ಮಹಾರಾಷ್ಟ್ರದ ಪುಣೆಯಲ್ಲಿ ನಾಗರಿಕ ನೈರ್ಮಲ್ಯ ಇಲಾಖೆಗೆ ಸೇರಿದ ಟ್ರಕ್ ಶುಕ್ರವಾರ ನಗರದ ಅಂಚೆ ಕಚೇರಿಯ ಬಳಿ ತೆರೆದಿರುವ ಸಿಂಕ್ಹೋಲ್ಗೆ ಬಿದ್ದಿದೆ. ಡ್ರೈನೇಜ್ ಲೈನ್ಗಳನ್ನು ಸ್ವಚ್ಛಗೊಳಿಸಲು ಬಳಸಲಾಗಿದ್ದ ಜೆಟ್ಟಿಂಗ್ ಯಂತ್ರದ ಟ್ರಕ್ ಸಿಂಕ್ಹೋಲ್ಗೆ ಬಿದ್ದಿದೆ ಎನ್ನಲಾಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಜನನಿಬಿಡ ಬುಧ್ವರ್ ಪೇಠ ಪ್ರದೇಶದಲ್ಲಿ ಸಂಜೆ 4 ಗಂಟೆಗೆ ಈ ಘಟನೆ ನಡೆದಿದೆ. ಟ್ರಕ್ ಸಿಂಕ್ಹೋಲ್ಗೆ ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೊಡ್ಡ ಟ್ರಕ್ ಸಿನಿಮೀಯ ರೀತಿಯಲ್ಲಿ ಸಿಂಕ್ಹೋಲ್ಗೆ ಮುಳುಗುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು.
ಸ್ಥಳೀಯರೊಬ್ಬರು ಘಟನಾ ಸ್ಥಳಕ್ಕೆ ಧಾವಿಸಿ ಮುಳುಗುತ್ತಿದ್ದ ಟ್ರಕ್ನ ಡ್ರೈವರ್ ಸೀಟ್ನಿಂದ ಹೊರಬರಲು ಸಹಾಯ ಮಾಡಿದ್ದರಿಂದ ಕೊನೆಯ ಕ್ಷಣದಲ್ಲಿ ಚಾಲಕ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅದು ಯಾವುದೇ ಸಾರ್ವಜನಿಕ ರಸ್ತೆಯಲ್ಲಿಲ್ಲ, ಆದರೆ ಅಂಚೆ ಆವರಣದಲ್ಲಿ ಮೊದಲು ಹಳೆಯ ಬಾವಿ ಇತ್ತು ಮತ್ತು ಈಗ ಅದನ್ನು ಸ್ಲ್ಯಾಬ್ನಿಂದ ಮುಚ್ಚಲಾಗಿದೆ ಎಂದು ಹೇಳಲಾಗಿದೆ. ಈ ಡ್ರೈನೇಜ್ ವಾಹನ ಭಾರವಾಗಿದ್ದರಿಂದ ಈ ಘಟನೆ ನಡೆದಿದೆ. ಈಗ ಅದನ್ನು 2 ಕ್ರೇನ್ಗಳ ಸಹಾಯದಿಂದ ತೆಗೆದುಹಾಕಲಾಗಿದೆ… ತನಿಖೆ ನಡೆಸಲಾಗುವುದು… ಯಾವುದೇ ಗಾಯಗಳಾಗಿಲ್ಲ ಎಂದು ಪುಣೆ ಮುನ್ಸಿಪಲ್ ಕಾರ್ಪೊರೇಷನ್ (ಪಿಎಂಸಿ) ಕಮಿಷನರ್ ರಾಜೇಂದ್ರ ಭೋಸ್ಲೆ ಹೇಳಿದ್ದಾರೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…