ತಾಲೂಕಿನ ಸಾಸಲು ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರಾಮಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷ ಚಂದ್ರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ದಾಸರಪಾಳ್ಯದ ರಾಮಯ್ಯ ಅವರನ್ನು ಸಂಘದ ನಿರ್ದೇಶಕರು ಅವಿರೋಧವಾಗಿ ಆಯ್ಕೆ ಮಾಡಿದರು.
ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ನಾಗರಾಜು ಮಾತನಾಡಿ, ಅಧಿಕಾರ ಎಂದಿಗೂ ಶಾಶ್ವತವಲ್ಲ, ಎಷ್ಟು ದಿನಗಳ ಕಾಲ ಅಧಿಕಾರದಲ್ಲಿದ್ದೆ ಎನ್ನುವುದಕ್ಕಿಂತ ಮುಖ್ಯವಾಗಿ ಎಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇವೆ ಎಂಬುದು ಮುಖ್ಯ. ಈ ನಿಟ್ಟಿನಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುಂತೆ ನೂತನ ಅಧ್ಯಕ್ಷರಿಗೆ ಸೂಚಿಸಿದರು.
ನೂತನ ಅಧ್ಯಕ್ಷರಾಗಿ ರಾಮಯ್ಯ ಅಧಿಕಾರವನ್ನು ಸ್ವೀಕರಿಸಿ ಮಾತನಾಡಿ, ಗ್ರಾಮದ ರೈತರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ನನ್ನ ಅಧಿಕಾರವಧಿಯಲ್ಲಿ ಶಾಸಕ ವೆಂಕಟರಮಣ್ಯö, ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೆಶಕ ಚುಂಚೇಗೌಡ ಮಾರ್ಗದರ್ಶನದಲ್ಲಿ ಸುಮಾರು ೧ ಕೋಟಿ ರೂ.ವರೆಗೆ ಸಾಲವನ್ನು ಅರ್ಹ ರೈತರಿಗೆ ವಿತರಿಸುವ ಉದ್ದೇಶವನ್ನು ಹೊಂದಿದ್ದೇವೆ. ಸಹಕಾರ ಸಂಘದಲ್ಲಿ ರೈತರು ಪಡೆದ ಸಾಲವನ್ನು ಸಕಾಲಕ್ಕೆ ಮರುಪಾವತಿ ಮಾಡುವ ಮೂಲಕ ಮತ್ತೊಬ್ಬ ರೈತರು ಸಾಲವನ್ನು ಪಡೆಯಲು ಸಹಕರಿಸಬೇಕು. ಜತೆಗೆ ಸಹಕಾರ ಸಂಘದ ಅಭಿವೃದ್ಧಿಗೆ ಕೈಜೋಡಿಸುವಂತೆ ಮನವಿ ಮಾಡಿದರು.
ಸಹಕಾರ ಸಂಘಗಳ ಚುನಾವಣೆಗೆ ಅವಿರೋಧ ಆಯ್ಕೆ ನಡೆಸುವ ಮೂಲಕ ರೈತ ಬೆವರಿನ ಶ್ರಮದ ಹಣವನ್ನು ವ್ಯರ್ಥ ಮಾಡಲು ಅವಕಾಶ ಕೊಡಬಾರದು ಎಂದು ಸಹಕಾರ ಸಂಘದ ನಿವೃತ್ತ ಅಧಿಕಾರಿ ಕೆಂಪೇಗೌಡ ಸಹಕಾರ ಸಂಘಗಳಿಗೆ ಮನವಿ ಮಾಡಿದರು.
ಈ ವೇಳೆ ಉಪಾಧ್ಯಕ್ಷ ಶಂಕರಪ್ಪ, ನಿರ್ದೆಶಕರಾದ ಚಂದ್ರಪ್ಪ, ಮುತ್ತುರಾಯಪ್ಪ, ಎ.ಸಿದ್ದಲಿಂಗಯ್ಯ, ಲಕ್ಷ್ಮೀನರಸಯ್ಯ, ಎಂ.ಎಚ್.ಮಂಜುನಾಥ, ಗಂಗಪ್ಪ, ವೆಂಕಟಲಕ್ಷ್ಮಮ್ಮ, ಮಂಜುಳಾ, ರಾಘವೇಂದ್ರ, ಗ್ರಾಮಸ್ಥರು ಇದ್ದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…