ಸಾವಿನಲ್ಲೂ ಒಂದಾದ ವೃದ್ಧ ಅಕ್ಕ-ತಂಗಿ: ತಾಲೂಕಿನ ಬಚ್ಚಹಳ್ಳಿ ಗ್ರಾಮದಲ್ಲಿ ಘಟನೆ

97 ವರ್ಷದ ಪುಟ್ಟಮ್ಮ ಮತ್ತು 93 ವರ್ಷದ ನರಸಮ್ಮ ವೃದ್ಧ ಸಹೋದರಿಯರು ಒಂದೇ ದಿನದಲ್ಲಿ ನಿಧನ ಹೊಂದಿರುವ ಅಪರೂಪದ ಪ್ರಕರಣ ತಾಲ್ಲೂಕಿನ ಬಚ್ಚಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೇ.30ರ ಮಂಗಳವಾರ ರಾತ್ರಿ ಗ್ರಾಮದ ಪುಟ್ಟಮ್ಮ (97) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ತಂಗಿ ನರಸಮ್ಮ ಮೇ.31ರ ಬುಧವಾರ ಮಧ್ಯಾಹ್ನ 1 ಗಂಟೆ ವೇಳೆಯಲ್ಲಿ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಕುಸಿದು ಬಿದ್ದಿದ್ದಾರೆ. ಮನೆಗೆ ಕರೆತರುವಷ್ಟರಲ್ಲಿ ನರಸಮ್ಮ (93) ಮೃತ ಪಟ್ಟಿದ್ದಾರೆ.

ತುಮಕೂರಿನ ವಾಮಚೇನಹಳ್ಳಿ ಪುಟ್ಟಮ್ಮ ಹಾಗೂ ನರಸಮ್ಮ ಅವರ ತವರು ಮನೆಯಾಗಿದ್ದು, ಅಕ್ಕ ತಂಗಿಯರನ್ನು ತಾಲ್ಲೂಕಿನ ಬಚ್ಚಹಳ್ಳಿಯ ಒಂದೇ ಕುಟುಂಬದ ಹನುಮಪ್ಪ ಹಾಗೂ ಕರೇಗೌಡ ಎನ್ನುವ ಅಣ್ಣ ತಮ್ಮಂದಿರಿಗೆ ಕೊಟ್ಟು ವಿವಾಹ ಮಾಡಲಾಗಿತ್ತು.

ಇಬ್ಬರೂ ತಮ್ಮ ಪತಿಯನ್ನು ಕಳೆದುಕೊಂಡಿದ್ದು, ಮಕ್ಕಳು, ಮಮ್ಮೊಕ್ಕಳೊಂದಿಗೆ ವಾಸವಾಗಿದ್ದರು. ಒಂದೇ ದಿನ ಕುಟುಂಬದ ಇಬ್ಬರು ಹಿರಿಯರನ್ನು ಕಳೆದುಕೊಂಡ ಕುಟುಂಬ ಹಾಗೂ ಬಂಧು ಮಿತ್ರರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಬುಧವಾರ ಸಂಜೆ ಇಬ್ಬರ ಅಂತ್ಯ ಸಂಸ್ಕಾರ ನಡೆಯಿತು.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

11 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

1 day ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago