ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು.

ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ ಶ್ರೀ ಕ್ರೋಧಿನಾಮ ಸಂವತ್ಸರದ ಪುಷ್ಯ ಶುದ್ಧ ಷಷ್ಠಿ ಡಿ. 25ರ ಗುರುವಾರ ಮಧ್ಯಾಹ್ನ 12-10 ರಿಂದ 12-20 ಗಂಟೆಗೆ ಸಲ್ಲುವ ಶುಭ (ಮೀನ) ಲಗ್ನದಲ್ಲಿ ಅಭಿಜಿನ್ ಮುಹೂರ್ತದಲ್ಲಿ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ಇತರರು ಚಾಲನೆ ನೀಡಿದರು.

ಬ್ರಹ್ಮರಥೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ಸ್ವಾಮಿಗೆ ಬೆಳಗಿನ ಜಾವ 2 ಗಂಟೆಯಿಂದಲೇ ವಿವಿಧ ಪೂಜಾ ಕಾರ್ಯಕ್ರಮ ಆರಂಭಿಸಲಾಯಿತು.

ಸುಬ್ರಹ್ಮಣ್ಯಸ್ವಾಮಿ ಹಾಗೂ ಲಕ್ಷ್ಮಿ ನರಸಿಂಹಸ್ವಾಮಿಗೆ ಹಾಲಿನಿಂದ ಅಭಿಷೇಕ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಶ್ರೀಗಂಧ ಅಭಿಷೇಕ, ಭಸ್ಮದಭಿಷೇಕದ ಬಳಿಕ ಹೂವಿನ ಅಲಂಕಾರ ಮಾಡಲಾಯಿತು.

ಬೆಳಗ್ಗೆ 4.30ಕ್ಕೆ ಮಹಾಮಂಗಳಾರತಿ ಮುಗಿಸಿ ಭಕ್ತರಿಗೆ ದರ್ಶನಕ್ಕೆ ಬಿಡಲಾಯಿತು.

ರಥೋತ್ಸವಕ್ಕೆ ಭಕ್ತಾದಿಗಳು ಬಾಳೆಹಣ್ಣು, ದವನ ಎಸೆಯುವ ಮೂಲಕ ತಮ್ಮ ಹರಕೆ ತೀರಿಸಿದರು.

ದೇವಾಲಯವನ್ನು ಕಣ್ಮನ ಸೆಳೆಯುವಂತೆ ಪುಷ್ಪ ಮತ್ತು ವಿದ್ಯುದ್ದೀಪಗಳಿಂದ ಸಿಂಗರಿಸಲಾಗಿತ್ತು.

ಚಿನ್ನಾಭರಣ ಕಳ್ಳತನ ಸೇರಿ ಯಾವುದೇ ಅಪರಾಧ ಕೃತ್ಯಗಳು ನಡೆಯದಂತೆ ಡ್ರೋನ್ ಕ್ಯಾಮರಾ ಮತ್ತು ಅಲ್ಲಲ್ಲಿ ಸಿಸಿಸಿ ಕ್ಯಾಮರಾ ಅಳವಡಿಸಲಾಗಿತ್ತು,

ಕ್ಷೇತ್ರಕ್ಕೆ ಬಂದ ಭಕ್ತರಿಗೆ ತಾತ್ಕಾಲಿಕ ಶೌಚಗೃಹ, ಟ್ಯಾಂಕರ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆಯನ್ನು ದೇವಾಲಯ ವತಿಯಿಂದ ಮಾಡಲಾಗಿತ್ತು.

ಈ ವೇಳೆ ಶಾಸಕ ಧೀರಜ್ ಮುನಿರಾಜ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಾಶ್ರೀ, ತಹಶೀಲ್ದಾರ್ ಮಲ್ಲಪ್ಪ, ಘಾಟಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ  ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

4 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

4 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…

15 hours ago

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ.!

ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…

22 hours ago

ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರ- ಡಿ.ಪಿ.ಆಂಜನೇಯ

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…

23 hours ago

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಜಪ್ತಿ

ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…

1 day ago