ಇಂದು ಮುಂಜಾನೆ ಸುಮಾರು 4ಗಂಟೆ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿ ವ್ಯಾಪ್ತಿಯ ಕಾಡಲಪನಹಳ್ಳಿ, ಬೆನಕಿನಮಡಗು, ನಾಗಲಾಪುರದಲ್ಲಿ ಸುಮಾರು 80ಕ್ಕು ಹೆಚ್ಚು ಬೋರ್ವೆಲ್ ಪ್ಯಾನಲ್ ಬೋರ್ಡ್, ಕೇಬಲ್ ವೈರ್ ಗಳನ್ನು ಕಳ್ಳರು ಕದ್ದು ಟಾಟಾ ಏಸ್ ಗೆ ತುಂಬಿ ಪರಾರಿಯಾಗಲು ಯತ್ನಿಸುತ್ತಿದ್ದಾಗ ರೈತರ ಕಣ್ಣಿಗೆ ಬಿದ್ದಿದ್ದಾರೆ. ರೈತರು ಕಳ್ಳರ ಸಮೀಪ ಬರುತ್ತಿದ್ದಂತೆ ಕಳ್ಳರು ಟಾಟಾ ಏಸ್ ವಾಹನವನ್ನು ಅಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಬೋರ್ವೆಲ್ ಪ್ಯಾನಲ್ ಬೋರ್ಡ್, ಕೇಬಲ್ ವೈರ್ ಗಳನ್ನು ಕದ್ದು ತುಂಬಿದ್ದ ಟಾಟಾ ಏಸ್ ನ್ನು ದೊಡ್ಡಬೆಳವಂಗಲ ಪೊಲೀಸರಿಗೆ ರೈತರು ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಸಾಸಲು ಹೋಬಳಿ ವ್ಯಾಪ್ತಿಯಲ್ಲಿ ಬೋರ್ವೆಲ್ ಪ್ಯಾನಲ್ ಬೋರ್ಡ್, ಕೇಬಲ್ ವೈರ್ ಗಳ ಕಳ್ಳರು ಹೆಚ್ಚಾಗಿದ್ದು, ಇದರಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಪೊಲೀಸರು ಕೂಡಲೇ ಎಚ್ಚೆತ್ತುಕೊಂಡು ಖದೀಮರನ್ನು ಬಂಧಿಸಿ ರೈತರ ಆತಂಕವನ್ನು ದೂರಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸದ್ಯ ಕಳ್ಳನ ಮೊಬೈಲ್ ಪೊಲೀಸರ ವಶದಲ್ಲಿದ್ದು, ಕಳ್ಳ ತಪ್ಪಿಸಿಕೊಂಡಿದ್ದಾನೆ. ಎಸ್ಕೇಪ್ ಆಗಿರೋ ಕಳ್ಳನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…