ಇಂದು ಮುಂಜಾನೆ ಸುಮಾರು 4ಗಂಟೆ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿ ವ್ಯಾಪ್ತಿಯ ಕಾಡಲಪನಹಳ್ಳಿ, ಬೆನಕಿನಮಡಗು, ನಾಗಲಾಪುರದಲ್ಲಿ ಸುಮಾರು 80ಕ್ಕು ಹೆಚ್ಚು ಬೋರ್ವೆಲ್ ಪ್ಯಾನಲ್ ಬೋರ್ಡ್, ಕೇಬಲ್ ವೈರ್ ಗಳನ್ನು ಕಳ್ಳರು ಕದ್ದು ಟಾಟಾ ಏಸ್ ಗೆ ತುಂಬಿ ಪರಾರಿಯಾಗಲು ಯತ್ನಿಸುತ್ತಿದ್ದಾಗ ರೈತರ ಕಣ್ಣಿಗೆ ಬಿದ್ದಿದ್ದಾರೆ. ರೈತರು ಕಳ್ಳರ ಸಮೀಪ ಬರುತ್ತಿದ್ದಂತೆ ಕಳ್ಳರು ಟಾಟಾ ಏಸ್ ವಾಹನವನ್ನು ಅಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಬೋರ್ವೆಲ್ ಪ್ಯಾನಲ್ ಬೋರ್ಡ್, ಕೇಬಲ್ ವೈರ್ ಗಳನ್ನು ಕದ್ದು ತುಂಬಿದ್ದ ಟಾಟಾ ಏಸ್ ನ್ನು ದೊಡ್ಡಬೆಳವಂಗಲ ಪೊಲೀಸರಿಗೆ ರೈತರು ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಸಾಸಲು ಹೋಬಳಿ ವ್ಯಾಪ್ತಿಯಲ್ಲಿ ಬೋರ್ವೆಲ್ ಪ್ಯಾನಲ್ ಬೋರ್ಡ್, ಕೇಬಲ್ ವೈರ್ ಗಳ ಕಳ್ಳರು ಹೆಚ್ಚಾಗಿದ್ದು, ಇದರಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಪೊಲೀಸರು ಕೂಡಲೇ ಎಚ್ಚೆತ್ತುಕೊಂಡು ಖದೀಮರನ್ನು ಬಂಧಿಸಿ ರೈತರ ಆತಂಕವನ್ನು ದೂರಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸದ್ಯ ಕಳ್ಳನ ಮೊಬೈಲ್ ಪೊಲೀಸರ ವಶದಲ್ಲಿದ್ದು, ಕಳ್ಳ ತಪ್ಪಿಸಿಕೊಂಡಿದ್ದಾನೆ. ಎಸ್ಕೇಪ್ ಆಗಿರೋ ಕಳ್ಳನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…