ಸಾಸಲು ಹೋಬಳಿಯಲ್ಲಿ ಒಂದೇ ದಿನ 80ಕ್ಕು ಹೆಚ್ಚು ಬೋರ್ವೆಲ್ ಪ್ಯಾನಲ್ ಬೋರ್ಡ್, ಕೇಬಲ್ ವೈರ್ ಗಳ ಕಳ್ಳತನಕ್ಕೆ ಯತ್ನ

ಇಂದು ಮುಂಜಾನೆ ಸುಮಾರು 4ಗಂಟೆ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿ ವ್ಯಾಪ್ತಿಯ ಕಾಡಲಪನಹಳ್ಳಿ, ಬೆನಕಿನಮಡಗು,  ನಾಗಲಾಪುರದಲ್ಲಿ ಸುಮಾರು 80ಕ್ಕು ಹೆಚ್ಚು ಬೋರ್ವೆಲ್ ಪ್ಯಾನಲ್ ಬೋರ್ಡ್, ಕೇಬಲ್ ವೈರ್ ಗಳನ್ನು‌ ಕಳ್ಳರು ಕದ್ದು ಟಾಟಾ ಏಸ್ ಗೆ ತುಂಬಿ ಪರಾರಿಯಾಗಲು ಯತ್ನಿಸುತ್ತಿದ್ದಾಗ ರೈತರ‌ ಕಣ್ಣಿಗೆ ಬಿದ್ದಿದ್ದಾರೆ.‌ ರೈತರು ಕಳ್ಳರ ಸಮೀಪ ಬರುತ್ತಿದ್ದಂತೆ ಕಳ್ಳರು ಟಾಟಾ ಏಸ್ ವಾಹನವನ್ನು ಅಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಬೋರ್ವೆಲ್ ಪ್ಯಾನಲ್ ಬೋರ್ಡ್, ಕೇಬಲ್ ವೈರ್ ಗಳನ್ನು ಕದ್ದು ತುಂಬಿದ್ದ ಟಾಟಾ ಏಸ್ ನ್ನು ದೊಡ್ಡಬೆಳವಂಗಲ ಪೊಲೀಸರಿಗೆ ರೈತರು ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಸಾಸಲು ಹೋಬಳಿ ವ್ಯಾಪ್ತಿಯಲ್ಲಿ ಬೋರ್ವೆಲ್ ಪ್ಯಾನಲ್ ಬೋರ್ಡ್, ಕೇಬಲ್ ವೈರ್ ಗಳ ಕಳ್ಳರು ಹೆಚ್ಚಾಗಿದ್ದು, ಇದರಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಪೊಲೀಸರು ಕೂಡಲೇ ಎಚ್ಚೆತ್ತುಕೊಂಡು ಖದೀಮರನ್ನು ಬಂಧಿಸಿ ರೈತರ ಆತಂಕವನ್ನು ದೂರ‌ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸದ್ಯ ಕಳ್ಳನ ಮೊಬೈಲ್ ಪೊಲೀಸರ ವಶದಲ್ಲಿದ್ದು,‌ ಕಳ್ಳ ತಪ್ಪಿಸಿಕೊಂಡಿದ್ದಾನೆ‌‌. ಎಸ್ಕೇಪ್ ಆಗಿರೋ ಕಳ್ಳನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…..

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….

Ramesh Babu

Journalist

Recent Posts

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

2 minutes ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

27 minutes ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

8 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago