ಸಾಸಲು ವಿಎಸ್‌ಎಸ್‌ಎನ್ ಅಧ್ಯಕ್ಷರಾಗಿ ರಾಮಯ್ಯ ಅವಿರೋಧ ಆಯ್ಕೆ

ತಾಲೂಕಿನ ಸಾಸಲು ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರಾಮಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷ ಚಂದ್ರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ದಾಸರಪಾಳ್ಯದ ರಾಮಯ್ಯ ಅವರನ್ನು ಸಂಘದ ನಿರ್ದೇಶಕರು ಅವಿರೋಧವಾಗಿ ಆಯ್ಕೆ ಮಾಡಿದರು.

ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ನಾಗರಾಜು ಮಾತನಾಡಿ, ಅಧಿಕಾರ ಎಂದಿಗೂ ಶಾಶ್ವತವಲ್ಲ, ಎಷ್ಟು ದಿನಗಳ ಕಾಲ ಅಧಿಕಾರದಲ್ಲಿದ್ದೆ ಎನ್ನುವುದಕ್ಕಿಂತ ಮುಖ್ಯವಾಗಿ ಎಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇವೆ ಎಂಬುದು ಮುಖ್ಯ. ಈ ನಿಟ್ಟಿನಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುಂತೆ ನೂತನ ಅಧ್ಯಕ್ಷರಿಗೆ ಸೂಚಿಸಿದರು.

ನೂತನ ಅಧ್ಯಕ್ಷರಾಗಿ ರಾಮಯ್ಯ ಅಧಿಕಾರವನ್ನು ಸ್ವೀಕರಿಸಿ ಮಾತನಾಡಿ, ಗ್ರಾಮದ ರೈತರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ನನ್ನ ಅಧಿಕಾರವಧಿಯಲ್ಲಿ ಶಾಸಕ ವೆಂಕಟರಮಣ್ಯö, ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೆಶಕ ಚುಂಚೇಗೌಡ ಮಾರ್ಗದರ್ಶನದಲ್ಲಿ ಸುಮಾರು ೧ ಕೋಟಿ ರೂ.ವರೆಗೆ ಸಾಲವನ್ನು ಅರ್ಹ ರೈತರಿಗೆ ವಿತರಿಸುವ ಉದ್ದೇಶವನ್ನು ಹೊಂದಿದ್ದೇವೆ. ಸಹಕಾರ ಸಂಘದಲ್ಲಿ ರೈತರು ಪಡೆದ ಸಾಲವನ್ನು ಸಕಾಲಕ್ಕೆ ಮರುಪಾವತಿ ಮಾಡುವ ಮೂಲಕ ಮತ್ತೊಬ್ಬ ರೈತರು ಸಾಲವನ್ನು ಪಡೆಯಲು ಸಹಕರಿಸಬೇಕು. ಜತೆಗೆ ಸಹಕಾರ ಸಂಘದ ಅಭಿವೃದ್ಧಿಗೆ ಕೈಜೋಡಿಸುವಂತೆ ಮನವಿ ಮಾಡಿದರು.

ಸಹಕಾರ ಸಂಘಗಳ ಚುನಾವಣೆಗೆ ಅವಿರೋಧ ಆಯ್ಕೆ ನಡೆಸುವ ಮೂಲಕ ರೈತ ಬೆವರಿನ ಶ್ರಮದ ಹಣವನ್ನು ವ್ಯರ್ಥ ಮಾಡಲು ಅವಕಾಶ ಕೊಡಬಾರದು ಎಂದು ಸಹಕಾರ ಸಂಘದ ನಿವೃತ್ತ ಅಧಿಕಾರಿ ಕೆಂಪೇಗೌಡ ಸಹಕಾರ ಸಂಘಗಳಿಗೆ ಮನವಿ ಮಾಡಿದರು.

ಈ ವೇಳೆ ಉಪಾಧ್ಯಕ್ಷ ಶಂಕರಪ್ಪ, ನಿರ್ದೆಶಕರಾದ ಚಂದ್ರಪ್ಪ, ಮುತ್ತುರಾಯಪ್ಪ, ಎ.ಸಿದ್ದಲಿಂಗಯ್ಯ, ಲಕ್ಷ್ಮೀನರಸಯ್ಯ, ಎಂ.ಎಚ್.ಮಂಜುನಾಥ, ಗಂಗಪ್ಪ, ವೆಂಕಟಲಕ್ಷ್ಮಮ್ಮ, ಮಂಜುಳಾ, ರಾಘವೇಂದ್ರ, ಗ್ರಾಮಸ್ಥರು ಇದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

18 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago