Categories: ಲೇಖನ

“ಸಿಂಗಲ್ ಪೇರೆಂಟಿಗ್” ಸವಾಲು ಮತ್ತು ಸ್ವಾತಂತ್ರ್ಯ…….

ಸಿಂಗಲ್ ಪೇರೆಂಟಿಗ್
( Single parenting )
( ಏಕ ಪೋಷಕರು )……..

ಸವಾಲು ಮತ್ತು ಸ್ವಾತಂತ್ರ್ಯ……………

20/30 ವರ್ಷ ವಯಸ್ಸಿನ ಹುಡುಗ ಹುಡುಗಿಯರು ಸಾಮಾನ್ಯವಾಗಿ ಮತ್ತು ಸಹಜವಾಗಿ ಪ್ರೀತಿ, ಪ್ರೇಮ ಪ್ರಣಯ ಮತ್ತು ಅದಕ್ಕಾಗಿ ಮದುವೆಯ ರಂಗುರಂಗಿನ ಕನಸುಗಳನ್ನು ಕಾಣುತ್ತಾರೆ.

ಜೊತೆಗಾರರ ನಡುವೆ ಪ್ರೀತಿಯ ಮಾತು – ರೋಮಾಂಚನಗೊಳಿಸುವ ಅವರ ಧ್ವನಿ – ಅಪ್ಪುಗೆಯ ಸ್ಪರ್ಶಕ್ಕೆ ದೇಹ, ಮನಸ್ಸು ಹಾತೊರೆಯುವುದು – ಮದುವೆಯ ಸುಂದರ ಕ್ಷಣಗಳು – ನಂತರದ ಪ್ರವಾಸ – ಸುತ್ತಾಟ – ಗೆಳೆಯರು ಸ್ನೇಹಿತರ ಆಮಂತ್ರಣ ಮತ್ತು ಅತಿಥಿ ಸತ್ಕಾರ – ಮಕ್ಕಳು ಅವರ ಪಾಲನೆ ಪೋಷಣೆ – ಸ್ವಂತ ಮನೆ, ಕಾರು ಇತ್ಯಾದಿ ಇತ್ಯಾದಿಗಳನ್ನು ಪ್ರತಿಕ್ಷಣವೂ ಮನದಲ್ಲಿ ತಪಸ್ಸಿನಂತೆ ಜಪಿಸುತ್ತಿರುತ್ತಾರೆ…….

ಮನೆಯವರು ನೋಡಿ ಒಪ್ಪಿ ಶಾಸ್ತ್ರೋಕ್ತವಾಗಿಯೋ,
ಇಬ್ಬರೂ ಒಬ್ಬರಿಗೊಬ್ಬರು ಪ್ರೀತಿಸಿಯೋ, ಸರಳವಾಗಿ ರಿಜಿಸ್ಟರ್ ಆಗಿಯೋ, ವಿರೋಧವಿದ್ದರೆ ಮರೆಮಾಚಿಯೋ ಒಟ್ಟಿನಲ್ಲಿ ಹೇಗೋ ಮದುವೆಯಾಗಿ ಸಂಸಾರ ಪ್ರಾರಂಭಿಸುತ್ತಾರೆ.

ಇಂತಹ ಕೆಲವು ಕುಟುಂಬಗಳು ನಿಜಕ್ಕೂ ಅವರ ಕನಸಿನಂತೆ ತುಂಬಾ ಯಶಸ್ವಿಯಾಗಿ ಸಂತೋಷ ನೆಮ್ಮದಿಯಿಂದ ಬದುಕನ್ನು ಸಾಗಿಸುತ್ತಾರೆ. ಅವರು ಮತ್ತಷ್ಟು ಸಂತೋಷವಾಗಿರಲಿ ಎಂದು ನಾವೆಲ್ಲರೂ ಹಾರೈಸೋಣ.

ಈ ಅದೃಷ್ಟ ಹಲವರಿಗೆ ಇರುವುದಿಲ್ಲ. ಆಧುನಿಕ ಸಂಕೀರ್ಣ ಬದುಕಿನ ಇಂದಿನ ಸಮಯದಲ್ಲಿ, ಸಾವಿರಾರು ಕಾರಣಗಳಲ್ಲಿ, ಯಾವುದೋ ಸಂದರ್ಭದ ಒತ್ತಡದಿಂದ ಇಬ್ಬರಲ್ಲೂ ನಿಧಾನವಾಗಿ ಪ್ರಾರಂಭವಾಗುವ ಅಸಹನೆ ಅತೃಪ್ತಿ ಬೆಟ್ಟದಂತೆ ಬೆಳೆದು ಕೆಲವೇ ವರ್ಷಗಳಲ್ಲಿ ಅಧಿಕೃತ ಅಥವಾ ಅನಧಿಕೃತ ವಿಚ್ಚೇದನದ ಹಂತ ತಲುಪುತ್ತದೆ. ಇಬ್ಬರೂ ದೂರವಾಗುತ್ತಾರೆ.

ಇದು ಇಬ್ಬರಿಗೂ ಪರೋಕ್ಷವಾಗಿ ಯಾತನಾಮಯವೇ. ಮಕ್ಕಳು ಇಲ್ಲದಿದ್ದರೆ ಸ್ವಲ್ಪ ಪರವಾಗಿಲ್ಲ. ಮಕ್ಕಳು ಇದ್ದರೆ ಅದು ತುಂಬಾ ತ್ರಾಸದಾಯಕ.

ಮಕ್ಕಳು ತಂದೆ ಅಥವಾ ತಾಯಿಯ ಬಳಿ ಉಳಿಯುತ್ತಾರೆ. ಇದನ್ನೇ ಸಿಂಗಲ್ ಪೇರೆಂಟಿಗ್ ಎನ್ನಲಾಗುತ್ತದೆ.
ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಸಾಮಾನ್ಯವಾಗಿ
ತಾಯಿಯನ್ನೇ ಹಿಂಬಾಲಿಸುತ್ತಾರೆ.

ಕೆಲವೊಮ್ಮೆ ತಂದೆ ಅಥವಾ ತಾಯಿಯ ಆಕಸ್ಮಿಕ ಸಾವು ಸಹ ಇದಕ್ಕೆ ಕಾರಣವಾಗುತ್ತದೆ.

ಇಲ್ಲಿ ಪೋಷಕರ ಸಹಕಾರವಿದ್ದು ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿ ಇದ್ದರೆ ಬದುಕು ಸ್ವಲ್ಪ ಚೆನ್ನಾಗಿಯೇ ನಡೆಯುತ್ತದೆ. ಆದರೆ ನಾನಾ ಕಾರಣಗಳಿಂದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರದೆ 1/2/3 ಮಕ್ಕಳನ್ನು ಸಾಕುವ ಜವಾಬ್ದಾರಿ ಒಬ್ಬರಿಗೆ ಅದರಲ್ಲೂ ಮಹಿಳೆಗೆ ವರ್ಗಾವಣೆಯಾದರೆ ಅದು ಅತ್ಯಂತ ಭಯಾನಕ. ತಂದೆಯ ಬೆಂಬಲವಿಲ್ಲದ ಮಕ್ಕಳು, ಒಂಟಿ ಹೆಣ್ಣು, ಜನರ ತಿರಸ್ಕಾರ ಎಲ್ಲವೂ ಸೇರಿ ಬಹುದೊಡ್ಡ ಸವಾಲು ಎದುರಾಗುತ್ತದೆ.

ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಎರಡೂ ಕಡೆ ಕೇವಲ ಕಷ್ಟ, ನಿರಾಸೆ ಮತ್ತು ಸವಾಲುಗಳಲ್ಲದೆ ಮತ್ತೊಮ್ಮೆ ಬದುಕಿನ ಹೊಸ ಕನಸಿನ ಸ್ವಾತಂತ್ರ್ಯ ಸಹ ಸಿಗುತ್ತದೆ. ಮದುವೆ ಮತ್ತು ಸಂಸಾರ ಎಂಬುದು ಒಂದು ರೀತಿಯಲ್ಲಿ ಬಂಧನ ಮತ್ತು ಒತ್ತಡ. ಒಡಕಿನ ಸಂಸಾರದಲ್ಲಿ ಈ ಒತ್ತಡ ತುಂಬಾ ತುಂಬಾ ಜಾಸ್ತಿ ಮತ್ತು ನಿರಂತರ ಇರುತ್ತದೆ. ಒಮ್ಮೆ ಬೇರೆಯಾದರೆ ಈ ಒತ್ತಡ ಕಡಿಮೆಯಾಗಿ ಆರಾಮ ಉಸಿರಾಟದ ಅನುಭವವಾಗಿ ಮನಸ್ಸು ಉಲ್ಲಾಸವಾಗುತ್ತದೆ. ಹೊಸ ಹೊಸ ಕನಸುಗಳು ಮತ್ತೊಮ್ಮೆ ಮೂಡತೊಡಗುತ್ತದೆ. ಕಳೆದುಹೋಗಿದ್ದ
” ನಾನು ” ಮತ್ತೆ ನಮಗೆ ಸಿಗುತ್ತದೆ…..

ಇಲ್ಲಿ ವಿಚ್ಚೇದನದಷ್ಟು ತೀವ್ರ ಘಟನೆ ಸಂಭವಿಸುವುದರಿಂದ ಯಾರು ಒಳ್ಳೆಯವರು, ಯಾರು ಕೆಟ್ಟವರು ಅಥವಾ ಯಾವುದು ಸರಿ ಯಾವುದು, ತಪ್ಪು ಎಂದು ನಿರ್ಧರಿಸುವುದು ಕಷ್ಟ. ಇದಕ್ಕೆ ನಮ್ಮ ಸಾಮಾಜಿಕ ವ್ಯವಸ್ಥೆಯೂ ಸೇರಿ ಹಲವಾರು ಆಯಾಮಗಳು ಇರುತ್ತವೆ. ಒಟ್ಟಿನಲ್ಲಿ ಹೊಂದಾಣಿಕೆ ಸಾಧ್ಯವಾಗಲಿಲ್ಲ ಎಂದು ಸರಳವಾಗಿ ಹೇಳಬಹುದು.

ಸದ್ಯದ ಭಾರತದ ಪರಿಸ್ಥಿತಿಗೆ ಇಬ್ಬರೂ ಒಟ್ಟಾಗಿ ಇರುವುದು ಮೊದಲನೇ ಮತ್ತು ಅತ್ಯುತ್ತಮ ಆಯ್ಕೆ.

ಒಂದು ವೇಳೆ ಅದು‌ ಸಾಧ್ಯವಾಗದಿದ್ದರೆ ಸಿಂಗಲ್ ಪೇರೆಂಟಿಂಗ್ ವ್ಯವಸ್ಥೆ ಅದಕ್ಕೆ ಪರ್ಯಾಯವಾಗಿರುವುದರಿಂದ ಅದನ್ನು ಒಪ್ಪಿಕೊಂಡು ಛಲದಿಂದ ಉತ್ಸಾಹದಿಂದ ಯಾವುದೇ ಪಶ್ಚಾತ್ತಾಪವಿಲ್ಲದೆ ಅನುಭವಿಸಬೇಕು ಮತ್ತು ಬದುಕಬೇಕು.

ನಮ್ಮ ಸಮಾಜ ಕೂಡ ಇದನ್ನು ಸಹಜವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಇದನ್ನು ಒಂದು ಅಪರಾಧ ಅಥವಾ ದುರಾದೃಷ್ಟದ ಪರಿಸ್ಥಿತಿ ಎಂದು ವಿಶ್ಲೇಷಿಸಬಾರದು.

ಆಯ್ಕೆ ಇದ್ದಲ್ಲಿ ಜೊತೆಯಾಗಿರುವುದು ಬದುಕಿಗೆ ಉತ್ತಮ. ಇಲ್ಲದಿದ್ದಲ್ಲಿ ಸಿಂಗಲ್ ಪೇರೆಂಟಿಗ್ ಸಾಧನೆಗೆ ಅತ್ಯುತ್ತಮ.

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

7 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

7 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

18 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

18 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

21 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

1 day ago