ತಾಲೂಕಿನ ಸಾಸಲು ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರಾಮಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷ ಚಂದ್ರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ದಾಸರಪಾಳ್ಯದ ರಾಮಯ್ಯ ಅವರನ್ನು ಸಂಘದ ನಿರ್ದೇಶಕರು ಅವಿರೋಧವಾಗಿ ಆಯ್ಕೆ ಮಾಡಿದರು.
ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ನಾಗರಾಜು ಮಾತನಾಡಿ, ಅಧಿಕಾರ ಎಂದಿಗೂ ಶಾಶ್ವತವಲ್ಲ, ಎಷ್ಟು ದಿನಗಳ ಕಾಲ ಅಧಿಕಾರದಲ್ಲಿದ್ದೆ ಎನ್ನುವುದಕ್ಕಿಂತ ಮುಖ್ಯವಾಗಿ ಎಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇವೆ ಎಂಬುದು ಮುಖ್ಯ. ಈ ನಿಟ್ಟಿನಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುಂತೆ ನೂತನ ಅಧ್ಯಕ್ಷರಿಗೆ ಸೂಚಿಸಿದರು.
ನೂತನ ಅಧ್ಯಕ್ಷರಾಗಿ ರಾಮಯ್ಯ ಅಧಿಕಾರವನ್ನು ಸ್ವೀಕರಿಸಿ ಮಾತನಾಡಿ, ಗ್ರಾಮದ ರೈತರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ನನ್ನ ಅಧಿಕಾರವಧಿಯಲ್ಲಿ ಶಾಸಕ ವೆಂಕಟರಮಣ್ಯö, ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೆಶಕ ಚುಂಚೇಗೌಡ ಮಾರ್ಗದರ್ಶನದಲ್ಲಿ ಸುಮಾರು ೧ ಕೋಟಿ ರೂ.ವರೆಗೆ ಸಾಲವನ್ನು ಅರ್ಹ ರೈತರಿಗೆ ವಿತರಿಸುವ ಉದ್ದೇಶವನ್ನು ಹೊಂದಿದ್ದೇವೆ. ಸಹಕಾರ ಸಂಘದಲ್ಲಿ ರೈತರು ಪಡೆದ ಸಾಲವನ್ನು ಸಕಾಲಕ್ಕೆ ಮರುಪಾವತಿ ಮಾಡುವ ಮೂಲಕ ಮತ್ತೊಬ್ಬ ರೈತರು ಸಾಲವನ್ನು ಪಡೆಯಲು ಸಹಕರಿಸಬೇಕು. ಜತೆಗೆ ಸಹಕಾರ ಸಂಘದ ಅಭಿವೃದ್ಧಿಗೆ ಕೈಜೋಡಿಸುವಂತೆ ಮನವಿ ಮಾಡಿದರು.
ಸಹಕಾರ ಸಂಘಗಳ ಚುನಾವಣೆಗೆ ಅವಿರೋಧ ಆಯ್ಕೆ ನಡೆಸುವ ಮೂಲಕ ರೈತ ಬೆವರಿನ ಶ್ರಮದ ಹಣವನ್ನು ವ್ಯರ್ಥ ಮಾಡಲು ಅವಕಾಶ ಕೊಡಬಾರದು ಎಂದು ಸಹಕಾರ ಸಂಘದ ನಿವೃತ್ತ ಅಧಿಕಾರಿ ಕೆಂಪೇಗೌಡ ಸಹಕಾರ ಸಂಘಗಳಿಗೆ ಮನವಿ ಮಾಡಿದರು.
ಈ ವೇಳೆ ಉಪಾಧ್ಯಕ್ಷ ಶಂಕರಪ್ಪ, ನಿರ್ದೆಶಕರಾದ ಚಂದ್ರಪ್ಪ, ಮುತ್ತುರಾಯಪ್ಪ, ಎ.ಸಿದ್ದಲಿಂಗಯ್ಯ, ಲಕ್ಷ್ಮೀನರಸಯ್ಯ, ಎಂ.ಎಚ್.ಮಂಜುನಾಥ, ಗಂಗಪ್ಪ, ವೆಂಕಟಲಕ್ಷ್ಮಮ್ಮ, ಮಂಜುಳಾ, ರಾಘವೇಂದ್ರ, ಗ್ರಾಮಸ್ಥರು ಇದ್ದರು.
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…