ಇಂದು ಮುಂಜಾನೆ ಸುಮಾರು 4ಗಂಟೆ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿ ವ್ಯಾಪ್ತಿಯ ಕಾಡಲಪನಹಳ್ಳಿ, ಬೆನಕಿನಮಡಗು, ನಾಗಲಾಪುರದಲ್ಲಿ ಸುಮಾರು 80ಕ್ಕು ಹೆಚ್ಚು ಬೋರ್ವೆಲ್ ಪ್ಯಾನಲ್ ಬೋರ್ಡ್, ಕೇಬಲ್ ವೈರ್ ಗಳನ್ನು ಕಳ್ಳರು ಕದ್ದು ಟಾಟಾ ಏಸ್ ಗೆ ತುಂಬಿ ಪರಾರಿಯಾಗಲು ಯತ್ನಿಸುತ್ತಿದ್ದಾಗ ರೈತರ ಕಣ್ಣಿಗೆ ಬಿದ್ದಿದ್ದಾರೆ. ರೈತರು ಕಳ್ಳರ ಸಮೀಪ ಬರುತ್ತಿದ್ದಂತೆ ಕಳ್ಳರು ಟಾಟಾ ಏಸ್ ವಾಹನವನ್ನು ಅಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಬೋರ್ವೆಲ್ ಪ್ಯಾನಲ್ ಬೋರ್ಡ್, ಕೇಬಲ್ ವೈರ್ ಗಳನ್ನು ಕದ್ದು ತುಂಬಿದ್ದ ಟಾಟಾ ಏಸ್ ನ್ನು ದೊಡ್ಡಬೆಳವಂಗಲ ಪೊಲೀಸರಿಗೆ ರೈತರು ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಸಾಸಲು ಹೋಬಳಿ ವ್ಯಾಪ್ತಿಯಲ್ಲಿ ಬೋರ್ವೆಲ್ ಪ್ಯಾನಲ್ ಬೋರ್ಡ್, ಕೇಬಲ್ ವೈರ್ ಗಳ ಕಳ್ಳರು ಹೆಚ್ಚಾಗಿದ್ದು, ಇದರಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಪೊಲೀಸರು ಕೂಡಲೇ ಎಚ್ಚೆತ್ತುಕೊಂಡು ಖದೀಮರನ್ನು ಬಂಧಿಸಿ ರೈತರ ಆತಂಕವನ್ನು ದೂರಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸದ್ಯ ಕಳ್ಳನ ಮೊಬೈಲ್ ಪೊಲೀಸರ ವಶದಲ್ಲಿದ್ದು, ಕಳ್ಳ ತಪ್ಪಿಸಿಕೊಂಡಿದ್ದಾನೆ. ಎಸ್ಕೇಪ್ ಆಗಿರೋ ಕಳ್ಳನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…