97 ವರ್ಷದ ಪುಟ್ಟಮ್ಮ ಮತ್ತು 93 ವರ್ಷದ ನರಸಮ್ಮ ವೃದ್ಧ ಸಹೋದರಿಯರು ಒಂದೇ ದಿನದಲ್ಲಿ ನಿಧನ ಹೊಂದಿರುವ ಅಪರೂಪದ ಪ್ರಕರಣ ತಾಲ್ಲೂಕಿನ ಬಚ್ಚಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೇ.30ರ ಮಂಗಳವಾರ ರಾತ್ರಿ ಗ್ರಾಮದ ಪುಟ್ಟಮ್ಮ (97) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ತಂಗಿ ನರಸಮ್ಮ ಮೇ.31ರ ಬುಧವಾರ ಮಧ್ಯಾಹ್ನ 1 ಗಂಟೆ ವೇಳೆಯಲ್ಲಿ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಕುಸಿದು ಬಿದ್ದಿದ್ದಾರೆ. ಮನೆಗೆ ಕರೆತರುವಷ್ಟರಲ್ಲಿ ನರಸಮ್ಮ (93) ಮೃತ ಪಟ್ಟಿದ್ದಾರೆ.
ತುಮಕೂರಿನ ವಾಮಚೇನಹಳ್ಳಿ ಪುಟ್ಟಮ್ಮ ಹಾಗೂ ನರಸಮ್ಮ ಅವರ ತವರು ಮನೆಯಾಗಿದ್ದು, ಅಕ್ಕ ತಂಗಿಯರನ್ನು ತಾಲ್ಲೂಕಿನ ಬಚ್ಚಹಳ್ಳಿಯ ಒಂದೇ ಕುಟುಂಬದ ಹನುಮಪ್ಪ ಹಾಗೂ ಕರೇಗೌಡ ಎನ್ನುವ ಅಣ್ಣ ತಮ್ಮಂದಿರಿಗೆ ಕೊಟ್ಟು ವಿವಾಹ ಮಾಡಲಾಗಿತ್ತು.
ಇಬ್ಬರೂ ತಮ್ಮ ಪತಿಯನ್ನು ಕಳೆದುಕೊಂಡಿದ್ದು, ಮಕ್ಕಳು, ಮಮ್ಮೊಕ್ಕಳೊಂದಿಗೆ ವಾಸವಾಗಿದ್ದರು. ಒಂದೇ ದಿನ ಕುಟುಂಬದ ಇಬ್ಬರು ಹಿರಿಯರನ್ನು ಕಳೆದುಕೊಂಡ ಕುಟುಂಬ ಹಾಗೂ ಬಂಧು ಮಿತ್ರರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಬುಧವಾರ ಸಂಜೆ ಇಬ್ಬರ ಅಂತ್ಯ ಸಂಸ್ಕಾರ ನಡೆಯಿತು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…