97 ವರ್ಷದ ಪುಟ್ಟಮ್ಮ ಮತ್ತು 93 ವರ್ಷದ ನರಸಮ್ಮ ವೃದ್ಧ ಸಹೋದರಿಯರು ಒಂದೇ ದಿನದಲ್ಲಿ ನಿಧನ ಹೊಂದಿರುವ ಅಪರೂಪದ ಪ್ರಕರಣ ತಾಲ್ಲೂಕಿನ ಬಚ್ಚಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೇ.30ರ ಮಂಗಳವಾರ ರಾತ್ರಿ ಗ್ರಾಮದ ಪುಟ್ಟಮ್ಮ (97) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ತಂಗಿ ನರಸಮ್ಮ ಮೇ.31ರ ಬುಧವಾರ ಮಧ್ಯಾಹ್ನ 1 ಗಂಟೆ ವೇಳೆಯಲ್ಲಿ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಕುಸಿದು ಬಿದ್ದಿದ್ದಾರೆ. ಮನೆಗೆ ಕರೆತರುವಷ್ಟರಲ್ಲಿ ನರಸಮ್ಮ (93) ಮೃತ ಪಟ್ಟಿದ್ದಾರೆ.
ತುಮಕೂರಿನ ವಾಮಚೇನಹಳ್ಳಿ ಪುಟ್ಟಮ್ಮ ಹಾಗೂ ನರಸಮ್ಮ ಅವರ ತವರು ಮನೆಯಾಗಿದ್ದು, ಅಕ್ಕ ತಂಗಿಯರನ್ನು ತಾಲ್ಲೂಕಿನ ಬಚ್ಚಹಳ್ಳಿಯ ಒಂದೇ ಕುಟುಂಬದ ಹನುಮಪ್ಪ ಹಾಗೂ ಕರೇಗೌಡ ಎನ್ನುವ ಅಣ್ಣ ತಮ್ಮಂದಿರಿಗೆ ಕೊಟ್ಟು ವಿವಾಹ ಮಾಡಲಾಗಿತ್ತು.
ಇಬ್ಬರೂ ತಮ್ಮ ಪತಿಯನ್ನು ಕಳೆದುಕೊಂಡಿದ್ದು, ಮಕ್ಕಳು, ಮಮ್ಮೊಕ್ಕಳೊಂದಿಗೆ ವಾಸವಾಗಿದ್ದರು. ಒಂದೇ ದಿನ ಕುಟುಂಬದ ಇಬ್ಬರು ಹಿರಿಯರನ್ನು ಕಳೆದುಕೊಂಡ ಕುಟುಂಬ ಹಾಗೂ ಬಂಧು ಮಿತ್ರರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಬುಧವಾರ ಸಂಜೆ ಇಬ್ಬರ ಅಂತ್ಯ ಸಂಸ್ಕಾರ ನಡೆಯಿತು.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…