ಮಹಾರಾಷ್ಟ್ರದ ಪುಣೆಯಲ್ಲಿ ನಾಗರಿಕ ನೈರ್ಮಲ್ಯ ಇಲಾಖೆಗೆ ಸೇರಿದ ಟ್ರಕ್ ಶುಕ್ರವಾರ ನಗರದ ಅಂಚೆ ಕಚೇರಿಯ ಬಳಿ ತೆರೆದಿರುವ ಸಿಂಕ್ಹೋಲ್ಗೆ ಬಿದ್ದಿದೆ. ಡ್ರೈನೇಜ್ ಲೈನ್ಗಳನ್ನು ಸ್ವಚ್ಛಗೊಳಿಸಲು ಬಳಸಲಾಗಿದ್ದ ಜೆಟ್ಟಿಂಗ್ ಯಂತ್ರದ ಟ್ರಕ್ ಸಿಂಕ್ಹೋಲ್ಗೆ ಬಿದ್ದಿದೆ ಎನ್ನಲಾಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಜನನಿಬಿಡ ಬುಧ್ವರ್ ಪೇಠ ಪ್ರದೇಶದಲ್ಲಿ ಸಂಜೆ 4 ಗಂಟೆಗೆ ಈ ಘಟನೆ ನಡೆದಿದೆ. ಟ್ರಕ್ ಸಿಂಕ್ಹೋಲ್ಗೆ ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೊಡ್ಡ ಟ್ರಕ್ ಸಿನಿಮೀಯ ರೀತಿಯಲ್ಲಿ ಸಿಂಕ್ಹೋಲ್ಗೆ ಮುಳುಗುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು.
ಸ್ಥಳೀಯರೊಬ್ಬರು ಘಟನಾ ಸ್ಥಳಕ್ಕೆ ಧಾವಿಸಿ ಮುಳುಗುತ್ತಿದ್ದ ಟ್ರಕ್ನ ಡ್ರೈವರ್ ಸೀಟ್ನಿಂದ ಹೊರಬರಲು ಸಹಾಯ ಮಾಡಿದ್ದರಿಂದ ಕೊನೆಯ ಕ್ಷಣದಲ್ಲಿ ಚಾಲಕ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅದು ಯಾವುದೇ ಸಾರ್ವಜನಿಕ ರಸ್ತೆಯಲ್ಲಿಲ್ಲ, ಆದರೆ ಅಂಚೆ ಆವರಣದಲ್ಲಿ ಮೊದಲು ಹಳೆಯ ಬಾವಿ ಇತ್ತು ಮತ್ತು ಈಗ ಅದನ್ನು ಸ್ಲ್ಯಾಬ್ನಿಂದ ಮುಚ್ಚಲಾಗಿದೆ ಎಂದು ಹೇಳಲಾಗಿದೆ. ಈ ಡ್ರೈನೇಜ್ ವಾಹನ ಭಾರವಾಗಿದ್ದರಿಂದ ಈ ಘಟನೆ ನಡೆದಿದೆ. ಈಗ ಅದನ್ನು 2 ಕ್ರೇನ್ಗಳ ಸಹಾಯದಿಂದ ತೆಗೆದುಹಾಕಲಾಗಿದೆ… ತನಿಖೆ ನಡೆಸಲಾಗುವುದು… ಯಾವುದೇ ಗಾಯಗಳಾಗಿಲ್ಲ ಎಂದು ಪುಣೆ ಮುನ್ಸಿಪಲ್ ಕಾರ್ಪೊರೇಷನ್ (ಪಿಎಂಸಿ) ಕಮಿಷನರ್ ರಾಜೇಂದ್ರ ಭೋಸ್ಲೆ ಹೇಳಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…