97 ವರ್ಷದ ಪುಟ್ಟಮ್ಮ ಮತ್ತು 93 ವರ್ಷದ ನರಸಮ್ಮ ವೃದ್ಧ ಸಹೋದರಿಯರು ಒಂದೇ ದಿನದಲ್ಲಿ ನಿಧನ ಹೊಂದಿರುವ ಅಪರೂಪದ ಪ್ರಕರಣ ತಾಲ್ಲೂಕಿನ ಬಚ್ಚಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೇ.30ರ ಮಂಗಳವಾರ ರಾತ್ರಿ ಗ್ರಾಮದ ಪುಟ್ಟಮ್ಮ (97) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ತಂಗಿ ನರಸಮ್ಮ ಮೇ.31ರ ಬುಧವಾರ ಮಧ್ಯಾಹ್ನ 1 ಗಂಟೆ ವೇಳೆಯಲ್ಲಿ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಕುಸಿದು ಬಿದ್ದಿದ್ದಾರೆ. ಮನೆಗೆ ಕರೆತರುವಷ್ಟರಲ್ಲಿ ನರಸಮ್ಮ (93) ಮೃತ ಪಟ್ಟಿದ್ದಾರೆ.
ತುಮಕೂರಿನ ವಾಮಚೇನಹಳ್ಳಿ ಪುಟ್ಟಮ್ಮ ಹಾಗೂ ನರಸಮ್ಮ ಅವರ ತವರು ಮನೆಯಾಗಿದ್ದು, ಅಕ್ಕ ತಂಗಿಯರನ್ನು ತಾಲ್ಲೂಕಿನ ಬಚ್ಚಹಳ್ಳಿಯ ಒಂದೇ ಕುಟುಂಬದ ಹನುಮಪ್ಪ ಹಾಗೂ ಕರೇಗೌಡ ಎನ್ನುವ ಅಣ್ಣ ತಮ್ಮಂದಿರಿಗೆ ಕೊಟ್ಟು ವಿವಾಹ ಮಾಡಲಾಗಿತ್ತು.
ಇಬ್ಬರೂ ತಮ್ಮ ಪತಿಯನ್ನು ಕಳೆದುಕೊಂಡಿದ್ದು, ಮಕ್ಕಳು, ಮಮ್ಮೊಕ್ಕಳೊಂದಿಗೆ ವಾಸವಾಗಿದ್ದರು. ಒಂದೇ ದಿನ ಕುಟುಂಬದ ಇಬ್ಬರು ಹಿರಿಯರನ್ನು ಕಳೆದುಕೊಂಡ ಕುಟುಂಬ ಹಾಗೂ ಬಂಧು ಮಿತ್ರರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಬುಧವಾರ ಸಂಜೆ ಇಬ್ಬರ ಅಂತ್ಯ ಸಂಸ್ಕಾರ ನಡೆಯಿತು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…