ಸಾಸಲು ವಿಎಸ್‌ಎಸ್‌ಎನ್ ಅಧ್ಯಕ್ಷರಾಗಿ ರಾಮಯ್ಯ ಅವಿರೋಧ ಆಯ್ಕೆ

ತಾಲೂಕಿನ ಸಾಸಲು ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರಾಮಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷ ಚಂದ್ರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ದಾಸರಪಾಳ್ಯದ ರಾಮಯ್ಯ ಅವರನ್ನು ಸಂಘದ ನಿರ್ದೇಶಕರು ಅವಿರೋಧವಾಗಿ ಆಯ್ಕೆ ಮಾಡಿದರು.

ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ನಾಗರಾಜು ಮಾತನಾಡಿ, ಅಧಿಕಾರ ಎಂದಿಗೂ ಶಾಶ್ವತವಲ್ಲ, ಎಷ್ಟು ದಿನಗಳ ಕಾಲ ಅಧಿಕಾರದಲ್ಲಿದ್ದೆ ಎನ್ನುವುದಕ್ಕಿಂತ ಮುಖ್ಯವಾಗಿ ಎಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇವೆ ಎಂಬುದು ಮುಖ್ಯ. ಈ ನಿಟ್ಟಿನಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುಂತೆ ನೂತನ ಅಧ್ಯಕ್ಷರಿಗೆ ಸೂಚಿಸಿದರು.

ನೂತನ ಅಧ್ಯಕ್ಷರಾಗಿ ರಾಮಯ್ಯ ಅಧಿಕಾರವನ್ನು ಸ್ವೀಕರಿಸಿ ಮಾತನಾಡಿ, ಗ್ರಾಮದ ರೈತರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ನನ್ನ ಅಧಿಕಾರವಧಿಯಲ್ಲಿ ಶಾಸಕ ವೆಂಕಟರಮಣ್ಯö, ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೆಶಕ ಚುಂಚೇಗೌಡ ಮಾರ್ಗದರ್ಶನದಲ್ಲಿ ಸುಮಾರು ೧ ಕೋಟಿ ರೂ.ವರೆಗೆ ಸಾಲವನ್ನು ಅರ್ಹ ರೈತರಿಗೆ ವಿತರಿಸುವ ಉದ್ದೇಶವನ್ನು ಹೊಂದಿದ್ದೇವೆ. ಸಹಕಾರ ಸಂಘದಲ್ಲಿ ರೈತರು ಪಡೆದ ಸಾಲವನ್ನು ಸಕಾಲಕ್ಕೆ ಮರುಪಾವತಿ ಮಾಡುವ ಮೂಲಕ ಮತ್ತೊಬ್ಬ ರೈತರು ಸಾಲವನ್ನು ಪಡೆಯಲು ಸಹಕರಿಸಬೇಕು. ಜತೆಗೆ ಸಹಕಾರ ಸಂಘದ ಅಭಿವೃದ್ಧಿಗೆ ಕೈಜೋಡಿಸುವಂತೆ ಮನವಿ ಮಾಡಿದರು.

ಸಹಕಾರ ಸಂಘಗಳ ಚುನಾವಣೆಗೆ ಅವಿರೋಧ ಆಯ್ಕೆ ನಡೆಸುವ ಮೂಲಕ ರೈತ ಬೆವರಿನ ಶ್ರಮದ ಹಣವನ್ನು ವ್ಯರ್ಥ ಮಾಡಲು ಅವಕಾಶ ಕೊಡಬಾರದು ಎಂದು ಸಹಕಾರ ಸಂಘದ ನಿವೃತ್ತ ಅಧಿಕಾರಿ ಕೆಂಪೇಗೌಡ ಸಹಕಾರ ಸಂಘಗಳಿಗೆ ಮನವಿ ಮಾಡಿದರು.

ಈ ವೇಳೆ ಉಪಾಧ್ಯಕ್ಷ ಶಂಕರಪ್ಪ, ನಿರ್ದೆಶಕರಾದ ಚಂದ್ರಪ್ಪ, ಮುತ್ತುರಾಯಪ್ಪ, ಎ.ಸಿದ್ದಲಿಂಗಯ್ಯ, ಲಕ್ಷ್ಮೀನರಸಯ್ಯ, ಎಂ.ಎಚ್.ಮಂಜುನಾಥ, ಗಂಗಪ್ಪ, ವೆಂಕಟಲಕ್ಷ್ಮಮ್ಮ, ಮಂಜುಳಾ, ರಾಘವೇಂದ್ರ, ಗ್ರಾಮಸ್ಥರು ಇದ್ದರು.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

8 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago