Categories: ಕೋಲಾರ

ಸಿಎಂಆರ್ ಶ್ರೀನಾಥ್ ನೇತೃತ್ವದಲ್ಲಿ ಮಂಡಿಯಲ್ಲಿ ಶ್ರೀರಾಮೋತ್ಸವ

ಕೋಲಾರ: ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ನಗರದ ಸಿಎಂಆರ್ ಟಮೋಟ ಮಂಡಿಯಲ್ಲಿ ಸೋಮವಾರ ಶ್ರೀರಾಮನಿಗೆ ವಿಶೇಷ ಪೂಜೆಯೊಂದಿಗೆ ಮಜ್ಜಿಗೆ, ಪಾನಕ, ಕೊಸಂಬಿ, ಅನ್ನದಾಸೋಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಠಾಪನೆ ಈಡೀ ದೇಶದ ರಾಮ ಭಕ್ರದಲ್ಲಿ ಸಂಭ್ರಮ ಮಾಡಿದೆ, ಎಲ್ಲೆಡೆ ಅನ್ನದಾಸೋಹ, ವಿಶೇಷ ಪೂಜೆಗಳನ್ನು ನಡೆಯುತ್ತಿವೆ. ಕಳೆದ 500 ವರ್ಷಗಳಿಂದ ಮಾಡಿದ ಹೋರಾಟವು ಇವತ್ತು ಸಾರ್ಥಕವಾಗಿದೆ. ದೇಶದ ಪ್ರಧಾನಿಯೊಂದಿಗೆ ನಾವು ಎಲ್ಲರೂ ಶ್ರೀರಾಮ ಮಂದಿರ ಉದ್ಘಾಟನೆಗೆ ಸಾಕ್ಷಿಯಾಗಿದ್ದು ಹೆಮ್ಮೆಯಾಗಿದೆ ಎಂದು ತಿಳಿಸಿದರು.

ಪ್ರತಿಯೊಬ್ಬರಲ್ಲೂ ರಾಮನ ಸಂಭ್ರಮವು ಮನೆ ಮಾಡಿದೆ, ಈ ಸಂಭ್ರಮವನ್ನು ಕೋಟ್ಯಾಂತರ ಜನರು ಟಿವಿಯ ಮೂಲಕ ವೀಕ್ಷಣೆ ಮಾಡುತ್ತಿದ್ದು, ಸಾವಿರಾರು ಜನರು ಅಯೋಧ್ಯೆಗೆ ಹೋಗಿದ್ದಾರೆ. ನಗರದ ಹಲವೆಡೆಗಳಲ್ಲಿ ಎಲ್ಇಡಿ ಸ್ಕ್ರೀನ್ ಹಾಕಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಮ್ಮ ರಾಮ ನಮ್ಮ ಮನೆಗೆ ಬಂದಿದ್ದಾರೆಂಬ ಭಾವನೆ ಜನರಲ್ಲಿದೆ. ಈ ಮೂಲಕ ಎಲ್ಲರ ಮನೆ ಮನಗಳಲ್ಲಿ ರಾಮ ವಿಜೃಂಭಿಸುತ್ತಿದ್ದಾನೆ. ಈ ಸಾಧನೆಗೆ ಕಾರಣವಾದ ಪ್ರತಿಯೊಬ್ಬರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಯುವ ಮುಖಂಡ ಸಿಎಂಆರ್ ಹರೀಶ್, ಕೋಲಾರ- ಚಿಕ್ಕಬಳ್ಳಾಪುರ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್ ಗಣೇಶ್, ಜೆಡಿಎಸ್ ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ಲಕ್ಷ್ಮೀಸಾಗರ ಜಿ ಸುನಿಲ್ ಕುಮಾರ್, ಬಲಿಜ ಸಂಘದ ಮುಖಂಡ ತೋಟಗಳ ಅಶೋಕ್, ರೋಟರಿ ಸುಧಾಕರ್ ಸೇರಿದಂತೆ ಜೆಡಿಎಸ್‌ ಮುಖಂಡರು ಕಾರ್ಯಕರ್ತರು, ಸಿಎಂಆರ್ ಮಂಡಿ ಸಿಬ್ಬಂದಿ ವರ್ಗ ಇದ್ದರು

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

11 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

15 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

22 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

23 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago