ಇಂದು ಮುಂಜಾನೆ ಸುಮಾರು 4ಗಂಟೆ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿ ವ್ಯಾಪ್ತಿಯ ಕಾಡಲಪನಹಳ್ಳಿ, ಬೆನಕಿನಮಡಗು, ನಾಗಲಾಪುರದಲ್ಲಿ ಸುಮಾರು 80ಕ್ಕು ಹೆಚ್ಚು ಬೋರ್ವೆಲ್ ಪ್ಯಾನಲ್ ಬೋರ್ಡ್, ಕೇಬಲ್ ವೈರ್ ಗಳನ್ನು ಕಳ್ಳರು ಕದ್ದು ಟಾಟಾ ಏಸ್ ಗೆ ತುಂಬಿ ಪರಾರಿಯಾಗಲು ಯತ್ನಿಸುತ್ತಿದ್ದಾಗ ರೈತರ ಕಣ್ಣಿಗೆ ಬಿದ್ದಿದ್ದಾರೆ. ರೈತರು ಕಳ್ಳರ ಸಮೀಪ ಬರುತ್ತಿದ್ದಂತೆ ಕಳ್ಳರು ಟಾಟಾ ಏಸ್ ವಾಹನವನ್ನು ಅಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಬೋರ್ವೆಲ್ ಪ್ಯಾನಲ್ ಬೋರ್ಡ್, ಕೇಬಲ್ ವೈರ್ ಗಳನ್ನು ಕದ್ದು ತುಂಬಿದ್ದ ಟಾಟಾ ಏಸ್ ನ್ನು ದೊಡ್ಡಬೆಳವಂಗಲ ಪೊಲೀಸರಿಗೆ ರೈತರು ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಸಾಸಲು ಹೋಬಳಿ ವ್ಯಾಪ್ತಿಯಲ್ಲಿ ಬೋರ್ವೆಲ್ ಪ್ಯಾನಲ್ ಬೋರ್ಡ್, ಕೇಬಲ್ ವೈರ್ ಗಳ ಕಳ್ಳರು ಹೆಚ್ಚಾಗಿದ್ದು, ಇದರಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಪೊಲೀಸರು ಕೂಡಲೇ ಎಚ್ಚೆತ್ತುಕೊಂಡು ಖದೀಮರನ್ನು ಬಂಧಿಸಿ ರೈತರ ಆತಂಕವನ್ನು ದೂರಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸದ್ಯ ಕಳ್ಳನ ಮೊಬೈಲ್ ಪೊಲೀಸರ ವಶದಲ್ಲಿದ್ದು, ಕಳ್ಳ ತಪ್ಪಿಸಿಕೊಂಡಿದ್ದಾನೆ. ಎಸ್ಕೇಪ್ ಆಗಿರೋ ಕಳ್ಳನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…
ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…
ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…