ದೇವನಹಳ್ಳಿ: ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸಿಂಗರಹಳ್ಳಿ ಗ್ರಾಮದ ಸರ್ವೆ ನಂಬರ್ -6 ರಲ್ಲಿ ಸುಮಾರು 60 ಅಕ್ರಮ ಸೈಟುಗಳು ಶ್ರೀಮಂತ ಕುಟುಂಬದ ವ್ಯಕ್ತಿಗಳಿಗೆ ನಿವೇಶನ ರಹಿತರಂತೆ ಸೈಟುಗಳನ್ನು ಪಡೆದು ಅಕ್ರಮವಾಗಿ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ ಇದು ಗೋಮಾಳ ಜಮೀನು ಆಗಿದ್ದು ಉಳ್ಳವರೇ ಭೂ ಒತ್ತುವರಿ ಮಾಡಿದ್ದಾರೆ ಅವರ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ಕಠಿಣ ಕಾನೂನು ಕ್ರಮ ಜರುಗಿಸಿ ಎಂದು ಪ್ರಜಾ ವಿಮೋಚನಾ ಚಳುವಳಿ ಸ್ವಾಭಿಮಾನ ಸಂಘಟನೆಯ ರಾಜ್ಯ ಅಧ್ಯಕ್ಷ ಮುನಿಯ ಅಂಜಿನಪ್ಪ ಒತ್ತಾಯಿಸಿದ್ದಾರೆ.
ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪ್ರಜಾ ವಿಮೋಚನಾ ಚಳುವಳಿ ಸ್ವಾಭಿಮಾನ ,ಸಮತಾ ಸೈನಿಕ ದಳ,ಬಹುಜನ ಸೇವಾ ಸಮಿತಿ ಮತ್ತು ಜನಧ್ವನಿ ವೇದಿಕೆ
ಸೇರಿದಂತೆ ಹಲವು ಸಂಘಟನೆಗಳ ವತಿಯಿಂದ ಜಾಲಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿಂಗ್ರಹಳ್ಳಿಯ ಗೋಮಾಳ ಜಮೀನು ಒತ್ತುವರಿಯ ಕುರಿತು ಕಠಿಣ ಕ್ರಮಕ್ಕೆ ಒತ್ತಾಯಿಸಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ಭೂ ಒತ್ತುವರಿದಾರರಿಗೆ ಯಲಹಂಕ ತಾಲೂಕಿನಲ್ಲಿ ಸಾಕಷ್ಟು ವಾಸದ ಮನೆಗಳು ಅಂಗಡಿಗಳು ಮತ್ತು ಬಾಡಿಗೆ ನೀಡಿರುವ ಕಟ್ಟಡಗಳು ಇರುವುದಾಗಿ ತಿಳಿದು ಬಂದಿದೆ. ನಿರ್ಗತಿಕರೆಂದು ಹೇಳಿಕೊಂಡು ಅಕ್ರಮವಾಗಿ ಸಿಂಗ್ರಹಳ್ಳಿಯ ಗೋಮಾಳ ಜಾಗದಲ್ಲಿ ಏಕಾಏಕಿ ನಿವೇಶನಗಳನ್ನು ಕಟ್ಟಿಕೊಂಡು ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡುತ್ತಿರುವುದು ಎಷ್ಟು ಸರಿ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸದೇ ಸುಮ್ಮನಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
ಸಮತಾ ಸೈನಿಕ ದಳ ಸಂಘಟನೆಯ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಜಿ.ಸಿ ವೆಂಕಟರಮಣಪ್ಪ ಮಾತನಾಡಿ ಸುಮಾರು 60ಕ್ಕೂ ಹೆಚ್ಚು ಜನರು ಸರ್ಕಾರಿ ಗೋಮಾಳ ಜಮೀನನಲ್ಲಿ ಅಕ್ರಮವಾಗಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಸರ್ಕಾರದಿಂದ ಪ್ರಾಥಮಿಕವಾಗಿ ಹಕ್ಕು ಪತ್ರ ಹೊಂದಿರುವ ಮೂಲ ಮಂಜೂರು ದಾರರಿಗೆ ಮೊದಲ ಪ್ರಾಮುಖ್ಯತೆ ನೀಡಿ ಅವರಿಗೆ ಜಮೀನನ್ನು ನೀಡದೆ ಕಂದಾಯ ಅಧಿಕಾರಿಗಳು ಸರ್ವೇ ನಂ. 6ರಲ್ಲಿ ಜಾಗವಿಲ್ಲವೆಂದು ಹೇಳುತ್ತಿದ್ದಾರೆ .
ಬಲಾಢ್ಯರ ಮೋಜು-ಮಸ್ತಿಗಾಗಿ ಗೋಮಾಳ ಜಮೀನನ್ನು ರಾಜಾರೋಷವಾಗಿ ಬಳಸುವ ಅಕ್ರಮ ದಂಧೆಗೆ ಇಳಿದಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕುಲಂಕುಶವಾಗಿ ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಲಿ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹಲವು ಸಂಘಟನೆಗಳ ಸಹಕಾರದೊಂದಿಗೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…
. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…
ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…
ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…
ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…