು ಒಬ್ಬ ಉಬರ್‌ ಡ್ರೈವರ್‌ ಪಾಲಿಗೆ ಮಾತ್ರ ಇಂದು ಅಕ್ಷರಶಃ ನಿಜವಾಗಿದೆ. ಮೆಡಿಕವರ್‌ ಆಸ್ಪತ್ರೆಯ ಇಬ್ಬರು ವೈದ್ಯರು ದೇವರಾಗಿ ಆತನ ಪ್ರಾಣವನ್ನು ಉಳಿಸಿದ್ದಾರೆ.

ಉಬರ್‌ ಡ್ರೈವರ್‌  ವಾಹನ ಚಾಲನೆ ಮಾಡುತ್ತುರುವಾಗ ಮೂರ್ಛೆರೋಗ ಬಂದು ಗಾಡಿ ಓಡಿಸೋದಕ್ಕೆ ಕಂಟ್ರೋಲ್‌ ತಪ್ಪಿ, ಲೈಟ್‌ ಕಂಬಕ್ಕೆ ಗುದ್ದಿದ್ದಾರೆ. ಅದೇ ಉಬರ್‌ ಕಾರಿನಲ್ಲಿದ್ದ ಮೆಡಿಕವರ್‌ ಆಸ್ಪತ್ರೆಯ ವೈದ್ಯರಾದ ಡಾ. ರಾಜಸ್ವೆಲ್ವರಾಜನ್‌ ಹಾಗೂ ಡಾ. ರವೀಂದ್ರರವರ ಸಮಯ ಪ್ರಜ್ಷೆಯಿಂದ ಡ್ರೈವರ್‌ ಗೆ ಸ್ಥಳದಲ್ಲಿಯೇ ಚಿಕಿತ್ಸೆ ನೀಡಿ‌ ಡ್ರೈವರ್ ನ ಪ್ರಾಣ ಉಳಿಸಿದ್ದಾರೆ.

ಇಂದು ಬೆಳಿಗ್ಗೆ ಮನೆಯಿಂದ ಆಸ್ಪತ್ರೆಗೆ ಉಬರ್‌ ನಲ್ಲಿ ಬರುತ್ತಾ ಇದ್ದ ವೈಟ್‌ ಫಿಲ್ದ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯ ಹಿರಿಯ ಆರ್ಥೋಪೆಡಿಕ್‌ ಸರ್ಜನ್‌ ರವೀಂದ್ರ ಪುಟ್ಟಸ್ವಾಮಯ್ಯ ಹಾಗೂ ಹಿರಿಯ ಸಲಹೆಗಾರ ವೈದ್ಯ ಡಾ. ರಾಜ ಸ್ವೆಲ್ಪರಾಜನ್‌ ಗರುಡಾಚಾರ್ಯಪಾಳ್ಯದಿಂದ ಬೆಳಗ್ಗೆ 9.30ಕ್ಕೆ ಮೆಡಿಕವರ್‌ ಆಸ್ಪತ್ರೆಗೆ ಉಬರ್‌ ಬುಕ್‌ ಮಾಡಿಕೊಂಡು ಬರುತ್ತಾ ಇದ್ದರು. ಕಾರು ಹತ್ತಿದಾಗ ಇಬ್ಬರು ವೈದ್ಯರು, ಡ್ರೈವರ್‌ ಬಳಿ ಸಹಜ ಮಾತುಕತೆ ನಡೆಸುತ್ತಾ ಇದ್ದರು. ಸ್ವಲ್ಪ ಹೊತ್ತಿನ ಬಳಿಕ ಡ್ರೈವರ್‌ ಮಾತಾಡೋದನ್ನು ನಿಲ್ಲಿಸಿದರು ಹಾಗೂ ಡ್ರೈವರ್‌ ಗೆ ಕಾರು ಓಡಿಸಲು ಸಾಧ್ಯವಾಗದೇ ಸಂಪೂರ್ಣ ಕಂಟ್ರೋಲ್‌ ತಪ್ಪಿ ಹೋಯಿತು. ಇದನ್ನು ಗಮನಿಸಿದ ವೈದ್ಯರು ಡ್ರೈವರ್‌ ಗೆ ಏನೋ ಸಮಸ್ಯೆಯಾಗುತ್ತಿದೆ ಎಂದು ಅಂದುಕೋಳ್ಳುತ್ತಾ, ಡ್ರೈವರ್‌ ಗೆ ಏನಾಯ್ತು ಎಂದು ಕೇಳುವಷ್ಟರಲ್ಲಿ , ಕಾರು ಮುಂದಕ್ಕೆ ಹೋಗುವ ಬದಲು, ರಸ್ತೆ ಬದಿಯಲ್ಲಿ ನಿಂತಿದ್ದ ಬೇರೆ ಕಾರಿಗೆ ಗುದ್ದಿಹೋಯ್ತು. ಅಲ್ಲದೇ ಅಲ್ಲೇ ಇದ್ದ ಲೈಟ್‌ ಕಂಬಕ್ಕೆ ಸಹ ಗುದ್ದಿ ಕಾರು ಹಿಂದಕ್ಕೆ ಬಂತು . ಅಷ್ಟು ಆಗುವಷ್ಟರಲ್ಲಿ ಕಾರಿನ ಹಿಂದೆ ಕೂತಿದ್ದ ಡಾ. ರವೀಂದ್ರ ಪುಟ್ಟಸ್ವಾಮಯ್ಯ ಅವರು ಕಾರಿನ ಹ್ಯಾಂಡ್‌ ಬ್ರೇಕ್‌ ಹಾಕಿದರು.

 

ಹಾಗಾಗೀ ಆಗಬೇಕಾದ ಆಪಾಯ ತಪ್ಪಿ ಹೋಯಿತು. ಕಾರಿನಲ್ಲಿದ್ದ ಹಾಗೂ ಹೊರಗಡೆ ಗುದ್ದಿನ ಕಾರಿನವರಿಗಾಗಲೀ, ಪಾದಚಾರಿಗಾಗಲೀ ಯಾವುದೇ ಸಮಸ್ಯೆಯಾಗಿಲ್ಲ. ಅದೃಷ್ಟವಾಶಾತ್‌ ವೈದ್ಯರ ಸಮಯ ಪ್ರಜ್ಞೆಯಿಂದ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಡ್ರೈವರ್‌ ಗೆ ಅಷ್ಟರಲ್ಲಾಗಲೇ ಬಾಯಿಯಲ್ಲಿ ನೊರೆ ಬರೋದಕ್ಕೆ ಶುರುವಾಗಿ ಸಂಪೂರ್ಣವಾಗಿ ಮೂರ್ಛೆ ಹೋಗಿದ್ದರು. ಕೂಡಲೇ ಡಾ. ರಾಜಸ್ವೆಲ್ವರಾಜನ್‌ಡ್ರೈವರ್‌ ಅನ್ನು ಹಿಡಿದರು ಹಾಗೂ ಡಾ. ರವೀಂದ್ರ ಪುಟ್ಟಸ್ವಾಮಯ್ಯ ಅವರು ಡ್ರೈವರನ್ನು ಕಾರಿನ ಹಿಂದೆ ಮಲಗಿಸಿ ಸೂಕ್ತ ಚಿಕಿತ್ಸೆ ನೀಡಿದರು. ಸ್ವಲ್ಪ ಹೊತ್ತಿನ ಬಳಿಕ ಅಲ್ಲೇ ಇದ್ದು ಅವರನ್ನು ಸರಿಯಾದ ಚಿಕಿತ್ಸೆ ನೀಡಿ, ಯಾವೆಲ್ಲ ಔಷಧಿ ಕೊಡಬೇಕೆಂದು ಸಲಹೆ ಕೂಡ ನೀಡಿದರು. ಡ್ರೈವರ್‌ ಸ್ವಲ್ಪ ಸುಧಾರಿಸಿದ ನಂತರ ಕ್ಯಾಬ್‌ ಮಾಡಿಕೊಟ್ಟು, ಕೈಯಲ್ಲಿ ಸ್ವಲ್ಪ ದುಡ್ಡು ಕೊಟ್ಟು ಮನೆಗೆ ಕಳುಹಿಸಿ ಕೊಟ್ಟು ಮಾನವೀಯತೆ ಮೆರೆದಿದ್ದಾರೆ.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

1 hour ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

14 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

14 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

17 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

17 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

22 hours ago