Categories: ಲೇಖನ

“ಸಿಂಗಲ್ ಪೇರೆಂಟಿಗ್” ಸವಾಲು ಮತ್ತು ಸ್ವಾತಂತ್ರ್ಯ…….

ಸಿಂಗಲ್ ಪೇರೆಂಟಿಗ್
( Single parenting )
( ಏಕ ಪೋಷಕರು )……..

ಸವಾಲು ಮತ್ತು ಸ್ವಾತಂತ್ರ್ಯ……………

20/30 ವರ್ಷ ವಯಸ್ಸಿನ ಹುಡುಗ ಹುಡುಗಿಯರು ಸಾಮಾನ್ಯವಾಗಿ ಮತ್ತು ಸಹಜವಾಗಿ ಪ್ರೀತಿ, ಪ್ರೇಮ ಪ್ರಣಯ ಮತ್ತು ಅದಕ್ಕಾಗಿ ಮದುವೆಯ ರಂಗುರಂಗಿನ ಕನಸುಗಳನ್ನು ಕಾಣುತ್ತಾರೆ.

ಜೊತೆಗಾರರ ನಡುವೆ ಪ್ರೀತಿಯ ಮಾತು – ರೋಮಾಂಚನಗೊಳಿಸುವ ಅವರ ಧ್ವನಿ – ಅಪ್ಪುಗೆಯ ಸ್ಪರ್ಶಕ್ಕೆ ದೇಹ, ಮನಸ್ಸು ಹಾತೊರೆಯುವುದು – ಮದುವೆಯ ಸುಂದರ ಕ್ಷಣಗಳು – ನಂತರದ ಪ್ರವಾಸ – ಸುತ್ತಾಟ – ಗೆಳೆಯರು ಸ್ನೇಹಿತರ ಆಮಂತ್ರಣ ಮತ್ತು ಅತಿಥಿ ಸತ್ಕಾರ – ಮಕ್ಕಳು ಅವರ ಪಾಲನೆ ಪೋಷಣೆ – ಸ್ವಂತ ಮನೆ, ಕಾರು ಇತ್ಯಾದಿ ಇತ್ಯಾದಿಗಳನ್ನು ಪ್ರತಿಕ್ಷಣವೂ ಮನದಲ್ಲಿ ತಪಸ್ಸಿನಂತೆ ಜಪಿಸುತ್ತಿರುತ್ತಾರೆ…….

ಮನೆಯವರು ನೋಡಿ ಒಪ್ಪಿ ಶಾಸ್ತ್ರೋಕ್ತವಾಗಿಯೋ,
ಇಬ್ಬರೂ ಒಬ್ಬರಿಗೊಬ್ಬರು ಪ್ರೀತಿಸಿಯೋ, ಸರಳವಾಗಿ ರಿಜಿಸ್ಟರ್ ಆಗಿಯೋ, ವಿರೋಧವಿದ್ದರೆ ಮರೆಮಾಚಿಯೋ ಒಟ್ಟಿನಲ್ಲಿ ಹೇಗೋ ಮದುವೆಯಾಗಿ ಸಂಸಾರ ಪ್ರಾರಂಭಿಸುತ್ತಾರೆ.

ಇಂತಹ ಕೆಲವು ಕುಟುಂಬಗಳು ನಿಜಕ್ಕೂ ಅವರ ಕನಸಿನಂತೆ ತುಂಬಾ ಯಶಸ್ವಿಯಾಗಿ ಸಂತೋಷ ನೆಮ್ಮದಿಯಿಂದ ಬದುಕನ್ನು ಸಾಗಿಸುತ್ತಾರೆ. ಅವರು ಮತ್ತಷ್ಟು ಸಂತೋಷವಾಗಿರಲಿ ಎಂದು ನಾವೆಲ್ಲರೂ ಹಾರೈಸೋಣ.

ಈ ಅದೃಷ್ಟ ಹಲವರಿಗೆ ಇರುವುದಿಲ್ಲ. ಆಧುನಿಕ ಸಂಕೀರ್ಣ ಬದುಕಿನ ಇಂದಿನ ಸಮಯದಲ್ಲಿ, ಸಾವಿರಾರು ಕಾರಣಗಳಲ್ಲಿ, ಯಾವುದೋ ಸಂದರ್ಭದ ಒತ್ತಡದಿಂದ ಇಬ್ಬರಲ್ಲೂ ನಿಧಾನವಾಗಿ ಪ್ರಾರಂಭವಾಗುವ ಅಸಹನೆ ಅತೃಪ್ತಿ ಬೆಟ್ಟದಂತೆ ಬೆಳೆದು ಕೆಲವೇ ವರ್ಷಗಳಲ್ಲಿ ಅಧಿಕೃತ ಅಥವಾ ಅನಧಿಕೃತ ವಿಚ್ಚೇದನದ ಹಂತ ತಲುಪುತ್ತದೆ. ಇಬ್ಬರೂ ದೂರವಾಗುತ್ತಾರೆ.

ಇದು ಇಬ್ಬರಿಗೂ ಪರೋಕ್ಷವಾಗಿ ಯಾತನಾಮಯವೇ. ಮಕ್ಕಳು ಇಲ್ಲದಿದ್ದರೆ ಸ್ವಲ್ಪ ಪರವಾಗಿಲ್ಲ. ಮಕ್ಕಳು ಇದ್ದರೆ ಅದು ತುಂಬಾ ತ್ರಾಸದಾಯಕ.

ಮಕ್ಕಳು ತಂದೆ ಅಥವಾ ತಾಯಿಯ ಬಳಿ ಉಳಿಯುತ್ತಾರೆ. ಇದನ್ನೇ ಸಿಂಗಲ್ ಪೇರೆಂಟಿಗ್ ಎನ್ನಲಾಗುತ್ತದೆ.
ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಸಾಮಾನ್ಯವಾಗಿ
ತಾಯಿಯನ್ನೇ ಹಿಂಬಾಲಿಸುತ್ತಾರೆ.

ಕೆಲವೊಮ್ಮೆ ತಂದೆ ಅಥವಾ ತಾಯಿಯ ಆಕಸ್ಮಿಕ ಸಾವು ಸಹ ಇದಕ್ಕೆ ಕಾರಣವಾಗುತ್ತದೆ.

ಇಲ್ಲಿ ಪೋಷಕರ ಸಹಕಾರವಿದ್ದು ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿ ಇದ್ದರೆ ಬದುಕು ಸ್ವಲ್ಪ ಚೆನ್ನಾಗಿಯೇ ನಡೆಯುತ್ತದೆ. ಆದರೆ ನಾನಾ ಕಾರಣಗಳಿಂದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರದೆ 1/2/3 ಮಕ್ಕಳನ್ನು ಸಾಕುವ ಜವಾಬ್ದಾರಿ ಒಬ್ಬರಿಗೆ ಅದರಲ್ಲೂ ಮಹಿಳೆಗೆ ವರ್ಗಾವಣೆಯಾದರೆ ಅದು ಅತ್ಯಂತ ಭಯಾನಕ. ತಂದೆಯ ಬೆಂಬಲವಿಲ್ಲದ ಮಕ್ಕಳು, ಒಂಟಿ ಹೆಣ್ಣು, ಜನರ ತಿರಸ್ಕಾರ ಎಲ್ಲವೂ ಸೇರಿ ಬಹುದೊಡ್ಡ ಸವಾಲು ಎದುರಾಗುತ್ತದೆ.

ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಎರಡೂ ಕಡೆ ಕೇವಲ ಕಷ್ಟ, ನಿರಾಸೆ ಮತ್ತು ಸವಾಲುಗಳಲ್ಲದೆ ಮತ್ತೊಮ್ಮೆ ಬದುಕಿನ ಹೊಸ ಕನಸಿನ ಸ್ವಾತಂತ್ರ್ಯ ಸಹ ಸಿಗುತ್ತದೆ. ಮದುವೆ ಮತ್ತು ಸಂಸಾರ ಎಂಬುದು ಒಂದು ರೀತಿಯಲ್ಲಿ ಬಂಧನ ಮತ್ತು ಒತ್ತಡ. ಒಡಕಿನ ಸಂಸಾರದಲ್ಲಿ ಈ ಒತ್ತಡ ತುಂಬಾ ತುಂಬಾ ಜಾಸ್ತಿ ಮತ್ತು ನಿರಂತರ ಇರುತ್ತದೆ. ಒಮ್ಮೆ ಬೇರೆಯಾದರೆ ಈ ಒತ್ತಡ ಕಡಿಮೆಯಾಗಿ ಆರಾಮ ಉಸಿರಾಟದ ಅನುಭವವಾಗಿ ಮನಸ್ಸು ಉಲ್ಲಾಸವಾಗುತ್ತದೆ. ಹೊಸ ಹೊಸ ಕನಸುಗಳು ಮತ್ತೊಮ್ಮೆ ಮೂಡತೊಡಗುತ್ತದೆ. ಕಳೆದುಹೋಗಿದ್ದ
” ನಾನು ” ಮತ್ತೆ ನಮಗೆ ಸಿಗುತ್ತದೆ…..

ಇಲ್ಲಿ ವಿಚ್ಚೇದನದಷ್ಟು ತೀವ್ರ ಘಟನೆ ಸಂಭವಿಸುವುದರಿಂದ ಯಾರು ಒಳ್ಳೆಯವರು, ಯಾರು ಕೆಟ್ಟವರು ಅಥವಾ ಯಾವುದು ಸರಿ ಯಾವುದು, ತಪ್ಪು ಎಂದು ನಿರ್ಧರಿಸುವುದು ಕಷ್ಟ. ಇದಕ್ಕೆ ನಮ್ಮ ಸಾಮಾಜಿಕ ವ್ಯವಸ್ಥೆಯೂ ಸೇರಿ ಹಲವಾರು ಆಯಾಮಗಳು ಇರುತ್ತವೆ. ಒಟ್ಟಿನಲ್ಲಿ ಹೊಂದಾಣಿಕೆ ಸಾಧ್ಯವಾಗಲಿಲ್ಲ ಎಂದು ಸರಳವಾಗಿ ಹೇಳಬಹುದು.

ಸದ್ಯದ ಭಾರತದ ಪರಿಸ್ಥಿತಿಗೆ ಇಬ್ಬರೂ ಒಟ್ಟಾಗಿ ಇರುವುದು ಮೊದಲನೇ ಮತ್ತು ಅತ್ಯುತ್ತಮ ಆಯ್ಕೆ.

ಒಂದು ವೇಳೆ ಅದು‌ ಸಾಧ್ಯವಾಗದಿದ್ದರೆ ಸಿಂಗಲ್ ಪೇರೆಂಟಿಂಗ್ ವ್ಯವಸ್ಥೆ ಅದಕ್ಕೆ ಪರ್ಯಾಯವಾಗಿರುವುದರಿಂದ ಅದನ್ನು ಒಪ್ಪಿಕೊಂಡು ಛಲದಿಂದ ಉತ್ಸಾಹದಿಂದ ಯಾವುದೇ ಪಶ್ಚಾತ್ತಾಪವಿಲ್ಲದೆ ಅನುಭವಿಸಬೇಕು ಮತ್ತು ಬದುಕಬೇಕು.

ನಮ್ಮ ಸಮಾಜ ಕೂಡ ಇದನ್ನು ಸಹಜವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಇದನ್ನು ಒಂದು ಅಪರಾಧ ಅಥವಾ ದುರಾದೃಷ್ಟದ ಪರಿಸ್ಥಿತಿ ಎಂದು ವಿಶ್ಲೇಷಿಸಬಾರದು.

ಆಯ್ಕೆ ಇದ್ದಲ್ಲಿ ಜೊತೆಯಾಗಿರುವುದು ಬದುಕಿಗೆ ಉತ್ತಮ. ಇಲ್ಲದಿದ್ದಲ್ಲಿ ಸಿಂಗಲ್ ಪೇರೆಂಟಿಗ್ ಸಾಧನೆಗೆ ಅತ್ಯುತ್ತಮ.

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

3 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

5 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

5 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

16 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

17 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago