ಸಾವಿನಂಚಿನಲ್ಲಿದ್ದ ಉಬರ್‌ ಡ್ರೈವರ್‌: ಅದೇ ಕಾರಿನಲ್ಲಿದ್ದ ಮೆಡಿಕವರ್‌ ವೈದ್ಯರಿಂದ ಜೀವರಕ್ಷೆ

 

ವೈಟ್ ಫೀಲ್ದ್‌,ಬೆಂಗಳೂರು ಫೆ.6 : ವೈದ್ಯೋ ನಾರಾಯಣ ಹರಿ ಅಂತಾರೆ.. ಅದು ಇವತ್ತು ಒಬ್ಬ ಉಬರ್‌ ಡ್ರೈವರ್‌ ಪಾಲಿಗೆ ಮಾತ್ರ ಇಂದು ಅಕ್ಷರಶಃ ನಿಜವಾಗಿದೆ. ಮೆಡಿಕವರ್‌ ಆಸ್ಪತ್ರೆಯ ಇಬ್ಬರು ವೈದ್ಯರು ದೇವರಾಗಿ ಆತನ ಪ್ರಾಣವನ್ನು ಉಳಿಸಿದ್ದಾರೆ.

ಉಬರ್‌ ಡ್ರೈವರ್‌  ವಾಹನ ಚಾಲನೆ ಮಾಡುತ್ತುರುವಾಗ ಮೂರ್ಛೆರೋಗ ಬಂದು ಗಾಡಿ ಓಡಿಸೋದಕ್ಕೆ ಕಂಟ್ರೋಲ್‌ ತಪ್ಪಿ, ಲೈಟ್‌ ಕಂಬಕ್ಕೆ ಗುದ್ದಿದ್ದಾರೆ. ಅದೇ ಉಬರ್‌ ಕಾರಿನಲ್ಲಿದ್ದ ಮೆಡಿಕವರ್‌ ಆಸ್ಪತ್ರೆಯ ವೈದ್ಯರಾದ ಡಾ. ರಾಜಸ್ವೆಲ್ವರಾಜನ್‌ ಹಾಗೂ ಡಾ. ರವೀಂದ್ರರವರ ಸಮಯ ಪ್ರಜ್ಷೆಯಿಂದ ಡ್ರೈವರ್‌ ಗೆ ಸ್ಥಳದಲ್ಲಿಯೇ ಚಿಕಿತ್ಸೆ ನೀಡಿ‌ ಡ್ರೈವರ್ ನ ಪ್ರಾಣ ಉಳಿಸಿದ್ದಾರೆ.

ಇಂದು ಬೆಳಿಗ್ಗೆ ಮನೆಯಿಂದ ಆಸ್ಪತ್ರೆಗೆ ಉಬರ್‌ ನಲ್ಲಿ ಬರುತ್ತಾ ಇದ್ದ ವೈಟ್‌ ಫಿಲ್ದ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯ ಹಿರಿಯ ಆರ್ಥೋಪೆಡಿಕ್‌ ಸರ್ಜನ್‌ ರವೀಂದ್ರ ಪುಟ್ಟಸ್ವಾಮಯ್ಯ ಹಾಗೂ ಹಿರಿಯ ಸಲಹೆಗಾರ ವೈದ್ಯ ಡಾ. ರಾಜ ಸ್ವೆಲ್ಪರಾಜನ್‌ ಗರುಡಾಚಾರ್ಯಪಾಳ್ಯದಿಂದ ಬೆಳಗ್ಗೆ 9.30ಕ್ಕೆ ಮೆಡಿಕವರ್‌ ಆಸ್ಪತ್ರೆಗೆ ಉಬರ್‌ ಬುಕ್‌ ಮಾಡಿಕೊಂಡು ಬರುತ್ತಾ ಇದ್ದರು. ಕಾರು ಹತ್ತಿದಾಗ ಇಬ್ಬರು ವೈದ್ಯರು, ಡ್ರೈವರ್‌ ಬಳಿ ಸಹಜ ಮಾತುಕತೆ ನಡೆಸುತ್ತಾ ಇದ್ದರು. ಸ್ವಲ್ಪ ಹೊತ್ತಿನ ಬಳಿಕ ಡ್ರೈವರ್‌ ಮಾತಾಡೋದನ್ನು ನಿಲ್ಲಿಸಿದರು ಹಾಗೂ ಡ್ರೈವರ್‌ ಗೆ ಕಾರು ಓಡಿಸಲು ಸಾಧ್ಯವಾಗದೇ ಸಂಪೂರ್ಣ ಕಂಟ್ರೋಲ್‌ ತಪ್ಪಿ ಹೋಯಿತು. ಇದನ್ನು ಗಮನಿಸಿದ ವೈದ್ಯರು ಡ್ರೈವರ್‌ ಗೆ ಏನೋ ಸಮಸ್ಯೆಯಾಗುತ್ತಿದೆ ಎಂದು ಅಂದುಕೋಳ್ಳುತ್ತಾ, ಡ್ರೈವರ್‌ ಗೆ ಏನಾಯ್ತು ಎಂದು ಕೇಳುವಷ್ಟರಲ್ಲಿ , ಕಾರು ಮುಂದಕ್ಕೆ ಹೋಗುವ ಬದಲು, ರಸ್ತೆ ಬದಿಯಲ್ಲಿ ನಿಂತಿದ್ದ ಬೇರೆ ಕಾರಿಗೆ ಗುದ್ದಿಹೋಯ್ತು. ಅಲ್ಲದೇ ಅಲ್ಲೇ ಇದ್ದ ಲೈಟ್‌ ಕಂಬಕ್ಕೆ ಸಹ ಗುದ್ದಿ ಕಾರು ಹಿಂದಕ್ಕೆ ಬಂತು . ಅಷ್ಟು ಆಗುವಷ್ಟರಲ್ಲಿ ಕಾರಿನ ಹಿಂದೆ ಕೂತಿದ್ದ ಡಾ. ರವೀಂದ್ರ ಪುಟ್ಟಸ್ವಾಮಯ್ಯ ಅವರು ಕಾರಿನ ಹ್ಯಾಂಡ್‌ ಬ್ರೇಕ್‌ ಹಾಕಿದರು.

 

ಹಾಗಾಗೀ ಆಗಬೇಕಾದ ಆಪಾಯ ತಪ್ಪಿ ಹೋಯಿತು. ಕಾರಿನಲ್ಲಿದ್ದ ಹಾಗೂ ಹೊರಗಡೆ ಗುದ್ದಿನ ಕಾರಿನವರಿಗಾಗಲೀ, ಪಾದಚಾರಿಗಾಗಲೀ ಯಾವುದೇ ಸಮಸ್ಯೆಯಾಗಿಲ್ಲ. ಅದೃಷ್ಟವಾಶಾತ್‌ ವೈದ್ಯರ ಸಮಯ ಪ್ರಜ್ಞೆಯಿಂದ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಡ್ರೈವರ್‌ ಗೆ ಅಷ್ಟರಲ್ಲಾಗಲೇ ಬಾಯಿಯಲ್ಲಿ ನೊರೆ ಬರೋದಕ್ಕೆ ಶುರುವಾಗಿ ಸಂಪೂರ್ಣವಾಗಿ ಮೂರ್ಛೆ ಹೋಗಿದ್ದರು. ಕೂಡಲೇ ಡಾ. ರಾಜಸ್ವೆಲ್ವರಾಜನ್‌ಡ್ರೈವರ್‌ ಅನ್ನು ಹಿಡಿದರು ಹಾಗೂ ಡಾ. ರವೀಂದ್ರ ಪುಟ್ಟಸ್ವಾಮಯ್ಯ ಅವರು ಡ್ರೈವರನ್ನು ಕಾರಿನ ಹಿಂದೆ ಮಲಗಿಸಿ ಸೂಕ್ತ ಚಿಕಿತ್ಸೆ ನೀಡಿದರು. ಸ್ವಲ್ಪ ಹೊತ್ತಿನ ಬಳಿಕ ಅಲ್ಲೇ ಇದ್ದು ಅವರನ್ನು ಸರಿಯಾದ ಚಿಕಿತ್ಸೆ ನೀಡಿ, ಯಾವೆಲ್ಲ ಔಷಧಿ ಕೊಡಬೇಕೆಂದು ಸಲಹೆ ಕೂಡ ನೀಡಿದರು. ಡ್ರೈವರ್‌ ಸ್ವಲ್ಪ ಸುಧಾರಿಸಿದ ನಂತರ ಕ್ಯಾಬ್‌ ಮಾಡಿಕೊಟ್ಟು, ಕೈಯಲ್ಲಿ ಸ್ವಲ್ಪ ದುಡ್ಡು ಕೊಟ್ಟು ಮನೆಗೆ ಕಳುಹಿಸಿ ಕೊಟ್ಟು ಮಾನವೀಯತೆ ಮೆರೆದಿದ್ದಾರೆ.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

10 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

15 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago