ಮಹಾರಾಷ್ಟ್ರದ ಪುಣೆಯಲ್ಲಿ ನಾಗರಿಕ ನೈರ್ಮಲ್ಯ ಇಲಾಖೆಗೆ ಸೇರಿದ ಟ್ರಕ್ ಶುಕ್ರವಾರ ನಗರದ ಅಂಚೆ ಕಚೇರಿಯ ಬಳಿ ತೆರೆದಿರುವ ಸಿಂಕ್ಹೋಲ್ಗೆ ಬಿದ್ದಿದೆ. ಡ್ರೈನೇಜ್ ಲೈನ್ಗಳನ್ನು ಸ್ವಚ್ಛಗೊಳಿಸಲು ಬಳಸಲಾಗಿದ್ದ ಜೆಟ್ಟಿಂಗ್ ಯಂತ್ರದ ಟ್ರಕ್ ಸಿಂಕ್ಹೋಲ್ಗೆ ಬಿದ್ದಿದೆ ಎನ್ನಲಾಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಜನನಿಬಿಡ ಬುಧ್ವರ್ ಪೇಠ ಪ್ರದೇಶದಲ್ಲಿ ಸಂಜೆ 4 ಗಂಟೆಗೆ ಈ ಘಟನೆ ನಡೆದಿದೆ. ಟ್ರಕ್ ಸಿಂಕ್ಹೋಲ್ಗೆ ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೊಡ್ಡ ಟ್ರಕ್ ಸಿನಿಮೀಯ ರೀತಿಯಲ್ಲಿ ಸಿಂಕ್ಹೋಲ್ಗೆ ಮುಳುಗುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು.
ಸ್ಥಳೀಯರೊಬ್ಬರು ಘಟನಾ ಸ್ಥಳಕ್ಕೆ ಧಾವಿಸಿ ಮುಳುಗುತ್ತಿದ್ದ ಟ್ರಕ್ನ ಡ್ರೈವರ್ ಸೀಟ್ನಿಂದ ಹೊರಬರಲು ಸಹಾಯ ಮಾಡಿದ್ದರಿಂದ ಕೊನೆಯ ಕ್ಷಣದಲ್ಲಿ ಚಾಲಕ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅದು ಯಾವುದೇ ಸಾರ್ವಜನಿಕ ರಸ್ತೆಯಲ್ಲಿಲ್ಲ, ಆದರೆ ಅಂಚೆ ಆವರಣದಲ್ಲಿ ಮೊದಲು ಹಳೆಯ ಬಾವಿ ಇತ್ತು ಮತ್ತು ಈಗ ಅದನ್ನು ಸ್ಲ್ಯಾಬ್ನಿಂದ ಮುಚ್ಚಲಾಗಿದೆ ಎಂದು ಹೇಳಲಾಗಿದೆ. ಈ ಡ್ರೈನೇಜ್ ವಾಹನ ಭಾರವಾಗಿದ್ದರಿಂದ ಈ ಘಟನೆ ನಡೆದಿದೆ. ಈಗ ಅದನ್ನು 2 ಕ್ರೇನ್ಗಳ ಸಹಾಯದಿಂದ ತೆಗೆದುಹಾಕಲಾಗಿದೆ… ತನಿಖೆ ನಡೆಸಲಾಗುವುದು… ಯಾವುದೇ ಗಾಯಗಳಾಗಿಲ್ಲ ಎಂದು ಪುಣೆ ಮುನ್ಸಿಪಲ್ ಕಾರ್ಪೊರೇಷನ್ (ಪಿಎಂಸಿ) ಕಮಿಷನರ್ ರಾಜೇಂದ್ರ ಭೋಸ್ಲೆ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…
ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…
ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ್ಯಾಂಕ್ ಪಡೆದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…
ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…