ಇಂದು ಮುಂಜಾನೆ ಸುಮಾರು 4ಗಂಟೆ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿ ವ್ಯಾಪ್ತಿಯ ಕಾಡಲಪನಹಳ್ಳಿ, ಬೆನಕಿನಮಡಗು, ನಾಗಲಾಪುರದಲ್ಲಿ ಸುಮಾರು 80ಕ್ಕು ಹೆಚ್ಚು ಬೋರ್ವೆಲ್ ಪ್ಯಾನಲ್ ಬೋರ್ಡ್, ಕೇಬಲ್ ವೈರ್ ಗಳನ್ನು ಕಳ್ಳರು ಕದ್ದು ಟಾಟಾ ಏಸ್ ಗೆ ತುಂಬಿ ಪರಾರಿಯಾಗಲು ಯತ್ನಿಸುತ್ತಿದ್ದಾಗ ರೈತರ ಕಣ್ಣಿಗೆ ಬಿದ್ದಿದ್ದಾರೆ. ರೈತರು ಕಳ್ಳರ ಸಮೀಪ ಬರುತ್ತಿದ್ದಂತೆ ಕಳ್ಳರು ಟಾಟಾ ಏಸ್ ವಾಹನವನ್ನು ಅಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಬೋರ್ವೆಲ್ ಪ್ಯಾನಲ್ ಬೋರ್ಡ್, ಕೇಬಲ್ ವೈರ್ ಗಳನ್ನು ಕದ್ದು ತುಂಬಿದ್ದ ಟಾಟಾ ಏಸ್ ನ್ನು ದೊಡ್ಡಬೆಳವಂಗಲ ಪೊಲೀಸರಿಗೆ ರೈತರು ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಸಾಸಲು ಹೋಬಳಿ ವ್ಯಾಪ್ತಿಯಲ್ಲಿ ಬೋರ್ವೆಲ್ ಪ್ಯಾನಲ್ ಬೋರ್ಡ್, ಕೇಬಲ್ ವೈರ್ ಗಳ ಕಳ್ಳರು ಹೆಚ್ಚಾಗಿದ್ದು, ಇದರಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಪೊಲೀಸರು ಕೂಡಲೇ ಎಚ್ಚೆತ್ತುಕೊಂಡು ಖದೀಮರನ್ನು ಬಂಧಿಸಿ ರೈತರ ಆತಂಕವನ್ನು ದೂರಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸದ್ಯ ಕಳ್ಳನ ಮೊಬೈಲ್ ಪೊಲೀಸರ ವಶದಲ್ಲಿದ್ದು, ಕಳ್ಳ ತಪ್ಪಿಸಿಕೊಂಡಿದ್ದಾನೆ. ಎಸ್ಕೇಪ್ ಆಗಿರೋ ಕಳ್ಳನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…..
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…