ಸಿಂಗ್ರಹಳ್ಳಿ ಗ್ರಾಮದ ಗೋಮಾಳ ಜಮೀನು ಉಳ್ಳವರಿಂದಲೇ ಒತ್ತುವರಿ- ಮುನಿಆಂಜಿನಪ್ಪ ಆರೋಪ

ದೇವನಹಳ್ಳಿ: ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸಿಂಗರಹಳ್ಳಿ ಗ್ರಾಮದ ಸರ್ವೆ ನಂಬರ್ -6 ರಲ್ಲಿ ಸುಮಾರು 60 ಅಕ್ರಮ ಸೈಟುಗಳು ಶ್ರೀಮಂತ ಕುಟುಂಬದ ವ್ಯಕ್ತಿಗಳಿಗೆ ನಿವೇಶನ ರಹಿತರಂತೆ ಸೈಟುಗಳನ್ನು ಪಡೆದು ಅಕ್ರಮವಾಗಿ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ ಇದು ಗೋಮಾಳ ಜಮೀನು ಆಗಿದ್ದು ಉಳ್ಳವರೇ ಭೂ ಒತ್ತುವರಿ ಮಾಡಿದ್ದಾರೆ ಅವರ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ಕಠಿಣ ಕಾನೂನು ಕ್ರಮ ಜರುಗಿಸಿ ಎಂದು ಪ್ರಜಾ ವಿಮೋಚನಾ ಚಳುವಳಿ ಸ್ವಾಭಿಮಾನ ಸಂಘಟನೆಯ ರಾಜ್ಯ ಅಧ್ಯಕ್ಷ ಮುನಿಯ ಅಂಜಿನಪ್ಪ ಒತ್ತಾಯಿಸಿದ್ದಾರೆ.

ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪ್ರಜಾ ವಿಮೋಚನಾ ಚಳುವಳಿ ಸ್ವಾಭಿಮಾನ ,ಸಮತಾ ಸೈನಿಕ ದಳ,ಬಹುಜನ ಸೇವಾ ಸಮಿತಿ ಮತ್ತು ಜನಧ್ವನಿ ವೇದಿಕೆ
ಸೇರಿದಂತೆ ಹಲವು ಸಂಘಟನೆಗಳ ವತಿಯಿಂದ ಜಾಲಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿಂಗ್ರಹಳ್ಳಿಯ ಗೋಮಾಳ ಜಮೀನು ಒತ್ತುವರಿಯ ಕುರಿತು ಕಠಿಣ ಕ್ರಮಕ್ಕೆ ಒತ್ತಾಯಿಸಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ಭೂ ಒತ್ತುವರಿದಾರರಿಗೆ ಯಲಹಂಕ ತಾಲೂಕಿನಲ್ಲಿ ಸಾಕಷ್ಟು ವಾಸದ ಮನೆಗಳು ಅಂಗಡಿಗಳು ಮತ್ತು ಬಾಡಿಗೆ ನೀಡಿರುವ ಕಟ್ಟಡಗಳು ಇರುವುದಾಗಿ ತಿಳಿದು ಬಂದಿದೆ. ನಿರ್ಗತಿಕರೆಂದು ಹೇಳಿಕೊಂಡು ಅಕ್ರಮವಾಗಿ ಸಿಂಗ್ರಹಳ್ಳಿಯ ಗೋಮಾಳ ಜಾಗದಲ್ಲಿ ಏಕಾಏಕಿ ನಿವೇಶನಗಳನ್ನು ಕಟ್ಟಿಕೊಂಡು ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡುತ್ತಿರುವುದು ಎಷ್ಟು ಸರಿ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸದೇ ಸುಮ್ಮನಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

ಸಮತಾ ಸೈನಿಕ ದಳ ಸಂಘಟನೆಯ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಜಿ.ಸಿ ವೆಂಕಟರಮಣಪ್ಪ ಮಾತನಾಡಿ ಸುಮಾರು 60ಕ್ಕೂ ಹೆಚ್ಚು ಜನರು ಸರ್ಕಾರಿ ಗೋಮಾಳ ಜಮೀನನಲ್ಲಿ ಅಕ್ರಮವಾಗಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಸರ್ಕಾರದಿಂದ ಪ್ರಾಥಮಿಕವಾಗಿ ಹಕ್ಕು ಪತ್ರ ಹೊಂದಿರುವ ಮೂಲ ಮಂಜೂರು ದಾರರಿಗೆ ಮೊದಲ ಪ್ರಾಮುಖ್ಯತೆ ನೀಡಿ ಅವರಿಗೆ ಜಮೀನನ್ನು ನೀಡದೆ ಕಂದಾಯ ಅಧಿಕಾರಿಗಳು ಸರ್ವೇ ನಂ. 6ರಲ್ಲಿ ಜಾಗವಿಲ್ಲವೆಂದು ಹೇಳುತ್ತಿದ್ದಾರೆ .

ಬಲಾಢ್ಯರ ಮೋಜು-ಮಸ್ತಿಗಾಗಿ ಗೋಮಾಳ ಜಮೀನನ್ನು ರಾಜಾರೋಷವಾಗಿ ಬಳಸುವ ಅಕ್ರಮ ದಂಧೆಗೆ ಇಳಿದಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕುಲಂಕುಶವಾಗಿ ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಲಿ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹಲವು ಸಂಘಟನೆಗಳ ಸಹಕಾರದೊಂದಿಗೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

Ramesh Babu

Journalist

Recent Posts

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

3 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

7 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

7 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

10 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

12 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

24 hours ago