ಸಾವಿನಂಚಿನಲ್ಲಿದ್ದ ಉಬರ್‌ ಡ್ರೈವರ್‌: ಅದೇ ಕಾರಿನಲ್ಲಿದ್ದ ಮೆಡಿಕವರ್‌ ವೈದ್ಯರಿಂದ ಜೀವರಕ್ಷೆ

 

ವೈಟ್ ಫೀಲ್ದ್‌,ಬೆಂಗಳೂರು ಫೆ.6 : ವೈದ್ಯೋ ನಾರಾಯಣ ಹರಿ ಅಂತಾರೆ.. ಅದು ಇವತ್ತು ಒಬ್ಬ ಉಬರ್‌ ಡ್ರೈವರ್‌ ಪಾಲಿಗೆ ಮಾತ್ರ ಇಂದು ಅಕ್ಷರಶಃ ನಿಜವಾಗಿದೆ. ಮೆಡಿಕವರ್‌ ಆಸ್ಪತ್ರೆಯ ಇಬ್ಬರು ವೈದ್ಯರು ದೇವರಾಗಿ ಆತನ ಪ್ರಾಣವನ್ನು ಉಳಿಸಿದ್ದಾರೆ.

ಉಬರ್‌ ಡ್ರೈವರ್‌  ವಾಹನ ಚಾಲನೆ ಮಾಡುತ್ತುರುವಾಗ ಮೂರ್ಛೆರೋಗ ಬಂದು ಗಾಡಿ ಓಡಿಸೋದಕ್ಕೆ ಕಂಟ್ರೋಲ್‌ ತಪ್ಪಿ, ಲೈಟ್‌ ಕಂಬಕ್ಕೆ ಗುದ್ದಿದ್ದಾರೆ. ಅದೇ ಉಬರ್‌ ಕಾರಿನಲ್ಲಿದ್ದ ಮೆಡಿಕವರ್‌ ಆಸ್ಪತ್ರೆಯ ವೈದ್ಯರಾದ ಡಾ. ರಾಜಸ್ವೆಲ್ವರಾಜನ್‌ ಹಾಗೂ ಡಾ. ರವೀಂದ್ರರವರ ಸಮಯ ಪ್ರಜ್ಷೆಯಿಂದ ಡ್ರೈವರ್‌ ಗೆ ಸ್ಥಳದಲ್ಲಿಯೇ ಚಿಕಿತ್ಸೆ ನೀಡಿ‌ ಡ್ರೈವರ್ ನ ಪ್ರಾಣ ಉಳಿಸಿದ್ದಾರೆ.

ಇಂದು ಬೆಳಿಗ್ಗೆ ಮನೆಯಿಂದ ಆಸ್ಪತ್ರೆಗೆ ಉಬರ್‌ ನಲ್ಲಿ ಬರುತ್ತಾ ಇದ್ದ ವೈಟ್‌ ಫಿಲ್ದ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯ ಹಿರಿಯ ಆರ್ಥೋಪೆಡಿಕ್‌ ಸರ್ಜನ್‌ ರವೀಂದ್ರ ಪುಟ್ಟಸ್ವಾಮಯ್ಯ ಹಾಗೂ ಹಿರಿಯ ಸಲಹೆಗಾರ ವೈದ್ಯ ಡಾ. ರಾಜ ಸ್ವೆಲ್ಪರಾಜನ್‌ ಗರುಡಾಚಾರ್ಯಪಾಳ್ಯದಿಂದ ಬೆಳಗ್ಗೆ 9.30ಕ್ಕೆ ಮೆಡಿಕವರ್‌ ಆಸ್ಪತ್ರೆಗೆ ಉಬರ್‌ ಬುಕ್‌ ಮಾಡಿಕೊಂಡು ಬರುತ್ತಾ ಇದ್ದರು. ಕಾರು ಹತ್ತಿದಾಗ ಇಬ್ಬರು ವೈದ್ಯರು, ಡ್ರೈವರ್‌ ಬಳಿ ಸಹಜ ಮಾತುಕತೆ ನಡೆಸುತ್ತಾ ಇದ್ದರು. ಸ್ವಲ್ಪ ಹೊತ್ತಿನ ಬಳಿಕ ಡ್ರೈವರ್‌ ಮಾತಾಡೋದನ್ನು ನಿಲ್ಲಿಸಿದರು ಹಾಗೂ ಡ್ರೈವರ್‌ ಗೆ ಕಾರು ಓಡಿಸಲು ಸಾಧ್ಯವಾಗದೇ ಸಂಪೂರ್ಣ ಕಂಟ್ರೋಲ್‌ ತಪ್ಪಿ ಹೋಯಿತು. ಇದನ್ನು ಗಮನಿಸಿದ ವೈದ್ಯರು ಡ್ರೈವರ್‌ ಗೆ ಏನೋ ಸಮಸ್ಯೆಯಾಗುತ್ತಿದೆ ಎಂದು ಅಂದುಕೋಳ್ಳುತ್ತಾ, ಡ್ರೈವರ್‌ ಗೆ ಏನಾಯ್ತು ಎಂದು ಕೇಳುವಷ್ಟರಲ್ಲಿ , ಕಾರು ಮುಂದಕ್ಕೆ ಹೋಗುವ ಬದಲು, ರಸ್ತೆ ಬದಿಯಲ್ಲಿ ನಿಂತಿದ್ದ ಬೇರೆ ಕಾರಿಗೆ ಗುದ್ದಿಹೋಯ್ತು. ಅಲ್ಲದೇ ಅಲ್ಲೇ ಇದ್ದ ಲೈಟ್‌ ಕಂಬಕ್ಕೆ ಸಹ ಗುದ್ದಿ ಕಾರು ಹಿಂದಕ್ಕೆ ಬಂತು . ಅಷ್ಟು ಆಗುವಷ್ಟರಲ್ಲಿ ಕಾರಿನ ಹಿಂದೆ ಕೂತಿದ್ದ ಡಾ. ರವೀಂದ್ರ ಪುಟ್ಟಸ್ವಾಮಯ್ಯ ಅವರು ಕಾರಿನ ಹ್ಯಾಂಡ್‌ ಬ್ರೇಕ್‌ ಹಾಕಿದರು.

 

ಹಾಗಾಗೀ ಆಗಬೇಕಾದ ಆಪಾಯ ತಪ್ಪಿ ಹೋಯಿತು. ಕಾರಿನಲ್ಲಿದ್ದ ಹಾಗೂ ಹೊರಗಡೆ ಗುದ್ದಿನ ಕಾರಿನವರಿಗಾಗಲೀ, ಪಾದಚಾರಿಗಾಗಲೀ ಯಾವುದೇ ಸಮಸ್ಯೆಯಾಗಿಲ್ಲ. ಅದೃಷ್ಟವಾಶಾತ್‌ ವೈದ್ಯರ ಸಮಯ ಪ್ರಜ್ಞೆಯಿಂದ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಡ್ರೈವರ್‌ ಗೆ ಅಷ್ಟರಲ್ಲಾಗಲೇ ಬಾಯಿಯಲ್ಲಿ ನೊರೆ ಬರೋದಕ್ಕೆ ಶುರುವಾಗಿ ಸಂಪೂರ್ಣವಾಗಿ ಮೂರ್ಛೆ ಹೋಗಿದ್ದರು. ಕೂಡಲೇ ಡಾ. ರಾಜಸ್ವೆಲ್ವರಾಜನ್‌ಡ್ರೈವರ್‌ ಅನ್ನು ಹಿಡಿದರು ಹಾಗೂ ಡಾ. ರವೀಂದ್ರ ಪುಟ್ಟಸ್ವಾಮಯ್ಯ ಅವರು ಡ್ರೈವರನ್ನು ಕಾರಿನ ಹಿಂದೆ ಮಲಗಿಸಿ ಸೂಕ್ತ ಚಿಕಿತ್ಸೆ ನೀಡಿದರು. ಸ್ವಲ್ಪ ಹೊತ್ತಿನ ಬಳಿಕ ಅಲ್ಲೇ ಇದ್ದು ಅವರನ್ನು ಸರಿಯಾದ ಚಿಕಿತ್ಸೆ ನೀಡಿ, ಯಾವೆಲ್ಲ ಔಷಧಿ ಕೊಡಬೇಕೆಂದು ಸಲಹೆ ಕೂಡ ನೀಡಿದರು. ಡ್ರೈವರ್‌ ಸ್ವಲ್ಪ ಸುಧಾರಿಸಿದ ನಂತರ ಕ್ಯಾಬ್‌ ಮಾಡಿಕೊಟ್ಟು, ಕೈಯಲ್ಲಿ ಸ್ವಲ್ಪ ದುಡ್ಡು ಕೊಟ್ಟು ಮನೆಗೆ ಕಳುಹಿಸಿ ಕೊಟ್ಟು ಮಾನವೀಯತೆ ಮೆರೆದಿದ್ದಾರೆ.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

21 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago